AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ ಉಲ್ಲಂಘನೆ.. ಬೆಂಗಳೂರಿನ JW ಮ್ಯಾರಿಯೆಟ್ ಸೇರಿ 3 ಹೋಟೆಲ್​ಗಳ ವಿರುದ್ಧ FIR

ಹೋಟೆಲ್​ಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ JW ಮ್ಯಾರಿಯೆಟ್, ಇಂಡಿಗೋ ಎಕ್ಸ್​ಪಿ ಹೆಚ್​ಎಸ್​ಆರ್, ಕೋನ್ರಾಡ್ ಸೇರಿ 3 ಪ್ರತಿಷ್ಠಿತ ಹೋಟೆಲ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಕೊರೊನಾ ನಿಯಮ ಉಲ್ಲಂಘನೆ.. ಬೆಂಗಳೂರಿನ JW ಮ್ಯಾರಿಯೆಟ್ ಸೇರಿ 3 ಹೋಟೆಲ್​ಗಳ ವಿರುದ್ಧ FIR
JW ಮ್ಯಾರಿಯೆಟ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Mar 12, 2021 | 2:54 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಅಬ್ಬರ ಹೆಚ್ಚಾಗುವ ಸಾಧ್ಯತೆ ಕಂಡು ಬಂದಿದೆ. ಬೆಂಗಳೂರಿಗೆ ಕೊರೊನಾ 2ನೇ ಅಲೆಯ ಭೀತಿ ಹೆಚ್ಚಾಗಿದ್ದು ಈಗಾಗಲೇ ಹೋಟೆಲ್, ಪಬ್ ಅಂಡ್ ಬಾರ್, ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಕೊವಿಡ್ ನಿಯಮ ಪಾಲಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಆದ್ರೆ ಇದರ ನಡುವೆ ನಗರದ 3 ಪ್ರತಿಷ್ಠಿತ ಹೋಟೆಲ್​ಗಳು ಈ ನಿಯಮವನ್ನು ಉಲ್ಲಂಘಿಸಿದ್ದು ಹೋಟೆಲ್​ಗಳ ವಿರುದ್ಧ FIR ದಾಖಲಾಗಿದೆ.

ಹೋಟೆಲ್​ಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ JW ಮ್ಯಾರಿಯೆಟ್, ಇಂಡಿಗೋ ಎಕ್ಸ್​ಪಿ ಹೆಚ್​ಎಸ್​ಆರ್, ಕೋನ್ರಾಡ್ ಸೇರಿ 3 ಪ್ರತಿಷ್ಠಿತ ಹೋಟೆಲ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ಡಿಜೆ ಪಾರ್ಟಿಗೆ ಸೀಮಿತ ಜನರಿಗೆ ಮಾತ್ರ ಅವಕಾಶ ನೀಡುವಂತೆ ಸೂಚನೆ ಇದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚು ಜನರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಹೋಟೆಲ್​ಗಳ ಮೇಲೆ ಪ್ರಕರಣ ದಾಖಲಾಗಿದೆ. ಹಾಗೂ ರಾತ್ರಿ 3 ಗಂಟೆವರೆಗೂ ಡಿಜೆ ಪಾರ್ಟಿ ಆಯೋಜನೆ ಆರೋಪ ಕೇಳಿ ಬಂದಿದೆ.

ಅವಧಿ ಮೀರಿ ತಡರಾತ್ರಿವರೆಗೆ ಡಿಜೆ ಮ್ಯೂಸಿಕ್ ಶೋ ಮಾಡುತ್ತಿದ್ದ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ ಗಸ್ತಿನಲ್ಲಿದ್ದ ಇನ್ಸ್ಪೆಕ್ಟರ್ ಬಿ ಮಾರುತಿ ಅವರು ಭೇಟಿ ನೀಡಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಾರುತಿ ಮತ್ತು ಸಿಬ್ಬಂದಿ ನೆಲ ಮಹಡಿ ಪ್ರವೇಶಿಸಿ ನೋಡಿದಾಗ ಅಲ್ಲಿ ಪಾರ್ಟಿ ನಡೆಯುತ್ತಿರುವುದು ಕಾಣಿಸಿದೆ. ಕೂಡಲೇ ಡಿಜೆ ಆಯೋಜಕ ಎಸ್.ಫರ್ನಾಂಡಿಸ್, ಎಂಡಿ ಮನೋಜ್​ನನ್ನು ಪೊಲೀಸರು ವಶಕ್ಕೆ ಪಡೆದು ಪರವಾನಗಿ ರದ್ದು ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಕೊರೊನಾ 2ನೇ ಅಲೆಯ ಭೀತಿ.. ರಾತ್ರಿ 11 ಗಂಟೆ ನಂತರ ಹೆಚ್ಚು ಜನ ಸೇರೋಹಾಗಿಲ್ಲ: ಸಚಿವ ಸುಧಾಕರ್

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!