AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ ಉಲ್ಲಂಘನೆ.. ಬೆಂಗಳೂರಿನ JW ಮ್ಯಾರಿಯೆಟ್ ಸೇರಿ 3 ಹೋಟೆಲ್​ಗಳ ವಿರುದ್ಧ FIR

ಹೋಟೆಲ್​ಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ JW ಮ್ಯಾರಿಯೆಟ್, ಇಂಡಿಗೋ ಎಕ್ಸ್​ಪಿ ಹೆಚ್​ಎಸ್​ಆರ್, ಕೋನ್ರಾಡ್ ಸೇರಿ 3 ಪ್ರತಿಷ್ಠಿತ ಹೋಟೆಲ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಕೊರೊನಾ ನಿಯಮ ಉಲ್ಲಂಘನೆ.. ಬೆಂಗಳೂರಿನ JW ಮ್ಯಾರಿಯೆಟ್ ಸೇರಿ 3 ಹೋಟೆಲ್​ಗಳ ವಿರುದ್ಧ FIR
JW ಮ್ಯಾರಿಯೆಟ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Mar 12, 2021 | 2:54 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಅಬ್ಬರ ಹೆಚ್ಚಾಗುವ ಸಾಧ್ಯತೆ ಕಂಡು ಬಂದಿದೆ. ಬೆಂಗಳೂರಿಗೆ ಕೊರೊನಾ 2ನೇ ಅಲೆಯ ಭೀತಿ ಹೆಚ್ಚಾಗಿದ್ದು ಈಗಾಗಲೇ ಹೋಟೆಲ್, ಪಬ್ ಅಂಡ್ ಬಾರ್, ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಕೊವಿಡ್ ನಿಯಮ ಪಾಲಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಆದ್ರೆ ಇದರ ನಡುವೆ ನಗರದ 3 ಪ್ರತಿಷ್ಠಿತ ಹೋಟೆಲ್​ಗಳು ಈ ನಿಯಮವನ್ನು ಉಲ್ಲಂಘಿಸಿದ್ದು ಹೋಟೆಲ್​ಗಳ ವಿರುದ್ಧ FIR ದಾಖಲಾಗಿದೆ.

ಹೋಟೆಲ್​ಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ JW ಮ್ಯಾರಿಯೆಟ್, ಇಂಡಿಗೋ ಎಕ್ಸ್​ಪಿ ಹೆಚ್​ಎಸ್​ಆರ್, ಕೋನ್ರಾಡ್ ಸೇರಿ 3 ಪ್ರತಿಷ್ಠಿತ ಹೋಟೆಲ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ಡಿಜೆ ಪಾರ್ಟಿಗೆ ಸೀಮಿತ ಜನರಿಗೆ ಮಾತ್ರ ಅವಕಾಶ ನೀಡುವಂತೆ ಸೂಚನೆ ಇದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚು ಜನರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಹೋಟೆಲ್​ಗಳ ಮೇಲೆ ಪ್ರಕರಣ ದಾಖಲಾಗಿದೆ. ಹಾಗೂ ರಾತ್ರಿ 3 ಗಂಟೆವರೆಗೂ ಡಿಜೆ ಪಾರ್ಟಿ ಆಯೋಜನೆ ಆರೋಪ ಕೇಳಿ ಬಂದಿದೆ.

ಅವಧಿ ಮೀರಿ ತಡರಾತ್ರಿವರೆಗೆ ಡಿಜೆ ಮ್ಯೂಸಿಕ್ ಶೋ ಮಾಡುತ್ತಿದ್ದ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ ಗಸ್ತಿನಲ್ಲಿದ್ದ ಇನ್ಸ್ಪೆಕ್ಟರ್ ಬಿ ಮಾರುತಿ ಅವರು ಭೇಟಿ ನೀಡಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಾರುತಿ ಮತ್ತು ಸಿಬ್ಬಂದಿ ನೆಲ ಮಹಡಿ ಪ್ರವೇಶಿಸಿ ನೋಡಿದಾಗ ಅಲ್ಲಿ ಪಾರ್ಟಿ ನಡೆಯುತ್ತಿರುವುದು ಕಾಣಿಸಿದೆ. ಕೂಡಲೇ ಡಿಜೆ ಆಯೋಜಕ ಎಸ್.ಫರ್ನಾಂಡಿಸ್, ಎಂಡಿ ಮನೋಜ್​ನನ್ನು ಪೊಲೀಸರು ವಶಕ್ಕೆ ಪಡೆದು ಪರವಾನಗಿ ರದ್ದು ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಕೊರೊನಾ 2ನೇ ಅಲೆಯ ಭೀತಿ.. ರಾತ್ರಿ 11 ಗಂಟೆ ನಂತರ ಹೆಚ್ಚು ಜನ ಸೇರೋಹಾಗಿಲ್ಲ: ಸಚಿವ ಸುಧಾಕರ್

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ