AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಕೊರೊನಾ ಕಾಲದಲ್ಲಿ ಜನರ ನೆರವಿಗೆ ಬಂದ ಯೋಜನೆಗಳಿವು

ಸಾಂಕ್ರಾಮಿಕ ರೋಗ ಹರಡುತ್ತಿದ್ದಂತೆ ದೇಶದಲ್ಲಿನ ಜನರ ಬಳಲಾಟಕ್ಕೆ ಸರ್ಕಾರ ಕೊರೊನಾ ಪ್ರಾಕೇಜ್​ಗಳನ್ನು ನೀಡಲಾರಂಭಿಸಿತು. ಇದು ಎಷ್ಟರ ಮಟ್ಟಿಗೆ ಸಹಾಯಕವಾಗಿದೆ. ವಲಸೆ ಕಾರ್ಮಿಕರ ಪರಿಸ್ಥಿತಿ ಹೇಗಿತ್ತು? ಸ್ವಯಂ ಉದ್ಯೋಗದಲ್ಲಿ ಜನರು ಹೇಗೆ ತೊಡಗಿಕೊಂಡಿದ್ದರು? ಪ್ರವಾಸೋದ್ಯಮ ಹಾಗೂ ಹೋಟೆಲ್​ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದವರ ಪರಿಸ್ಥಿತಿ ಏನಾಗಿತ್ತು?

Budget 2021 | ಕೊರೊನಾ ಕಾಲದಲ್ಲಿ ಜನರ ನೆರವಿಗೆ ಬಂದ ಯೋಜನೆಗಳಿವು
ತಮ್ಮ ಊರುಗಳಿಗೆ ಹಿಂದಿರುಗಲು ಕಾದಿರುವ ವಲಸೆ ಕಾರ್ಮಿಕರು
shruti hegde
| Edited By: |

Updated on: Jan 29, 2021 | 12:06 PM

Share

Covid 19 ಸಾಂಕ್ರಾಮಿಕ ರೋಗದ ಭೀತಿ ದೇಶವನ್ನು ಆವರಿಸಿದ್ದಾಗ ಕೇಂದ್ರ ಸರ್ಕಾರ ಹಲವು ಕ್ರಮಗಳ ಮೂಲಕ ಜನರ ನೆರವಿಗೆ ಧಾವಿಸಿತ್ತು. ಕೊರೊನಾ ಪ್ಯಾಕೇಜ್​ ರೂಪದಲ್ಲಿ ಜನರಿಗೆ ತುರ್ತು ನೆರವು ಲಭಿಸಿ. ಸರ್ಕಾರ ಘೋಷಿಸಿದ ಕೊರೊನಾ ಪ್ಯಾಕೇಜ್​ಗಳನ್ನು ನೆನಪಿಸುವ ಪ್ರಯತ್ನ ಇಲ್ಲಿದೆ.

ಸರ್ಕಾರ ಕೊಟ್ಟ ಕೊರೊನಾ ಪ್ಯಾಕೇಜ್ ಮಾಹಿತಿ – ಬಡವರ ಸಹಾಯಕ್ಕಾಗಿ ಕೇಂದ್ರ ಸರ್ಕಾರ ₹ 1.7 ಲಕ್ಷ ಕೋಟಿ ಮೊತ್ತದ ಪ್ಯಾಕೆಜ್ ಘೋಷಿಸಿತ್ತು. ನೇರ ನಗದು ವರ್ಗಾವಣೆ ಮತ್ತು ಆಹಾರ ಪೂರೈಕೆಗೆ ಈ ಮೊತ್ತ ಬಳಸುವ ಉದ್ದೇಶ ಹೊಂದಿತ್ತು.

– ನರ್ಸ್​ಗಳು, ಸಫಾಯಿ ಕರ್ಮಚಾರಿಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ₹ 50 ಲಕ್ಷ ಆರೊಗ್ಯವಿಮೆ ಘೋಷಿಸಲಾಯಿತು.

– ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ 80 ಕೋಟಿ ಪಡಿತರ ಚೀಟಿದಾರರಿಗೆ 5 ಕೆ.ಜಿ ಗೋಧಿ ಹಾಗೂ ಅಕ್ಕಿ 3 ತಿಂಗಳವರೆಗೆ ನೀಡಲಾಗಿದೆ.

– ಜನಧನ ಖಾತೆಯನ್ನು ಹೊಂದಿರುವ 20 ಕೋಟಿ ಮಹಿಳೆಯರಿಗೆ ತಿಂಗಳಿಗೆ ₹ 500 ನೀಡಲಾಯಿತು.

– ಉಜ್ವಲಾ ಯೋಜನೆಯಡಿಯಲ್ಲಿ 3 ತಿಂಗಳು ಉಚಿತ ಅಡುಗೆ ಅನಿಲ ಪೂರೈಕೆಯನ್ನು 8.3 ಕೋಟಿ ಜನರಿಗೆ ತಲುಪಿಸಲಾಯಿತು.

– ನಗರಗಳಿಂದ ವಲಸೆ ಕಾರ್ಮಿಕರು ಹಳ್ಳಿಗಳಿಗೆ ಹಿಂದಿರುಗಿದ ಹಿನ್ನೆಲೆಯಲ್ಲಿ ನರೇಗಾ ಯೋಜನೆಗೆ ಹೆಚ್ಚು ಒತ್ತು ನೀಡುವ ಮೂಲಕ ಅವರಿಗೆ ಕೆಲಸ ಕೊಡಿಸಲು ₹ 202 ಕೋಟಿ ಮಂಜೂರು ಮಾಡಲಾಯಿತು.

– ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ₹ 6000 ಮೊತ್ತವನ್ನು ಅವರ ಖಾತೆಗಳಿಗೆ ವರ್ಗಾವಣೆ ಮಾಡಲಾಯಿತು.

– ವಿಧವೆಯರು, ಅಂಗವಿಕಲರು ಮತ್ತು ವೃದ್ಧರಿಗೆ ತಿಂಗಳಿಗೆ ₹ 1000ದಂತೆ 3 ತಿಂಗಳು ಹೆಚ್ಚುವರಿ ಪಿಂಚಣಿ ನೀಡಲಾಯಿತು.

– 100 ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳಲ್ಲಿನ ಉದ್ಯೋಗಿಗಳು ತಮ್ಮ ಇಪಿಎಫ್​ನಲ್ಲಿ ಶೇ 75 ರಷ್ಟು ಅಥವಾ ₹ 1 ಲಕ್ಷದವರೆಗಿನ ಮೊತ್ತ ಹಿಂಪಡೆಯಲು ಅವಕಾಶ ಕಲ್ಪಿಸಲಾಯಿತು.

– ಕಾರ್ಮಿಕ ಕಲ್ಯಾಣ ನಿಧಿಯ ಮೂಲಕ ₹ 31,000 ಕೋಟಿಯಷ್ಟು ಮೊತ್ತವನ್ನು 3.5 ಕೋಟಿ ಕಟ್ಟಡ ಕಾರ್ಮಿಕರಿಗೆ ಮತ್ತು ಗಣಿ ಕಾರ್ಮಿಕರ ಅನುಕೂಲಕ್ಕೆ ಬಳಸಲಾಯಿತು.

Budget 2021 ನಿರೀಕ್ಷೆ | ಈ ವರ್ಷದ ಬಜೆಟ್​ನಿಂದ ಮಹಿಳೆಯರು ಬಯಸುತ್ತಿರುವುದೇನು?

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!