AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಕೊರೊನಾ ಕಾಲದಲ್ಲಿ ಜನರ ನೆರವಿಗೆ ಬಂದ ಯೋಜನೆಗಳಿವು

ಸಾಂಕ್ರಾಮಿಕ ರೋಗ ಹರಡುತ್ತಿದ್ದಂತೆ ದೇಶದಲ್ಲಿನ ಜನರ ಬಳಲಾಟಕ್ಕೆ ಸರ್ಕಾರ ಕೊರೊನಾ ಪ್ರಾಕೇಜ್​ಗಳನ್ನು ನೀಡಲಾರಂಭಿಸಿತು. ಇದು ಎಷ್ಟರ ಮಟ್ಟಿಗೆ ಸಹಾಯಕವಾಗಿದೆ. ವಲಸೆ ಕಾರ್ಮಿಕರ ಪರಿಸ್ಥಿತಿ ಹೇಗಿತ್ತು? ಸ್ವಯಂ ಉದ್ಯೋಗದಲ್ಲಿ ಜನರು ಹೇಗೆ ತೊಡಗಿಕೊಂಡಿದ್ದರು? ಪ್ರವಾಸೋದ್ಯಮ ಹಾಗೂ ಹೋಟೆಲ್​ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದವರ ಪರಿಸ್ಥಿತಿ ಏನಾಗಿತ್ತು?

Budget 2021 | ಕೊರೊನಾ ಕಾಲದಲ್ಲಿ ಜನರ ನೆರವಿಗೆ ಬಂದ ಯೋಜನೆಗಳಿವು
ತಮ್ಮ ಊರುಗಳಿಗೆ ಹಿಂದಿರುಗಲು ಕಾದಿರುವ ವಲಸೆ ಕಾರ್ಮಿಕರು
Follow us
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 29, 2021 | 12:06 PM

Covid 19 ಸಾಂಕ್ರಾಮಿಕ ರೋಗದ ಭೀತಿ ದೇಶವನ್ನು ಆವರಿಸಿದ್ದಾಗ ಕೇಂದ್ರ ಸರ್ಕಾರ ಹಲವು ಕ್ರಮಗಳ ಮೂಲಕ ಜನರ ನೆರವಿಗೆ ಧಾವಿಸಿತ್ತು. ಕೊರೊನಾ ಪ್ಯಾಕೇಜ್​ ರೂಪದಲ್ಲಿ ಜನರಿಗೆ ತುರ್ತು ನೆರವು ಲಭಿಸಿ. ಸರ್ಕಾರ ಘೋಷಿಸಿದ ಕೊರೊನಾ ಪ್ಯಾಕೇಜ್​ಗಳನ್ನು ನೆನಪಿಸುವ ಪ್ರಯತ್ನ ಇಲ್ಲಿದೆ.

ಸರ್ಕಾರ ಕೊಟ್ಟ ಕೊರೊನಾ ಪ್ಯಾಕೇಜ್ ಮಾಹಿತಿ – ಬಡವರ ಸಹಾಯಕ್ಕಾಗಿ ಕೇಂದ್ರ ಸರ್ಕಾರ ₹ 1.7 ಲಕ್ಷ ಕೋಟಿ ಮೊತ್ತದ ಪ್ಯಾಕೆಜ್ ಘೋಷಿಸಿತ್ತು. ನೇರ ನಗದು ವರ್ಗಾವಣೆ ಮತ್ತು ಆಹಾರ ಪೂರೈಕೆಗೆ ಈ ಮೊತ್ತ ಬಳಸುವ ಉದ್ದೇಶ ಹೊಂದಿತ್ತು.

– ನರ್ಸ್​ಗಳು, ಸಫಾಯಿ ಕರ್ಮಚಾರಿಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ₹ 50 ಲಕ್ಷ ಆರೊಗ್ಯವಿಮೆ ಘೋಷಿಸಲಾಯಿತು.

– ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ 80 ಕೋಟಿ ಪಡಿತರ ಚೀಟಿದಾರರಿಗೆ 5 ಕೆ.ಜಿ ಗೋಧಿ ಹಾಗೂ ಅಕ್ಕಿ 3 ತಿಂಗಳವರೆಗೆ ನೀಡಲಾಗಿದೆ.

– ಜನಧನ ಖಾತೆಯನ್ನು ಹೊಂದಿರುವ 20 ಕೋಟಿ ಮಹಿಳೆಯರಿಗೆ ತಿಂಗಳಿಗೆ ₹ 500 ನೀಡಲಾಯಿತು.

– ಉಜ್ವಲಾ ಯೋಜನೆಯಡಿಯಲ್ಲಿ 3 ತಿಂಗಳು ಉಚಿತ ಅಡುಗೆ ಅನಿಲ ಪೂರೈಕೆಯನ್ನು 8.3 ಕೋಟಿ ಜನರಿಗೆ ತಲುಪಿಸಲಾಯಿತು.

– ನಗರಗಳಿಂದ ವಲಸೆ ಕಾರ್ಮಿಕರು ಹಳ್ಳಿಗಳಿಗೆ ಹಿಂದಿರುಗಿದ ಹಿನ್ನೆಲೆಯಲ್ಲಿ ನರೇಗಾ ಯೋಜನೆಗೆ ಹೆಚ್ಚು ಒತ್ತು ನೀಡುವ ಮೂಲಕ ಅವರಿಗೆ ಕೆಲಸ ಕೊಡಿಸಲು ₹ 202 ಕೋಟಿ ಮಂಜೂರು ಮಾಡಲಾಯಿತು.

– ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ₹ 6000 ಮೊತ್ತವನ್ನು ಅವರ ಖಾತೆಗಳಿಗೆ ವರ್ಗಾವಣೆ ಮಾಡಲಾಯಿತು.

– ವಿಧವೆಯರು, ಅಂಗವಿಕಲರು ಮತ್ತು ವೃದ್ಧರಿಗೆ ತಿಂಗಳಿಗೆ ₹ 1000ದಂತೆ 3 ತಿಂಗಳು ಹೆಚ್ಚುವರಿ ಪಿಂಚಣಿ ನೀಡಲಾಯಿತು.

– 100 ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳಲ್ಲಿನ ಉದ್ಯೋಗಿಗಳು ತಮ್ಮ ಇಪಿಎಫ್​ನಲ್ಲಿ ಶೇ 75 ರಷ್ಟು ಅಥವಾ ₹ 1 ಲಕ್ಷದವರೆಗಿನ ಮೊತ್ತ ಹಿಂಪಡೆಯಲು ಅವಕಾಶ ಕಲ್ಪಿಸಲಾಯಿತು.

– ಕಾರ್ಮಿಕ ಕಲ್ಯಾಣ ನಿಧಿಯ ಮೂಲಕ ₹ 31,000 ಕೋಟಿಯಷ್ಟು ಮೊತ್ತವನ್ನು 3.5 ಕೋಟಿ ಕಟ್ಟಡ ಕಾರ್ಮಿಕರಿಗೆ ಮತ್ತು ಗಣಿ ಕಾರ್ಮಿಕರ ಅನುಕೂಲಕ್ಕೆ ಬಳಸಲಾಯಿತು.

Budget 2021 ನಿರೀಕ್ಷೆ | ಈ ವರ್ಷದ ಬಜೆಟ್​ನಿಂದ ಮಹಿಳೆಯರು ಬಯಸುತ್ತಿರುವುದೇನು?

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್