AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ವಿತ್ತೀಯ ಕೊರತೆ ಸರಿದೂಗಿಸಲು ನಿರ್ಮಲಾ ಸೀತಾರಾಮನ್ ಹೆಣಗಾಟ

2020-21ರ ಬಜೆಟ್ ಅಂದಾಜಿನ ಖರ್ಚುಗಳನ್ನು ತುಂಬಿಕೊಳ್ಳಲು ಸರ್ಕಾರಕ್ಕೆ ಇನ್ನೂ ₹ 80,000 ಕೋಟಿ ಅವಶ್ಯಕತೆಯಿದೆ. ಮುಂಬರುವ ದಿನಗಳಲ್ಲಿ ಸರ್ಕಾರ ಅದನ್ನು ಸಾಲವಾಗಿ ಪಡೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

Budget 2021 | ವಿತ್ತೀಯ ಕೊರತೆ ಸರಿದೂಗಿಸಲು ನಿರ್ಮಲಾ ಸೀತಾರಾಮನ್ ಹೆಣಗಾಟ
ಸಂಸತ್ತಿನಲ್ಲಿ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಅರುಣ್​ ಕುಮಾರ್​ ಬೆಳ್ಳಿ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 01, 2021 | 4:14 PM

Share

ನವದೆಹಲಿ: ಸಂಸತ್ತಿನಲ್ಲಿ ಇಂದು ಬಜೆಟ್ 2021 ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020-21 ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆ (fiscal deficit) ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) ಶೇಕಡಾ 9.5 ರಷ್ಟಿದೆ. ಕೊವಿಡ್-19 ಪಿಡುಗಿನಿಂದಾಗಿ ಆದಾಯ ಸಂಗ್ರಹ ಪ್ರಮಾಣ ಬಹಳಷ್ಟು ಕ್ಷೀಣಿಸಿದೆ ಎಂದು ವಿವರಿಸಿದರು.

2021-22ರ ಹಣಕಾಸಿನ ವರ್ಷಕ್ಕೆ ವಿತ್ತೀಯ ಕೊರತೆ ಶೇಕಡಾ 6.8ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ ಎಂದ ನಿರ್ಮಲಾ ಸೀತಾರಾಮನ್ ಸರ್ಕಾರದ ಬಂಡವಾಳ ವೆಚ್ಚದಲ್ಲಿ (Capital Expenditure) ಈ ಬಾರಿ ತೀವ್ರ ಸ್ವರೂಪದ ಏರಿಕೆ ಮಾಡುವ ಉದ್ದೇಶ ಪ್ರಸ್ತಾಪಿಸಿದರು. ಈ ವರ್ಷ ₹ 5.54 ಲಕ್ಷ ಕೋಟಿ ಬಂಡವಾಳ ವೆಚ್ಚದ ಉದ್ದೇಶವಿದೆ. ಕಳೆದ ವರ್ಷದ ಬಜೆಟ್​ಗೆ ಹೋಲಿಸಿದರೆ ಇದು ಶೇ 34.5ರಷ್ಟು ಹೆಚ್ಚು ಎಂದು ಮಾಹಿತಿ ನೀಡಿದರು.

2020-21ರ ಬಜೆಟ್ ಅಂದಾಜಿನ ಖರ್ಚುಗಳನ್ನು ತುಂಬಿಕೊಳ್ಳಲು ಸರ್ಕಾರಕ್ಕೆ ಇನ್ನೂ ₹ 80,000 ಕೋಟಿ ಅವಶ್ಯಕತೆಯಿದೆ. ಮುಂಬರುವ ದಿನಗಳಲ್ಲಿ ಸರ್ಕಾರ ಅದನ್ನು ಸಾಲವಾಗಿ ಪಡೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಕೇಂದ್ರವು ರಾಜ್ಯ ಸರ್ಕಾರ ಮತ್ತು ಇತರ ಸ್ವಾಯತ್ತ ಸಂಸ್ಥೆಗಳಿಗೆ ಅವುಗಳ ಬಂಡವಾಳ ವೆಚ್ಚಕ್ಕಾಗಿ ₹ 2 ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಿದೆ ಎಂದು ನಿರ್ಮಲಾ ಹೇಳಿದರು.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಮೊದಲ ತ್ರೈಮಾಸಿಕದಲ್ಲಿ ಜಾರಿಗೊಳಿಸಲಾದ ಕಟ್ಟುನಿಟ್ಟಿನ ಲಾಕ್​ಡೌನ್​ನಿಂದಾಗಿ ಭಾರತದ ವಿತ್ತೀಯ ಕೊರತೆಯ ಗುರಿಯು ಕಳೆದ ಜುಲೈ ತಿಂಗಳಲ್ಲೇ ಮೀರಿತ್ತು. ಡಿಸೆಂಬರ್ 2020ರ ಹೊತ್ತಿಗೆ ಅದು ಸಂಪೂರ್ಣ ವರ್ಷದ ಬಜೆಟ್ ಅಂದಾಜಿನ ಶೇಕಡಾ 145.5 ರಷ್ಟು ಅಂದರೆ ₹ 11.58 ಲಕ್ಷ ಕೋಟಿಗೆ ಹೆಚ್ಚಾಗಿತ್ತು.

‘ವಿತ್ತೀಯ ಹೊಣೆಗಾರಿಕೆ ಮತ್ತು ಬಜೆಟ್ ನಿರ್ವಹಣೆ ಕಾಯ್ದೆ (ಎಫ್​ಆರ್​ಬಿಎಮ್ ಆ್ಯಕ್ಟ್) ಅನ್ವಯ ಮಾರ್ಚ್ 31, 2021 ರ ಹೊತ್ತಿಗೆ ಜಿಡಿಪಿಯ ಶೇಕಡಾ 3ರಷ್ಟನ್ನು ನಿಯಂತ್ರಿಸಲಿದೆ ಎನ್ನುವುದು ನಮಗೆ ಗೊತ್ತಿದೆ. ಆದರೆ ಕೊವಿಡ್-19 ಪಿಡುಗಿನಿಂದ ಸೃಷ್ಟಿಯಾಗಿರುವ ಸ್ಥಿತಿಯು ನಾವು ಬೇರೆ ದಾರಿಯನ್ನು ಹುಡುಕಿಕೊಳ್ಳುವಂತೆ ಮಾಡಿದೆ. ಈ ಕುರಿತು ನಾನು ಹೇಳಿಕೆಯೊಂದನ್ನು ಸಂಸತ್ತಿನಲ್ಲಿ ನೀಡಲಿದ್ದೇನೆ. ಎಫ್​ಆರ್​ಬಿಎಮ್ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ನಾವು ಮಾಡಲಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಾ ಹೇಳಿದರು.

Budget 2021 LIVE: ಆದಾಯ ತೆರಿಗೆ ನಿಯಮದಲ್ಲಿ ಬದಲಾವಣೆ ಇಲ್ಲ.. ಹಿರಿಯ ನಾಗರಿಕರಿಗೆ ಐಟಿ ರಿಟರ್ನ್​ ಸಲ್ಲಿಕೆ ವಿನಾಯ್ತಿ

Budget 2021 | ಮನೆ ಖರೀದಿದಾರರಿಗೆ ಬಿಗ್​ ರಿಲೀಫ್​, ಗೃಹಸಾಲದ ವಿನಾಯ್ತಿಗಳು ವಿಸ್ತರಣೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!