AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ ಉಲ್ಲಂಘನೆ.. ಬೆಂಗಳೂರಿನ JW ಮ್ಯಾರಿಯೆಟ್ ಸೇರಿ 3 ಹೋಟೆಲ್​ಗಳ ವಿರುದ್ಧ FIR

ಹೋಟೆಲ್​ಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ JW ಮ್ಯಾರಿಯೆಟ್, ಇಂಡಿಗೋ ಎಕ್ಸ್​ಪಿ ಹೆಚ್​ಎಸ್​ಆರ್, ಕೋನ್ರಾಡ್ ಸೇರಿ 3 ಪ್ರತಿಷ್ಠಿತ ಹೋಟೆಲ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಕೊರೊನಾ ನಿಯಮ ಉಲ್ಲಂಘನೆ.. ಬೆಂಗಳೂರಿನ JW ಮ್ಯಾರಿಯೆಟ್ ಸೇರಿ 3 ಹೋಟೆಲ್​ಗಳ ವಿರುದ್ಧ FIR
JW ಮ್ಯಾರಿಯೆಟ್
ಆಯೇಷಾ ಬಾನು
| Edited By: |

Updated on: Mar 12, 2021 | 2:54 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಅಬ್ಬರ ಹೆಚ್ಚಾಗುವ ಸಾಧ್ಯತೆ ಕಂಡು ಬಂದಿದೆ. ಬೆಂಗಳೂರಿಗೆ ಕೊರೊನಾ 2ನೇ ಅಲೆಯ ಭೀತಿ ಹೆಚ್ಚಾಗಿದ್ದು ಈಗಾಗಲೇ ಹೋಟೆಲ್, ಪಬ್ ಅಂಡ್ ಬಾರ್, ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಕೊವಿಡ್ ನಿಯಮ ಪಾಲಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಆದ್ರೆ ಇದರ ನಡುವೆ ನಗರದ 3 ಪ್ರತಿಷ್ಠಿತ ಹೋಟೆಲ್​ಗಳು ಈ ನಿಯಮವನ್ನು ಉಲ್ಲಂಘಿಸಿದ್ದು ಹೋಟೆಲ್​ಗಳ ವಿರುದ್ಧ FIR ದಾಖಲಾಗಿದೆ.

ಹೋಟೆಲ್​ಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ JW ಮ್ಯಾರಿಯೆಟ್, ಇಂಡಿಗೋ ಎಕ್ಸ್​ಪಿ ಹೆಚ್​ಎಸ್​ಆರ್, ಕೋನ್ರಾಡ್ ಸೇರಿ 3 ಪ್ರತಿಷ್ಠಿತ ಹೋಟೆಲ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ಡಿಜೆ ಪಾರ್ಟಿಗೆ ಸೀಮಿತ ಜನರಿಗೆ ಮಾತ್ರ ಅವಕಾಶ ನೀಡುವಂತೆ ಸೂಚನೆ ಇದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚು ಜನರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಹೋಟೆಲ್​ಗಳ ಮೇಲೆ ಪ್ರಕರಣ ದಾಖಲಾಗಿದೆ. ಹಾಗೂ ರಾತ್ರಿ 3 ಗಂಟೆವರೆಗೂ ಡಿಜೆ ಪಾರ್ಟಿ ಆಯೋಜನೆ ಆರೋಪ ಕೇಳಿ ಬಂದಿದೆ.

ಅವಧಿ ಮೀರಿ ತಡರಾತ್ರಿವರೆಗೆ ಡಿಜೆ ಮ್ಯೂಸಿಕ್ ಶೋ ಮಾಡುತ್ತಿದ್ದ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ ಗಸ್ತಿನಲ್ಲಿದ್ದ ಇನ್ಸ್ಪೆಕ್ಟರ್ ಬಿ ಮಾರುತಿ ಅವರು ಭೇಟಿ ನೀಡಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಾರುತಿ ಮತ್ತು ಸಿಬ್ಬಂದಿ ನೆಲ ಮಹಡಿ ಪ್ರವೇಶಿಸಿ ನೋಡಿದಾಗ ಅಲ್ಲಿ ಪಾರ್ಟಿ ನಡೆಯುತ್ತಿರುವುದು ಕಾಣಿಸಿದೆ. ಕೂಡಲೇ ಡಿಜೆ ಆಯೋಜಕ ಎಸ್.ಫರ್ನಾಂಡಿಸ್, ಎಂಡಿ ಮನೋಜ್​ನನ್ನು ಪೊಲೀಸರು ವಶಕ್ಕೆ ಪಡೆದು ಪರವಾನಗಿ ರದ್ದು ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಕೊರೊನಾ 2ನೇ ಅಲೆಯ ಭೀತಿ.. ರಾತ್ರಿ 11 ಗಂಟೆ ನಂತರ ಹೆಚ್ಚು ಜನ ಸೇರೋಹಾಗಿಲ್ಲ: ಸಚಿವ ಸುಧಾಕರ್

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ