ಸಿನಿಮಾ ಚಾನ್ಸ್ ನೆಪದಲ್ಲಿ ರೇಪ್, ಕಿರುತೆರೆ ನಟಿಯಿಂದ ಆರೋಪ

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಕಿರುತೆರೆ ನಟಿ ಮೇಲೆ ಅತ್ಯಾಚಾರ ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕಿರುತೆರೆಯ ನಟಿ ನೀಡಿದ ದೂರು ಆಧರಿಸಿ ಹೈದರಾಬಾದ್‌ನ ನಿರ್ಮಾಪಕ ಸಂಗಮೇಶ್ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹೆಬ್ಬಾಳ ನಿವಾಸಿಯಾಗಿರುವ ಕಿರುತೆರೆ ನಟಿಗೆ 6 ವರ್ಷಗಳ ಹಿಂದೆ ಸಿನಿಮಾಮದಲ್ಲಿ ಚಾನ್ಸ್ ಕೊಡಿಸುವುದಾಗಿ ನಿರ್ಮಾಪಕ ಸಂಗಮೇಶ್ ಹೇಳಿದ್ದಾನೆ. 2013ರಲ್ಲಿ ಹೈದರಾಬಾದ್​ನ ಹೋಟೆಲ್​ಗೆ ಕರೆಸಿಕೊಂಡು ಮತ್ತು ಬರಿಸೋ ತಂಪುಪಾನಿಯ ನೀಡಿ ಅತ್ಯಾಚಾರವೆಸಗಿದ್ದಾನೆ. ಬಳಿಕ 2014ರಲ್ಲಿ […]

ಸಿನಿಮಾ ಚಾನ್ಸ್ ನೆಪದಲ್ಲಿ ರೇಪ್, ಕಿರುತೆರೆ ನಟಿಯಿಂದ ಆರೋಪ
Follow us
|

Updated on:Mar 02, 2020 | 10:28 AM

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಕಿರುತೆರೆ ನಟಿ ಮೇಲೆ ಅತ್ಯಾಚಾರ ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕಿರುತೆರೆಯ ನಟಿ ನೀಡಿದ ದೂರು ಆಧರಿಸಿ ಹೈದರಾಬಾದ್‌ನ ನಿರ್ಮಾಪಕ ಸಂಗಮೇಶ್ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಂಗಳೂರಿನ ಹೆಬ್ಬಾಳ ನಿವಾಸಿಯಾಗಿರುವ ಕಿರುತೆರೆ ನಟಿಗೆ 6 ವರ್ಷಗಳ ಹಿಂದೆ ಸಿನಿಮಾಮದಲ್ಲಿ ಚಾನ್ಸ್ ಕೊಡಿಸುವುದಾಗಿ ನಿರ್ಮಾಪಕ ಸಂಗಮೇಶ್ ಹೇಳಿದ್ದಾನೆ. 2013ರಲ್ಲಿ ಹೈದರಾಬಾದ್​ನ ಹೋಟೆಲ್​ಗೆ ಕರೆಸಿಕೊಂಡು ಮತ್ತು ಬರಿಸೋ ತಂಪುಪಾನಿಯ ನೀಡಿ ಅತ್ಯಾಚಾರವೆಸಗಿದ್ದಾನೆ. ಬಳಿಕ 2014ರಲ್ಲಿ ಮತ್ತೆ ನಗ್ನ ವಿಡಿಯೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡೋದಾಗಿ ಹೇಳಿ ಗೋವಾಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ನಿರ್ಮಾಪಕನ ವಿರುದ್ಧ ಕಿರುತೆರೆ ನಟಿ ಆರೋಪಿಸಿದ್ದಾರೆ.

ಅಲ್ಲದೆ ಮದುವೆಯಾಗುವುದಾಗಿ ಭರವಸೆ ನೀಡಿ ನಿರಂತರವಾಗಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆರೋಪಿಗೆ ಈಗಾಗ್ಲೇ ಮದುವೆಯಾಗಿದ್ದು, ಮಕ್ಕಳಿದ್ದನ್ನ ಪ್ರಶ್ನಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿರೋ ಆರೋಪ ಕೇಳಿ ಬಂದಿದೆ. ರಾಜಿ ಮಾಡೋದಾಗಿ ಕರೆಸಿದ ಸಂಗಮೇಶ್ ಪತ್ನಿ ತನ್ನ ವಿರುದ್ದವೇ ಸ್ಥಳೀಯ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿರೋದಾಗಿ ದೂರಿನಲ್ಲಿ ಯುವತಿ ಮಾಹಿತಿ ನೀಡಿದ್ದಾರೆ. ವಂಚನೆ ಮತ್ತು ಬ್ಲಾಕ್ ಮೇಲ್ ಮಾಡ್ತಿದ್ದ ನಿರ್ಮಾಪಕನ ವಿರುದ್ದ ಸಂತ್ರಸ್ಥೆ ಕಿರುತೆರೆ ನಟಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದ ಸೂಚನೆ ಹಿನ್ನಲೆ ಅಮೃತಹಳ್ಳಿ ಪೊಲೀಸ್ರು ಎಫ್​ಐಆರ್ ದಾಖಲಿಸಿದ್ದಾರೆ.

Published On - 9:02 am, Mon, 2 March 20

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ