AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಇ-ಶಿಕ್ಷಣದ ಮೂಲಸೌಕರ್ಯಕ್ಕೆ ಬೇಕು ಆದ್ಯತೆ

ಆನ್​ಲೈನ್​ ಶಿಕ್ಷಣಕ್ಕೆ ಬೇಕಾಗುವ ಸ್ಮಾರ್ಟ್​ಫೋನ್​ ಮತ್ತು ಕಂಪ್ಯೂಟರ್​ ವ್ಯವಸ್ಥೆಯಿಂದ ಅನೇಕ ಶಾಲೆಗಳು ವಂಚಿತವಾಗಿವೆ. ಇದು ಆನ್​ಲೈನ್​ ಶಿಕ್ಷಣಕ್ಕೆ ತೀವ್ರ ಹಿನ್ನಡೆ ಉಂಟು ಮಾಡಿದೆ ಎಂಬುದು ತಜ್ಞರ ಮಾತು.

Budget 2021 | ಇ-ಶಿಕ್ಷಣದ ಮೂಲಸೌಕರ್ಯಕ್ಕೆ ಬೇಕು ಆದ್ಯತೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 31, 2021 | 8:36 PM

Share

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ (ಫೆ.1) ಬಜೆಟ್​ ಮಂಡನೆ ಮಾಡಲಿದ್ದಾರೆ. ಅನೇಕ ಕ್ಷೇತ್ರಗಳು ಈಗಾಗಲೇ ಕೊರೊನಾದಿಂದ ತತ್ತರಿಸಿವೆ. ಈ ಕ್ಷೇತ್ರಗಳಿಗೆ ಕೇಂದ್ರದಿಂದ ದೊಡ್ಡ ಮಟ್ಟದ ಸಹಕಾರ ಸಿಗುವ ನಿರೀಕ್ಷೆ ಇದೆ. ಇನ್ನು ಭಾರತದ ಆರ್ಥಿಕತೆಗೆ ಹೊಸ ಚೈತನ್ಯ ನೀಡಲು ಈ ಬಾರಿಯ ಬಜೆಟ್​ ತುಂಬಾನೇ ಮಹತ್ವ ಪಡೆದುಕೊಂಡಿದೆ.

2020ರಲ್ಲಿ ಕೊರೊನಾ ವೈರಸ್​ನಿಂದ ಶಿಕ್ಷಣ ಕ್ಷೇತ್ರವೂ ಏಟನ್ನು ತಿಂದಿದೆ. ಆದರೆ, ತಂತ್ರಜ್ಞಾನದ ಸಹಾಯದಿಂದ ದೇಶದ ಬಹುತೇಕ ಶಾಲಾ-ಕಾಲೇಜುಗಳು ಆನ್​ಲೈನ್​ ಮೂಲಕ ತರಗತಿ ನಡೆಸುತ್ತಿವೆ. ಬೇಸರದ ಸಂಗತಿ ಎಂದರೆ ಅನೇಕ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆಯಿಂದಾಗಿ ಶಿಕ್ಷಕರು ಆನ್​ಲೈನ್​ ತರಗತಿ ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಸರ್ಕಾರಿ ಕಾಲೇಜುಗಳ ಬಗ್ಗೆ ಗಮನ ಹರಿಸುವ ಕೆಲಸ ಆಗಬೇಕಿದೆ ಎಂದು ತಜ್ಞರು ಆಗ್ರಹ ಮಾಡಿದ್ದಾರೆ.

2020ರಲ್ಲಿ ಎಲ್ಲಾ ಕ್ಷೇತ್ರಗಳ ಆಲೋಚನೆಗಳು ಬದಲಾಗಿವೆ. ಶಾಲಾ-ಕಾಲೇಜುಗಳು ಸಂಪೂರ್ಣವಾಗಿ ಬಂದ್​ ಆದಾಗ ಆನ್​ಲೈನ್​ ಕಲಿಕೆಗೆ ಆದ್ಯತೆ ನೀಡಲಾಯಿತು. ಲೈವ್​ ಆನ್​ಲೈನ್​ ತರಗತಿಯಿಂದ ವಿದ್ಯಾರ್ಥಿಗಳು ಸಾಕಷ್ಟು ವಿಚಾರಗಳನ್ನು ಕಲಿತಿದ್ದಾರೆ. ಆನ್​ಲೈನ್​ ತರಗತಿಗೆ ತಂತ್ರಜ್ಞಾನ ಅತ್ಯಗತ್ಯವಾಗಿದ್ದು, ಈ ಬಾರಿ ಶಿಕ್ಷಣ ಕ್ಷೇತ್ರದಲ್ಲಿ ಆನ್​ಲೈನ್​ ಪ್ಲಾಟ್​ ಫಾರ್ಮ್​ಗಳು ತುಂಬಾನೇ ಪ್ರಮುಖ ಪಾತ್ರವಹಿಸಿದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇಂದಿಗೂ ಸಾಕಷ್ಟು ಗ್ರಾಮಗಳಲ್ಲಿ ಇಂಟರ್​ನೆಟ್​ ಸೇವೆ ಇಲ್ಲ. ಮೊಬೈಲ್​ ನೆಟ್ವರ್ಕ್​ ಬರುವುದಿಲ್ಲ. ಇದು ಆನ್​​ಲೈನ್​ ಕಲಿಕೆಗೆ ಹಿನ್ನಡೆ ಉಂಟು ಮಾಡಿದೆ. ಇದರ ಜತೆಗೆ ಭಾರತದ ಸಾಕಷ್ಟು ಶಾಲೆಗಳಲ್ಲಿ ಮೂಲ ಸೌಕರ್ಯವಿಲ್ಲ. ಆನ್​ಲೈನ್​ ಶಿಕ್ಷಣಕ್ಕೆ ಬೇಕಾಗುವ ಸ್ಮಾರ್ಟ್​ಫೋನ್​ ಮತ್ತು ಕಂಪ್ಯೂಟರ್​ ವ್ಯವಸ್ಥೆಯಿಂದ ಅನೇಕ ಶಾಲೆಗಳು ವಂಚಿತವಾಗಿವೆ. ಇದು ಆನ್​ಲೈನ್​ ಶಿಕ್ಷಣಕ್ಕೆ ತೀವ್ರ ಹಿನ್ನಡೆ ಉಂಟು ಮಾಡಿದೆ ಎಂಬುದು ತಜ್ಞರ ಮಾತು.

ಈ ಬಾರಿಯ ಬಜೆಟ್​ನಲ್ಲಿ ಶಾಲೆಗಳ ಡಿಜಿಟಲೀಕರಣದತ್ತ ಹೆಚ್ಚು ಒತ್ತು ನೀಡಬೇಕು. ಶಾಲೆಗಳಿಗೆ ಬೇಕಾಗಿರುವ ಡಿಜಿಟಲ್​ ಮೂಲಸೌಕರ್ಯವನ್ನು ಸರ್ಕಾರವೇ ಒದಗಿಸಬೇಕು. ಅನೇಕ ವಿದ್ಯಾರ್ಥಿಗಳಿಗೆ ಮೊಬೈಲ್​ ತೆಗೆದುಕೊಳ್ಳಲು ಹಣ ಇರುವುದಿಲ್ಲ. ಅಂಥವರನ್ನು ಗುರುತಿಸಿ ಸರ್ಕಾರವೇ ಮೊಬೈಲ್​ ಅಥವಾ ಟ್ಯಾಬ್​ ನೀಡುವ ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ಈ ಬಾರಿಯ ಬಜೆಟ್​ನಲ್ಲಿ ಘೋಷಣೆ ಆಗಬೇಕು ಎಂದು ಶಿಕ್ಷಣ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ದುಡಿಯುವ ಭರವಸೆ ಬಿತ್ತುವುದೇ ನಿರ್ಮಲಾ ಸೀತಾರಾಮನ್ ಎದುರಿಗಿರುವ ಅತಿದೊಡ್ಡ ಸವಾಲು

ವಿದ್ಯಾರ್ಥಿಗಳು (ಪಿಟಿಐ ಚಿತ್ರ)

ಖಾಸಗಿ ಸಹಭಾಗಿತ್ವಕ್ಕೆ ಬೇಕು ಆದ್ಯತೆ ಈಗಾಗಲೇ ಸರ್ಕಾರಿ ಶಾಲೆಗಳು ಮೂಲ ಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಕರ ಕೊರತೆಯಿಂದ ಬಳಲುತ್ತಿವೆ. ಲಾಕ್​ಡೌನ್​ ಎನ್ನುವುದು ಮಕ್ಕಳ ಮೇಲೆ ತುಂಬಾನೇ ಪರಿಣಾಮ ಬೀರಿದೆ. ಹೀಗಾಗಿ, ಸರ್ಕಾರಿ ಶಾಲೆಗಳು ಖಾಸಗಿ ಸಹಭಾಗಿತ್ವ ಹೊಂದುವುದರ ಮೂಲಕ ಕಲಿಕೆಯಲ್ಲಿ ಉನ್ನತಿ ಹೊಂದಲು ಸಾಧ್ಯ. ಇದನ್ನು ಆದಷ್ಟು ಬೇಗ ಜಾರಿಗೆ ತರಬೇಕಿದೆ. ಇದಕ್ಕಾಗಿ ಪ್ರಾಯೋಗಿಕ ನಿಧಿ ಸರ್ಕಾರ ಸ್ಥಾಪನೆ ಮಾಡಬೇಕು. ಈ ಮೂಲಕ ಸರ್ಕಾರಿ ಶಾಲೆಗಳು ಖಾಸಗಿ ಸಹಭಾಗಿತ್ವ ಹೊಂದಲು ಸಹಾಯ ಮಾಡಬೇಕು ಎಂದು ತಜ್ಞರು ಸೂಚನೆ ನೀಡಿದ್ದಾರೆ.

ಪ್ರತಿ ಶಾಲೆಗೂ ಬೇಕು ಅಂತರ್ಜಾಲದ ಸಂಪರ್ಕ ಈಗಾಗಲೇ ಬಹುತೇಕ ಶಾಲೆಗಳು ಅಂತರ್ಜಾಲ ವ್ಯವಸ್ಥೆಯನ್ನು ಹೊಂದಿವೆ. ಆದರೆ, ಹಳ್ಳಿ ಭಾಗದ ಶಾಲೆಗಳಿಗೆ ಇಂಟರ್​ನೆಟ್​ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇಂತ ಶಾಲೆಗಳನ್ನು ಗುರುತಿಸಿ ಅವರಿಗೆ ಇಂಟರ್​ನೆಟ್​ ಸೇವೆ ನೀಡಬೇಕು. ಈ ಬಾರಿಯ ಬಜೆಟ್​ನಲ್ಲಿ ಈ ಕೆಲಸ ಆಗಬೇಕು ಎಂದು ಶಿಕ್ಷಣ ಪಂಡಿತರು ಆಗ್ರಹಿಸಿದ್ದಾರೆ.

ಶಿಕ್ಷಣದಲ್ಲಿ ತಂತ್ರಜ್ಞಾನ ಎನ್ನುವುದು ಈ ಮೊದಲಿನಿಂದಲೂ ಬೆಳವಣಿಗೆ ಕಾಣುತ್ತಾ ಬಂದಿದೆ. ಕೊರೊನಾ ಸಂದರ್ಭದಲ್ಲಿ ಇದು ಸಾಕಷ್ಟು ಪಟ್ಟು ದ್ವಿಗುಣವಾಗಿದೆ. ಹೀಗಾಗಿ, ಸರ್ಕಾರ ಇ-ಕಲಿಕೆಗೆ ಹೆಚ್ಚು ಒತ್ತು ನೀಡಬೇಕು. ಎಲ್ಲಾ ಶಾಲೆಗಳಿಗೆ ಲ್ಯಾಪ್​ಟಾಪ್​, ಟ್ಯಾಬ್ಲೆಟ್​, ಸ್ಮಾರ್ಟ್​ಫೋನ್​ಒದಗಿಸಬೇಕು. ಇದಕ್ಕಾಗಿ ಪ್ರತ್ಯೇಕವಾಗಿ ಅನುದಾನ ನೀಡಬೇಕಿದೆ. ಈ ಬಾರಿಯ ಬಜೆಟ್​ನಲ್ಲಿ ಈ ನಿರೀಕ್ಷೆಗಳನ್ನು ನಾವು ಮಾಡುತ್ತಿದ್ದೇವೆ ಎಂದು ಶಿಕ್ಷಣ ತಜ್ಞರು ಹೇಳಿದ್ದಾರೆ. ಈ ಬಾರಿ ಶಿಕ್ಷಣ ಕ್ಷೇತ್ರ ಕೊರೊನಾದಿಂದ ಹೊಡೆತ ತಿಂದಿದೆ. ಹೀಗಾಗಿ, ಸಾಕಷ್ಟು ಬದಲಾವಣೆಗಳು ಶಿಕ್ಷಣ ಕ್ಷೇತ್ರದಲ್ಲಿ ಆಗಬೇಕಿದೆ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನವನ್ನು ಸರ್ಕಾರ ಹೆಚ್ಚಿಸಬೇಕಿದೆ ಎಂದು ಶಿಕ್ಷಣ ಪಂಡಿತರು ಆಗ್ರಹಿಸಿದ್ದಾರೆ.

Budget 2021 Explainer | ಬಜೆಟ್ ಅರ್ಥವಾಗಲು ಇವಿಷ್ಟೂ ಪದಗಳ ವಿವರ ನಿಮಗೆ ಗೊತ್ತಿರಬೇಕು

Budget 2021 | ನಿರ್ಮಲಾ ಸೀತಾರಾಮನ್ ಬಹುನಿರೀಕ್ಷಿತ ಬಜೆಟ್​ನಲ್ಲಿ ಏನು ನಿರೀಕ್ಷಿಸಬಹುದು?

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ