ಮಧುಕರ್ ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ: ಸುಧೀರ್ ಅಂಗೂರ್ ಸೇರಿ 10 ಜನರ ವಿರುದ್ಧ FIR

ಆನೇಕಲ್: ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪದಡಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ. ಕಾಲೇಜ್ ಶುಲ್ಕ, ಟ್ಯೂಷನ್ ಫೀ, ಹಾಸ್ಟೆಲ್ ಫೀ ಎಂದು ಮಧುಕರ್ ಅವರ ನಕಲಿ ಸಹಿ ಬಳಸಿಕೊಂಡು ವಿದ್ಯಾರ್ಥಿಗಳ ಬಳಿ ಹಣ ವಸೂಲಿ ಮಾಡಿ ದುರುಪಯೋಗ ಮಾಡಿದ್ದಾರೆ ಎಂದು ಅಲಯನ್ಸ್ ವಿವಿ ಸಂಸ್ಥಾಪಕ ಮಧುಕರ್ ಅಂಗೂರ್‌ ದೂರು ದಾಖಲಿಸಿದ್ದರು. ದೂರು ಆಧರಿಸಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ. […]

ಮಧುಕರ್ ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ: ಸುಧೀರ್ ಅಂಗೂರ್ ಸೇರಿ 10 ಜನರ ವಿರುದ್ಧ FIR
ಆಯೇಷಾ ಬಾನು

Updated on: Oct 29, 2020 | 11:46 AM

ಆನೇಕಲ್: ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪದಡಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ.

ಕಾಲೇಜ್ ಶುಲ್ಕ, ಟ್ಯೂಷನ್ ಫೀ, ಹಾಸ್ಟೆಲ್ ಫೀ ಎಂದು ಮಧುಕರ್ ಅವರ ನಕಲಿ ಸಹಿ ಬಳಸಿಕೊಂಡು ವಿದ್ಯಾರ್ಥಿಗಳ ಬಳಿ ಹಣ ವಸೂಲಿ ಮಾಡಿ ದುರುಪಯೋಗ ಮಾಡಿದ್ದಾರೆ ಎಂದು ಅಲಯನ್ಸ್ ವಿವಿ ಸಂಸ್ಥಾಪಕ ಮಧುಕರ್ ಅಂಗೂರ್‌ ದೂರು ದಾಖಲಿಸಿದ್ದರು.

ದೂರು ಆಧರಿಸಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ. ಶೈಲಜಾ ಚಬ್ಬಿ, ಮಧುಕರ್ ಅಂಗೂರ್ ಮತ್ತು ಸುಧೀರ್ ಅಂಗೂರ್ ಅಕ್ಕ ತಮ್ಮಂದಿರು. ಅಲಯನ್ಸ್​ ವಿವಿ ಸಂಸ್ಥಾಪಕ ಉಪಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣದಲ್ಲಿ ಸುಧೀರ್ ಅಂಗೂರ್ ಜೈಲು ಪಾಲಾಗಿದ್ದಾರೆ. ಈ ಪ್ರಕರಣ ಸಂಬಂಧ ಆನೇಕಲ್ ಠಾಣೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಬೆಚ್ಚಿ ಬೀಳಿಸಿದ್ದ ಅಲೆಯನ್ಸ್‌ ವಿವಿ ಅಯ್ಯಪ್ಪ ದೊರೆ ಕೊಲೆ ಕೇಸ್

Published On - 11:38 am, Thu, 29 October 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us