AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಹಾಕಿಸಿಕೊಂಡ್ರೂ ಕೊರೊನಾ ಬಿಡಲಿಲ್ಲ; ಒಂದೇ ವಾರಕ್ಕೆ 56 ವರ್ಷದ ಮಹಿಳೆ ಸಾವು

ಕಳೆದ ಗುರುವಾರ ವ್ಯಾಕ್ಸಿನ್ ಹಾಕಿಸಿಕೊಂಡಿದ್ದ ಮಹಿಳೆ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಂಡ ಕೆಲ ದಿನಗಳ ನಂತರ ಮಹಿಳೆಗೆ ಕೆಮ್ಮು ಜ್ವರ ಬಂದಿತ್ತು, ಹುಷಾರಿರಲಿಲ್ಲ ಹೀಗಾಗಿ ಆಸ್ಪತ್ರೆಗೆ ಹೋಗಿ ಚೆಕ್ ಮಾಡಿಸಿದ್ದಾರೆ. ಆಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಲಸಿಕೆ ಹಾಕಿಸಿಕೊಂಡ್ರೂ ಕೊರೊನಾ ಬಿಡಲಿಲ್ಲ; ಒಂದೇ ವಾರಕ್ಕೆ 56 ವರ್ಷದ ಮಹಿಳೆ ಸಾವು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:Apr 22, 2021 | 4:05 PM

Share

ಬೆಂಗಳೂರು: ಕೊರೊನಾ ಬರಬಾರದು ಎಂದು ಕೊರೊನಾ ಲಸಿಕೆ ಹಾಕಿಸಿಕೊಂಡ್ರು. ಆದ್ರೆ ಲಸಿಕೆ ಪಡೆದ ಒಂದು ವಾರಕ್ಕೆ ಮಹಿಳೆ ಮೃತಪಟ್ಟಿದ್ದಾರೆ. 56 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿರುವ ಘಟನೆ ನಡೆದಿದೆ.

ಕಳೆದ ಗುರುವಾರ ವ್ಯಾಕ್ಸಿನ್ ಹಾಕಿಸಿಕೊಂಡಿದ್ದ ಮಹಿಳೆ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಂಡ ಕೆಲ ದಿನಗಳ ನಂತರ ಮಹಿಳೆಗೆ ಕೆಮ್ಮು ಜ್ವರ ಬಂದಿತ್ತು, ಹುಷಾರಿರಲಿಲ್ಲ ಹೀಗಾಗಿ ಆಸ್ಪತ್ರೆಗೆ ಹೋಗಿ ಚೆಕ್ ಮಾಡಿಸಿದ್ದಾರೆ. ಆಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಳಿಕ ಆಸ್ಪತ್ರೆಗೆ ಸೇರಿಸೋದಕ್ಕೆ ಸಾಕಷ್ಟು ಪ್ರಯತ್ನ ಪಟ್ವಿದ್ದಾರೆ. ಆದ್ರೆ ಬಿಬಿಎಂಪಿ ಯಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಕೊನೆಗೆ ಮಹಿಳೆ ಮನೆಯಲ್ಲೇ ಇದ್ದು ನಿನ್ನೆ ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಸತ್ತ ಮೇಲೆ ಕೊರೊನಾ ಮೃತರಿಗೆ ಯಾವ ರೀತಿ ಅಂತ್ಯಕ್ರಿಯೆ ಮಾಡಬೇಕು ಎಂಬುವುದೂ ತಿಳಿಯದೆ ಕುಟುಂಬಸ್ಥರು ಪರದಾಡಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿದಿದ್ದರೆ ಮಹಿಳೆ ಬದುಕುಳಿತಿದ್ರು ಎಂದು ಸುಮನಹಳ್ಳಿ ಚಿತಾಗಾರ ಮುಂದೆ ಮೃತಳ ಸಂಬಂಧಿ ಅಳಲು ತೋಡಿಕೊಂಡಿದ್ದಾರೆ.

ಇನ್ನು ಮತ್ತೊಂದು ಕಡೆ ಐಸಿಯುನಲ್ಲಿ ಅಡ್ಮಿಟ್ ಮಾಡಿರುವ ಪೇಷಂಟ್ ಸ್ಥಿತಿ ಕಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಜೊತೆಗೆ ಆಸ್ಪತ್ರೆ ಬಳಿ ತಮ್ಮ ಸಂಬಂಧಿಗಳನ್ನ ಕಳೆದುಕೊಂಡಿರೋರು ಕಣ್ಣೀರು ಹಾಕುತ್ತಿದ್ದಾರೆ. ಸರಿಯಾದ ಸಮಯಕ್ಕೆ ಬೆಡ್ ಸಿಕ್ಕಿದ್ರೆ ಬದುಕುಳಿಯುತ್ತಿದ್ರು ಅಂತ ಅಳಲು ತೋಡಿಕೊಳ್ತಿದ್ದಾರೆ. ಆಸ್ಪತ್ರೆ ಮುಂಭಾಗದಲ್ಲಿ ರೋಗಿ ಕುಟುಂಬದವರ ಗೋಳು ಕೇಳೋರಿಲ್ಲ. ಅಪ್ಪನಿಗೆ ಸೀರಿಯಸ್ ಆಗಿರೋದನ್ನ ಕಂಡು ದುಖಿಸುತ್ತಿರೋ ಮಗ ಹಾಗೂ ತಾಯಿ. ಐಸಿಯು ಮುಂದೆ ಕೆಮ್ಮುತ್ತ ಕಣ್ಣೀರಿಡ್ತಿರೋ ವ್ಯಕ್ತಿ. ಇಂತಹ ದೃಶ್ಯಗಳು ಬೆಂಗಳೂರಿನಲ್ಲಿ ಸಾಮಾನವಾಗಿದೆ. ನಗರದ ಪ್ರತಿ ಆಸ್ಪತ್ರೆ ಮುಂದೆ ಇಂತಹ ದೃಶ್ಯಗಳು ನಡೆಯುತ್ತಿವೆ. ಬೆಂಗಳೂರಿನ ಸ್ಥಿತಿ ತುಂಬಾ ಹೀನಾಯವಾಗಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದರೂ ಅನಾರೋಗ್ಯ.. ಗಂಟಲು ದ್ರವ ಪರೀಕ್ಷೆಗೆ ಕೊಟ್ಟು ಮನೆಗೆ ಬಂದ ವೃದ್ಧ ಕುಸಿದು ಬಿದ್ದು ಸಾವು

Published On - 3:20 pm, Thu, 22 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!