AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಕೊರೊನಾ ಕಾಲದಲ್ಲಿ ಜನರ ನೆರವಿಗೆ ಬಂದ ಯೋಜನೆಗಳಿವು

ಸಾಂಕ್ರಾಮಿಕ ರೋಗ ಹರಡುತ್ತಿದ್ದಂತೆ ದೇಶದಲ್ಲಿನ ಜನರ ಬಳಲಾಟಕ್ಕೆ ಸರ್ಕಾರ ಕೊರೊನಾ ಪ್ರಾಕೇಜ್​ಗಳನ್ನು ನೀಡಲಾರಂಭಿಸಿತು. ಇದು ಎಷ್ಟರ ಮಟ್ಟಿಗೆ ಸಹಾಯಕವಾಗಿದೆ. ವಲಸೆ ಕಾರ್ಮಿಕರ ಪರಿಸ್ಥಿತಿ ಹೇಗಿತ್ತು? ಸ್ವಯಂ ಉದ್ಯೋಗದಲ್ಲಿ ಜನರು ಹೇಗೆ ತೊಡಗಿಕೊಂಡಿದ್ದರು? ಪ್ರವಾಸೋದ್ಯಮ ಹಾಗೂ ಹೋಟೆಲ್​ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದವರ ಪರಿಸ್ಥಿತಿ ಏನಾಗಿತ್ತು?

Budget 2021 | ಕೊರೊನಾ ಕಾಲದಲ್ಲಿ ಜನರ ನೆರವಿಗೆ ಬಂದ ಯೋಜನೆಗಳಿವು
ತಮ್ಮ ಊರುಗಳಿಗೆ ಹಿಂದಿರುಗಲು ಕಾದಿರುವ ವಲಸೆ ಕಾರ್ಮಿಕರು
shruti hegde
| Edited By: |

Updated on: Jan 29, 2021 | 12:06 PM

Share

Covid 19 ಸಾಂಕ್ರಾಮಿಕ ರೋಗದ ಭೀತಿ ದೇಶವನ್ನು ಆವರಿಸಿದ್ದಾಗ ಕೇಂದ್ರ ಸರ್ಕಾರ ಹಲವು ಕ್ರಮಗಳ ಮೂಲಕ ಜನರ ನೆರವಿಗೆ ಧಾವಿಸಿತ್ತು. ಕೊರೊನಾ ಪ್ಯಾಕೇಜ್​ ರೂಪದಲ್ಲಿ ಜನರಿಗೆ ತುರ್ತು ನೆರವು ಲಭಿಸಿ. ಸರ್ಕಾರ ಘೋಷಿಸಿದ ಕೊರೊನಾ ಪ್ಯಾಕೇಜ್​ಗಳನ್ನು ನೆನಪಿಸುವ ಪ್ರಯತ್ನ ಇಲ್ಲಿದೆ.

ಸರ್ಕಾರ ಕೊಟ್ಟ ಕೊರೊನಾ ಪ್ಯಾಕೇಜ್ ಮಾಹಿತಿ – ಬಡವರ ಸಹಾಯಕ್ಕಾಗಿ ಕೇಂದ್ರ ಸರ್ಕಾರ ₹ 1.7 ಲಕ್ಷ ಕೋಟಿ ಮೊತ್ತದ ಪ್ಯಾಕೆಜ್ ಘೋಷಿಸಿತ್ತು. ನೇರ ನಗದು ವರ್ಗಾವಣೆ ಮತ್ತು ಆಹಾರ ಪೂರೈಕೆಗೆ ಈ ಮೊತ್ತ ಬಳಸುವ ಉದ್ದೇಶ ಹೊಂದಿತ್ತು.

– ನರ್ಸ್​ಗಳು, ಸಫಾಯಿ ಕರ್ಮಚಾರಿಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ₹ 50 ಲಕ್ಷ ಆರೊಗ್ಯವಿಮೆ ಘೋಷಿಸಲಾಯಿತು.

– ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ 80 ಕೋಟಿ ಪಡಿತರ ಚೀಟಿದಾರರಿಗೆ 5 ಕೆ.ಜಿ ಗೋಧಿ ಹಾಗೂ ಅಕ್ಕಿ 3 ತಿಂಗಳವರೆಗೆ ನೀಡಲಾಗಿದೆ.

– ಜನಧನ ಖಾತೆಯನ್ನು ಹೊಂದಿರುವ 20 ಕೋಟಿ ಮಹಿಳೆಯರಿಗೆ ತಿಂಗಳಿಗೆ ₹ 500 ನೀಡಲಾಯಿತು.

– ಉಜ್ವಲಾ ಯೋಜನೆಯಡಿಯಲ್ಲಿ 3 ತಿಂಗಳು ಉಚಿತ ಅಡುಗೆ ಅನಿಲ ಪೂರೈಕೆಯನ್ನು 8.3 ಕೋಟಿ ಜನರಿಗೆ ತಲುಪಿಸಲಾಯಿತು.

– ನಗರಗಳಿಂದ ವಲಸೆ ಕಾರ್ಮಿಕರು ಹಳ್ಳಿಗಳಿಗೆ ಹಿಂದಿರುಗಿದ ಹಿನ್ನೆಲೆಯಲ್ಲಿ ನರೇಗಾ ಯೋಜನೆಗೆ ಹೆಚ್ಚು ಒತ್ತು ನೀಡುವ ಮೂಲಕ ಅವರಿಗೆ ಕೆಲಸ ಕೊಡಿಸಲು ₹ 202 ಕೋಟಿ ಮಂಜೂರು ಮಾಡಲಾಯಿತು.

– ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ₹ 6000 ಮೊತ್ತವನ್ನು ಅವರ ಖಾತೆಗಳಿಗೆ ವರ್ಗಾವಣೆ ಮಾಡಲಾಯಿತು.

– ವಿಧವೆಯರು, ಅಂಗವಿಕಲರು ಮತ್ತು ವೃದ್ಧರಿಗೆ ತಿಂಗಳಿಗೆ ₹ 1000ದಂತೆ 3 ತಿಂಗಳು ಹೆಚ್ಚುವರಿ ಪಿಂಚಣಿ ನೀಡಲಾಯಿತು.

– 100 ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳಲ್ಲಿನ ಉದ್ಯೋಗಿಗಳು ತಮ್ಮ ಇಪಿಎಫ್​ನಲ್ಲಿ ಶೇ 75 ರಷ್ಟು ಅಥವಾ ₹ 1 ಲಕ್ಷದವರೆಗಿನ ಮೊತ್ತ ಹಿಂಪಡೆಯಲು ಅವಕಾಶ ಕಲ್ಪಿಸಲಾಯಿತು.

– ಕಾರ್ಮಿಕ ಕಲ್ಯಾಣ ನಿಧಿಯ ಮೂಲಕ ₹ 31,000 ಕೋಟಿಯಷ್ಟು ಮೊತ್ತವನ್ನು 3.5 ಕೋಟಿ ಕಟ್ಟಡ ಕಾರ್ಮಿಕರಿಗೆ ಮತ್ತು ಗಣಿ ಕಾರ್ಮಿಕರ ಅನುಕೂಲಕ್ಕೆ ಬಳಸಲಾಯಿತು.

Budget 2021 ನಿರೀಕ್ಷೆ | ಈ ವರ್ಷದ ಬಜೆಟ್​ನಿಂದ ಮಹಿಳೆಯರು ಬಯಸುತ್ತಿರುವುದೇನು?

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?