AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ

ಚಿಕ್ಕಬಳ್ಳಾಪುರ: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ರಕ್ತಚಂದನ ಮರಗಳ್ಳರನ್ನ ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾರಿನಲ್ಲಿ ರಕ್ತಚಂದನ ಮರದ ತುಂಡು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚೇಸ್ ಮಾಡಿ ಕಾರಿಗೆ ಅಧಿಕಾರಿಗಳ ಜೀಪಿಂದ ಡಿಕ್ಕಿ ಹೊಡೆಸಿ ಸೆರೆಹಿಡಿಯಲಾಗಿದೆ. ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ರಕ್ತಚಂದನವನ್ನು ಆಂಧ್ರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು. ಈ ವೇಳೆ ದೊಡ್ಡಪೈಯಲಗುರ್ಕಿಯಿಂದ ಆರೋಪಿಗಳ ಕಾರನ್ನು ಪೊಲೀಸ್ ಜೀಪ್ ಚೇಸ್ ಮಾಡಿದೆ. ಚಿಕ್ಕಬಳ್ಳಾಪುರವರೆಗೂ ಕಾರು ಚೇಸ್ ಮಾಡಿದ್ದ ಅಧಿಕಾರಿಗಳು ಕಾರು ನಿಲ್ಲಿಸುವಂತೆ […]

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ
ಆಯೇಷಾ ಬಾನು
| Edited By: |

Updated on:Oct 22, 2020 | 3:23 PM

Share

ಚಿಕ್ಕಬಳ್ಳಾಪುರ: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ರಕ್ತಚಂದನ ಮರಗಳ್ಳರನ್ನ ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾರಿನಲ್ಲಿ ರಕ್ತಚಂದನ ಮರದ ತುಂಡು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚೇಸ್ ಮಾಡಿ ಕಾರಿಗೆ ಅಧಿಕಾರಿಗಳ ಜೀಪಿಂದ ಡಿಕ್ಕಿ ಹೊಡೆಸಿ ಸೆರೆಹಿಡಿಯಲಾಗಿದೆ.

ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ರಕ್ತಚಂದನವನ್ನು ಆಂಧ್ರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು. ಈ ವೇಳೆ ದೊಡ್ಡಪೈಯಲಗುರ್ಕಿಯಿಂದ ಆರೋಪಿಗಳ ಕಾರನ್ನು ಪೊಲೀಸ್ ಜೀಪ್ ಚೇಸ್ ಮಾಡಿದೆ. ಚಿಕ್ಕಬಳ್ಳಾಪುರವರೆಗೂ ಕಾರು ಚೇಸ್ ಮಾಡಿದ್ದ ಅಧಿಕಾರಿಗಳು ಕಾರು ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಆರೋಪಿಗಳು ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ.

ಈ ವೇಳೆ ಆರೋಪಿಗಳ ಕಾರಿಗೆ ಪೊಲೀಸ್ ಜೀಪ್ ಗುದ್ದಿಸಿ ಇಬ್ಬರನ್ನು ಬಂಧಿಸಿಲಾಗಿದೆ. ಪೊಲೀಸರು 20 ಲಕ್ಷ ರೂ. ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ. ಇನ್ನು ಅಪಘಾತದಲ್ಲಿ ಒಬ್ಬ ಆರೋಪಿಗೆ ಗಾಯಗಳಾಗಿದ್ದು ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಬಚಾವ್ ಆಗಿದ್ದಾರೆ.

Published On - 2:05 pm, Thu, 22 October 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ