AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ; ‘ತಾಂಡವ್’ ಚಿತ್ರತಂಡದ ವಿರುದ್ಧ ಬೆಂಗಳೂರಿನಲ್ಲಿ FIR

ತಾಂಡವ್ ವೆಬ್ ಸಿರಿಸ್​ನಲ್ಲಿ ಹಿಂದೂಗಳ ಪೂಜಿಸುವ ಶಿವನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಟರು ಕೆಟ್ಟ ಭಾಷೆಯ ಪ್ರಯೋಗ ಮಾಡಿದ್ದಾರೆ. ಹಿಂದೂ ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ರೀತಿ ಚಿತ್ರಿಸಲಾಗಿದೆ ಎಂದು ದೂರಲಾಗಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ; ‘ತಾಂಡವ್’ ಚಿತ್ರತಂಡದ ವಿರುದ್ಧ ಬೆಂಗಳೂರಿನಲ್ಲಿ FIR
ತಾಂಡವ್ ವೆಬ್ ಸಿರೀಸ್​ನ ಒಂದು ದೃಶ್ಯ
ಆಯೇಷಾ ಬಾನು
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 24, 2021 | 3:50 PM

Share

ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ ಆರೋಪದ ಮೇಲೆ ಬೆಂಗಳೂರಿನ ಸಮಾಜ ಸೇವಕರೊಬ್ಬರು ‘ತಾಂಡವ್’ ವೆಬ್​ ಸಿರಿಸ್​ನ ನಿರ್ದೇಶಕ, ನಿರ್ಮಾಪಕ ಮತ್ತು ಪ್ರಮುಖ ನಟರ ಮೇಲೆ ದೂರು ದಾಖಲಿಸಿದ್ದಾರೆ. ಈ ಸಂಬಂಧ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ತಾಂಡವ್ ವೆಬ್ ಸಿರಿಸ್​ನಲ್ಲಿ ಹಿಂದೂಗಳು ಪೂಜಿಸುವ ಶಿವನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ತೆರೆಯ ಮೇಲೆ ನಟಿಸಿರುವ ನಟರು ಕೆಟ್ಟ ಭಾಷೆಯ ಪ್ರಯೋಗ ಮಾಡಿದ್ದಾರೆ. ವೆಬ್ ಸಿರಿಸ್​ನಲ್ಲಿ ಹಿಂದೂ ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ಹಾಗೂ ನೋಯಿಸುವ ರೀತಿ ಚಿತ್ರಿಸಲಾಗಿದೆ ಎಂದು ಕಿರಣ್ ಆರಾಧ್ಯ ಎಂಬ ದೂರಿನಲ್ಲಿ ತಿಳಿಸಿದ್ದಾರೆ.

ನಿರ್ದೇಶಕ ಅಲಿ ಅಬ್ಬಾಸ್ ಜಾಫರ್, ನಿರ್ಮಾಪಕ ಫರ್ಹಾನ್ ಅಖ್ತರ್, ನಟರಾದ ಸೈಫ್ ಅಲಿ ಖಾನ್, ಮೊಹಮ್ಮದ್ ಜೀಶನ್ ಅಯೂಬ್ ಮತ್ತು ಅಪರ್ಣಾ ಪುರೋಹಿತ್​ರ ಹೆಸರಿನಲ್ಲಿ FIR ದಾಖಲಾಗಿದೆ. ‘ವಿವಾದಾತ್ಮಕ ದೃಶ್ಯಗಳನ್ನು ಇತ್ತೀಚೆಗೆ ತೆಗೆದುಹಾಕಲಾಗಿದೆ ಎಂದು ನಮಗೆ ತಿಳಿಸಿದ ನಂತರ ಹೆಚ್ಚಿನ ತನಿಖೆಗಾಗಿ ನಾವು ಕಾನೂನು ತಜ್ಜ್ಞರ ಅಭಿಪ್ರಾಯವನ್ನು ಕೋರಿದ್ದೇವೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಕೂಡ ತಾಂಡವ್ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಚಿತ್ರಿಸಲಾಗಿದೆ ಎನ್ನುವ ಆರೋಪ ಸಿನಿಮಾ ವಿರುದ್ಧ ಕೇಳಿ ಬಂದಿತ್ತು. ಆಗ ತಾಂಡವ್ ತಂಡ ಹೇಳಿಕೆ ಬಿಡುಗಡೆ ಮಾಡಿ ಕ್ಷಮೆಯಾಚಿಸಿತ್ತು.

ಜನರ ಬಳಿ ಬೇಷರತ್ ಕ್ಷಮೆ ಯಾಚಿಸಿದ ತಾಂಡವ್​ ಸಿನಿಮಾ ತಂಡ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!