ಹಳೆ ದ್ವೇಷ ಶಂಕೆ: ತಂದೆ-ತಾಯಿ, ಮಗನ ಬರ್ಬರ ಹತ್ಯೆ

ಬೆಳಗಾವಿ: ಬೈಲಹೊಂಗಲ ತಾಲೂಕಿನ ದೊಡ್ಡವಾಡ ಗ್ರಾಮದಲ್ಲಿ ತಂದೆ-ತಾಯಿ, ಮಗನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಶಾಂತವ್ವ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾದ ದುರ್ದೈವಿಗಳು. ಮನೆಯಲ್ಲಿದ್ದ ದಂಪತಿ ಹಾಗು ಮಗನನ್ನು ತಡರಾತ್ರಿ 6 ಜನ ದುಷ್ಕರ್ಮಿಗಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮನೆಯ ಪಕ್ಕದಲ್ಲಿನ ಜಾಗ ಸಂಬಂಧ ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ದೊಡ್ಡವಾಡ ಪೊಲೀಸರು ಭೇಟಿ ಪರಿಶೀಲನೆ […]

ಹಳೆ ದ್ವೇಷ ಶಂಕೆ: ತಂದೆ-ತಾಯಿ, ಮಗನ ಬರ್ಬರ ಹತ್ಯೆ
ಸಾಧು ಶ್ರೀನಾಥ್​

Updated on: Jan 19, 2020 | 1:59 PM

ಬೆಳಗಾವಿ: ಬೈಲಹೊಂಗಲ ತಾಲೂಕಿನ ದೊಡ್ಡವಾಡ ಗ್ರಾಮದಲ್ಲಿ ತಂದೆ-ತಾಯಿ, ಮಗನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಶಾಂತವ್ವ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾದ ದುರ್ದೈವಿಗಳು.

ಮನೆಯಲ್ಲಿದ್ದ ದಂಪತಿ ಹಾಗು ಮಗನನ್ನು ತಡರಾತ್ರಿ 6 ಜನ ದುಷ್ಕರ್ಮಿಗಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮನೆಯ ಪಕ್ಕದಲ್ಲಿನ ಜಾಗ ಸಂಬಂಧ ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ದೊಡ್ಡವಾಡ ಪೊಲೀಸರು ಭೇಟಿ ಪರಿಶೀಲನೆ ನೀಡಿದ್ದಾರೆ. ಜನವರಿ 30ರಂದು ಶಿವಾನಂದ ಮಗ ವಿನೋದ್ ಮದುವೆ ನಿಶ್ಚಯವಾಗಿತ್ತು. ಮದುವೆ ಕಾರ್ಡ್ ಪ್ರಿಂಟ್ ಮಾಡಿಸಿದ್ದ ವಿನೋದ್ ಕುಟುಂಬಸ್ಥರು ಮದುವೆ ಸಿದ್ಧತೆಯಲ್ಲಿದ್ದರು.


Published On - 11:56 am, Sun, 19 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us