AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ; ‘ತಾಂಡವ್’ ಚಿತ್ರತಂಡದ ವಿರುದ್ಧ ಬೆಂಗಳೂರಿನಲ್ಲಿ FIR

ತಾಂಡವ್ ವೆಬ್ ಸಿರಿಸ್​ನಲ್ಲಿ ಹಿಂದೂಗಳ ಪೂಜಿಸುವ ಶಿವನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಟರು ಕೆಟ್ಟ ಭಾಷೆಯ ಪ್ರಯೋಗ ಮಾಡಿದ್ದಾರೆ. ಹಿಂದೂ ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ರೀತಿ ಚಿತ್ರಿಸಲಾಗಿದೆ ಎಂದು ದೂರಲಾಗಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ; ‘ತಾಂಡವ್’ ಚಿತ್ರತಂಡದ ವಿರುದ್ಧ ಬೆಂಗಳೂರಿನಲ್ಲಿ FIR
ತಾಂಡವ್ ವೆಬ್ ಸಿರೀಸ್​ನ ಒಂದು ದೃಶ್ಯ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Jan 24, 2021 | 3:50 PM

Share

ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ ಆರೋಪದ ಮೇಲೆ ಬೆಂಗಳೂರಿನ ಸಮಾಜ ಸೇವಕರೊಬ್ಬರು ‘ತಾಂಡವ್’ ವೆಬ್​ ಸಿರಿಸ್​ನ ನಿರ್ದೇಶಕ, ನಿರ್ಮಾಪಕ ಮತ್ತು ಪ್ರಮುಖ ನಟರ ಮೇಲೆ ದೂರು ದಾಖಲಿಸಿದ್ದಾರೆ. ಈ ಸಂಬಂಧ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ತಾಂಡವ್ ವೆಬ್ ಸಿರಿಸ್​ನಲ್ಲಿ ಹಿಂದೂಗಳು ಪೂಜಿಸುವ ಶಿವನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ತೆರೆಯ ಮೇಲೆ ನಟಿಸಿರುವ ನಟರು ಕೆಟ್ಟ ಭಾಷೆಯ ಪ್ರಯೋಗ ಮಾಡಿದ್ದಾರೆ. ವೆಬ್ ಸಿರಿಸ್​ನಲ್ಲಿ ಹಿಂದೂ ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ಹಾಗೂ ನೋಯಿಸುವ ರೀತಿ ಚಿತ್ರಿಸಲಾಗಿದೆ ಎಂದು ಕಿರಣ್ ಆರಾಧ್ಯ ಎಂಬ ದೂರಿನಲ್ಲಿ ತಿಳಿಸಿದ್ದಾರೆ.

ನಿರ್ದೇಶಕ ಅಲಿ ಅಬ್ಬಾಸ್ ಜಾಫರ್, ನಿರ್ಮಾಪಕ ಫರ್ಹಾನ್ ಅಖ್ತರ್, ನಟರಾದ ಸೈಫ್ ಅಲಿ ಖಾನ್, ಮೊಹಮ್ಮದ್ ಜೀಶನ್ ಅಯೂಬ್ ಮತ್ತು ಅಪರ್ಣಾ ಪುರೋಹಿತ್​ರ ಹೆಸರಿನಲ್ಲಿ FIR ದಾಖಲಾಗಿದೆ. ‘ವಿವಾದಾತ್ಮಕ ದೃಶ್ಯಗಳನ್ನು ಇತ್ತೀಚೆಗೆ ತೆಗೆದುಹಾಕಲಾಗಿದೆ ಎಂದು ನಮಗೆ ತಿಳಿಸಿದ ನಂತರ ಹೆಚ್ಚಿನ ತನಿಖೆಗಾಗಿ ನಾವು ಕಾನೂನು ತಜ್ಜ್ಞರ ಅಭಿಪ್ರಾಯವನ್ನು ಕೋರಿದ್ದೇವೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಕೂಡ ತಾಂಡವ್ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಚಿತ್ರಿಸಲಾಗಿದೆ ಎನ್ನುವ ಆರೋಪ ಸಿನಿಮಾ ವಿರುದ್ಧ ಕೇಳಿ ಬಂದಿತ್ತು. ಆಗ ತಾಂಡವ್ ತಂಡ ಹೇಳಿಕೆ ಬಿಡುಗಡೆ ಮಾಡಿ ಕ್ಷಮೆಯಾಚಿಸಿತ್ತು.

ಜನರ ಬಳಿ ಬೇಷರತ್ ಕ್ಷಮೆ ಯಾಚಿಸಿದ ತಾಂಡವ್​ ಸಿನಿಮಾ ತಂಡ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್