AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ

ಚಿಕ್ಕಬಳ್ಳಾಪುರ: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ರಕ್ತಚಂದನ ಮರಗಳ್ಳರನ್ನ ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾರಿನಲ್ಲಿ ರಕ್ತಚಂದನ ಮರದ ತುಂಡು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚೇಸ್ ಮಾಡಿ ಕಾರಿಗೆ ಅಧಿಕಾರಿಗಳ ಜೀಪಿಂದ ಡಿಕ್ಕಿ ಹೊಡೆಸಿ ಸೆರೆಹಿಡಿಯಲಾಗಿದೆ. ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ರಕ್ತಚಂದನವನ್ನು ಆಂಧ್ರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು. ಈ ವೇಳೆ ದೊಡ್ಡಪೈಯಲಗುರ್ಕಿಯಿಂದ ಆರೋಪಿಗಳ ಕಾರನ್ನು ಪೊಲೀಸ್ ಜೀಪ್ ಚೇಸ್ ಮಾಡಿದೆ. ಚಿಕ್ಕಬಳ್ಳಾಪುರವರೆಗೂ ಕಾರು ಚೇಸ್ ಮಾಡಿದ್ದ ಅಧಿಕಾರಿಗಳು ಕಾರು ನಿಲ್ಲಿಸುವಂತೆ […]

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 22, 2020 | 3:23 PM

Share

ಚಿಕ್ಕಬಳ್ಳಾಪುರ: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ರಕ್ತಚಂದನ ಮರಗಳ್ಳರನ್ನ ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾರಿನಲ್ಲಿ ರಕ್ತಚಂದನ ಮರದ ತುಂಡು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚೇಸ್ ಮಾಡಿ ಕಾರಿಗೆ ಅಧಿಕಾರಿಗಳ ಜೀಪಿಂದ ಡಿಕ್ಕಿ ಹೊಡೆಸಿ ಸೆರೆಹಿಡಿಯಲಾಗಿದೆ.

ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ರಕ್ತಚಂದನವನ್ನು ಆಂಧ್ರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು. ಈ ವೇಳೆ ದೊಡ್ಡಪೈಯಲಗುರ್ಕಿಯಿಂದ ಆರೋಪಿಗಳ ಕಾರನ್ನು ಪೊಲೀಸ್ ಜೀಪ್ ಚೇಸ್ ಮಾಡಿದೆ. ಚಿಕ್ಕಬಳ್ಳಾಪುರವರೆಗೂ ಕಾರು ಚೇಸ್ ಮಾಡಿದ್ದ ಅಧಿಕಾರಿಗಳು ಕಾರು ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಆರೋಪಿಗಳು ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ.

ಈ ವೇಳೆ ಆರೋಪಿಗಳ ಕಾರಿಗೆ ಪೊಲೀಸ್ ಜೀಪ್ ಗುದ್ದಿಸಿ ಇಬ್ಬರನ್ನು ಬಂಧಿಸಿಲಾಗಿದೆ. ಪೊಲೀಸರು 20 ಲಕ್ಷ ರೂ. ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ. ಇನ್ನು ಅಪಘಾತದಲ್ಲಿ ಒಬ್ಬ ಆರೋಪಿಗೆ ಗಾಯಗಳಾಗಿದ್ದು ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಬಚಾವ್ ಆಗಿದ್ದಾರೆ.

Published On - 2:05 pm, Thu, 22 October 20

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು