AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ ಉಲ್ಲಂಘನೆ.. ಬೆಂಗಳೂರಿನ JW ಮ್ಯಾರಿಯೆಟ್ ಸೇರಿ 3 ಹೋಟೆಲ್​ಗಳ ವಿರುದ್ಧ FIR

ಹೋಟೆಲ್​ಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ JW ಮ್ಯಾರಿಯೆಟ್, ಇಂಡಿಗೋ ಎಕ್ಸ್​ಪಿ ಹೆಚ್​ಎಸ್​ಆರ್, ಕೋನ್ರಾಡ್ ಸೇರಿ 3 ಪ್ರತಿಷ್ಠಿತ ಹೋಟೆಲ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಕೊರೊನಾ ನಿಯಮ ಉಲ್ಲಂಘನೆ.. ಬೆಂಗಳೂರಿನ JW ಮ್ಯಾರಿಯೆಟ್ ಸೇರಿ 3 ಹೋಟೆಲ್​ಗಳ ವಿರುದ್ಧ FIR
JW ಮ್ಯಾರಿಯೆಟ್
ಆಯೇಷಾ ಬಾನು
| Edited By: |

Updated on: Mar 12, 2021 | 2:54 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಅಬ್ಬರ ಹೆಚ್ಚಾಗುವ ಸಾಧ್ಯತೆ ಕಂಡು ಬಂದಿದೆ. ಬೆಂಗಳೂರಿಗೆ ಕೊರೊನಾ 2ನೇ ಅಲೆಯ ಭೀತಿ ಹೆಚ್ಚಾಗಿದ್ದು ಈಗಾಗಲೇ ಹೋಟೆಲ್, ಪಬ್ ಅಂಡ್ ಬಾರ್, ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಕೊವಿಡ್ ನಿಯಮ ಪಾಲಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಆದ್ರೆ ಇದರ ನಡುವೆ ನಗರದ 3 ಪ್ರತಿಷ್ಠಿತ ಹೋಟೆಲ್​ಗಳು ಈ ನಿಯಮವನ್ನು ಉಲ್ಲಂಘಿಸಿದ್ದು ಹೋಟೆಲ್​ಗಳ ವಿರುದ್ಧ FIR ದಾಖಲಾಗಿದೆ.

ಹೋಟೆಲ್​ಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ JW ಮ್ಯಾರಿಯೆಟ್, ಇಂಡಿಗೋ ಎಕ್ಸ್​ಪಿ ಹೆಚ್​ಎಸ್​ಆರ್, ಕೋನ್ರಾಡ್ ಸೇರಿ 3 ಪ್ರತಿಷ್ಠಿತ ಹೋಟೆಲ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ಡಿಜೆ ಪಾರ್ಟಿಗೆ ಸೀಮಿತ ಜನರಿಗೆ ಮಾತ್ರ ಅವಕಾಶ ನೀಡುವಂತೆ ಸೂಚನೆ ಇದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚು ಜನರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಹೋಟೆಲ್​ಗಳ ಮೇಲೆ ಪ್ರಕರಣ ದಾಖಲಾಗಿದೆ. ಹಾಗೂ ರಾತ್ರಿ 3 ಗಂಟೆವರೆಗೂ ಡಿಜೆ ಪಾರ್ಟಿ ಆಯೋಜನೆ ಆರೋಪ ಕೇಳಿ ಬಂದಿದೆ.

ಅವಧಿ ಮೀರಿ ತಡರಾತ್ರಿವರೆಗೆ ಡಿಜೆ ಮ್ಯೂಸಿಕ್ ಶೋ ಮಾಡುತ್ತಿದ್ದ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ ಗಸ್ತಿನಲ್ಲಿದ್ದ ಇನ್ಸ್ಪೆಕ್ಟರ್ ಬಿ ಮಾರುತಿ ಅವರು ಭೇಟಿ ನೀಡಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಾರುತಿ ಮತ್ತು ಸಿಬ್ಬಂದಿ ನೆಲ ಮಹಡಿ ಪ್ರವೇಶಿಸಿ ನೋಡಿದಾಗ ಅಲ್ಲಿ ಪಾರ್ಟಿ ನಡೆಯುತ್ತಿರುವುದು ಕಾಣಿಸಿದೆ. ಕೂಡಲೇ ಡಿಜೆ ಆಯೋಜಕ ಎಸ್.ಫರ್ನಾಂಡಿಸ್, ಎಂಡಿ ಮನೋಜ್​ನನ್ನು ಪೊಲೀಸರು ವಶಕ್ಕೆ ಪಡೆದು ಪರವಾನಗಿ ರದ್ದು ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಕೊರೊನಾ 2ನೇ ಅಲೆಯ ಭೀತಿ.. ರಾತ್ರಿ 11 ಗಂಟೆ ನಂತರ ಹೆಚ್ಚು ಜನ ಸೇರೋಹಾಗಿಲ್ಲ: ಸಚಿವ ಸುಧಾಕರ್

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ