AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ವಿತ್ತೀಯ ಕೊರತೆ ಸರಿದೂಗಿಸಲು ನಿರ್ಮಲಾ ಸೀತಾರಾಮನ್ ಹೆಣಗಾಟ

2020-21ರ ಬಜೆಟ್ ಅಂದಾಜಿನ ಖರ್ಚುಗಳನ್ನು ತುಂಬಿಕೊಳ್ಳಲು ಸರ್ಕಾರಕ್ಕೆ ಇನ್ನೂ ₹ 80,000 ಕೋಟಿ ಅವಶ್ಯಕತೆಯಿದೆ. ಮುಂಬರುವ ದಿನಗಳಲ್ಲಿ ಸರ್ಕಾರ ಅದನ್ನು ಸಾಲವಾಗಿ ಪಡೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

Budget 2021 | ವಿತ್ತೀಯ ಕೊರತೆ ಸರಿದೂಗಿಸಲು ನಿರ್ಮಲಾ ಸೀತಾರಾಮನ್ ಹೆಣಗಾಟ
ಸಂಸತ್ತಿನಲ್ಲಿ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on: Feb 01, 2021 | 4:14 PM

Share

ನವದೆಹಲಿ: ಸಂಸತ್ತಿನಲ್ಲಿ ಇಂದು ಬಜೆಟ್ 2021 ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020-21 ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆ (fiscal deficit) ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) ಶೇಕಡಾ 9.5 ರಷ್ಟಿದೆ. ಕೊವಿಡ್-19 ಪಿಡುಗಿನಿಂದಾಗಿ ಆದಾಯ ಸಂಗ್ರಹ ಪ್ರಮಾಣ ಬಹಳಷ್ಟು ಕ್ಷೀಣಿಸಿದೆ ಎಂದು ವಿವರಿಸಿದರು.

2021-22ರ ಹಣಕಾಸಿನ ವರ್ಷಕ್ಕೆ ವಿತ್ತೀಯ ಕೊರತೆ ಶೇಕಡಾ 6.8ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ ಎಂದ ನಿರ್ಮಲಾ ಸೀತಾರಾಮನ್ ಸರ್ಕಾರದ ಬಂಡವಾಳ ವೆಚ್ಚದಲ್ಲಿ (Capital Expenditure) ಈ ಬಾರಿ ತೀವ್ರ ಸ್ವರೂಪದ ಏರಿಕೆ ಮಾಡುವ ಉದ್ದೇಶ ಪ್ರಸ್ತಾಪಿಸಿದರು. ಈ ವರ್ಷ ₹ 5.54 ಲಕ್ಷ ಕೋಟಿ ಬಂಡವಾಳ ವೆಚ್ಚದ ಉದ್ದೇಶವಿದೆ. ಕಳೆದ ವರ್ಷದ ಬಜೆಟ್​ಗೆ ಹೋಲಿಸಿದರೆ ಇದು ಶೇ 34.5ರಷ್ಟು ಹೆಚ್ಚು ಎಂದು ಮಾಹಿತಿ ನೀಡಿದರು.

2020-21ರ ಬಜೆಟ್ ಅಂದಾಜಿನ ಖರ್ಚುಗಳನ್ನು ತುಂಬಿಕೊಳ್ಳಲು ಸರ್ಕಾರಕ್ಕೆ ಇನ್ನೂ ₹ 80,000 ಕೋಟಿ ಅವಶ್ಯಕತೆಯಿದೆ. ಮುಂಬರುವ ದಿನಗಳಲ್ಲಿ ಸರ್ಕಾರ ಅದನ್ನು ಸಾಲವಾಗಿ ಪಡೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಕೇಂದ್ರವು ರಾಜ್ಯ ಸರ್ಕಾರ ಮತ್ತು ಇತರ ಸ್ವಾಯತ್ತ ಸಂಸ್ಥೆಗಳಿಗೆ ಅವುಗಳ ಬಂಡವಾಳ ವೆಚ್ಚಕ್ಕಾಗಿ ₹ 2 ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಿದೆ ಎಂದು ನಿರ್ಮಲಾ ಹೇಳಿದರು.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಮೊದಲ ತ್ರೈಮಾಸಿಕದಲ್ಲಿ ಜಾರಿಗೊಳಿಸಲಾದ ಕಟ್ಟುನಿಟ್ಟಿನ ಲಾಕ್​ಡೌನ್​ನಿಂದಾಗಿ ಭಾರತದ ವಿತ್ತೀಯ ಕೊರತೆಯ ಗುರಿಯು ಕಳೆದ ಜುಲೈ ತಿಂಗಳಲ್ಲೇ ಮೀರಿತ್ತು. ಡಿಸೆಂಬರ್ 2020ರ ಹೊತ್ತಿಗೆ ಅದು ಸಂಪೂರ್ಣ ವರ್ಷದ ಬಜೆಟ್ ಅಂದಾಜಿನ ಶೇಕಡಾ 145.5 ರಷ್ಟು ಅಂದರೆ ₹ 11.58 ಲಕ್ಷ ಕೋಟಿಗೆ ಹೆಚ್ಚಾಗಿತ್ತು.

‘ವಿತ್ತೀಯ ಹೊಣೆಗಾರಿಕೆ ಮತ್ತು ಬಜೆಟ್ ನಿರ್ವಹಣೆ ಕಾಯ್ದೆ (ಎಫ್​ಆರ್​ಬಿಎಮ್ ಆ್ಯಕ್ಟ್) ಅನ್ವಯ ಮಾರ್ಚ್ 31, 2021 ರ ಹೊತ್ತಿಗೆ ಜಿಡಿಪಿಯ ಶೇಕಡಾ 3ರಷ್ಟನ್ನು ನಿಯಂತ್ರಿಸಲಿದೆ ಎನ್ನುವುದು ನಮಗೆ ಗೊತ್ತಿದೆ. ಆದರೆ ಕೊವಿಡ್-19 ಪಿಡುಗಿನಿಂದ ಸೃಷ್ಟಿಯಾಗಿರುವ ಸ್ಥಿತಿಯು ನಾವು ಬೇರೆ ದಾರಿಯನ್ನು ಹುಡುಕಿಕೊಳ್ಳುವಂತೆ ಮಾಡಿದೆ. ಈ ಕುರಿತು ನಾನು ಹೇಳಿಕೆಯೊಂದನ್ನು ಸಂಸತ್ತಿನಲ್ಲಿ ನೀಡಲಿದ್ದೇನೆ. ಎಫ್​ಆರ್​ಬಿಎಮ್ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ನಾವು ಮಾಡಲಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಾ ಹೇಳಿದರು.

Budget 2021 LIVE: ಆದಾಯ ತೆರಿಗೆ ನಿಯಮದಲ್ಲಿ ಬದಲಾವಣೆ ಇಲ್ಲ.. ಹಿರಿಯ ನಾಗರಿಕರಿಗೆ ಐಟಿ ರಿಟರ್ನ್​ ಸಲ್ಲಿಕೆ ವಿನಾಯ್ತಿ

Budget 2021 | ಮನೆ ಖರೀದಿದಾರರಿಗೆ ಬಿಗ್​ ರಿಲೀಫ್​, ಗೃಹಸಾಲದ ವಿನಾಯ್ತಿಗಳು ವಿಸ್ತರಣೆ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್