AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷ ಭಾಷಣ: ಮಹಾರಾಷ್ಟ್ರದ ಮಾಜಿ ಶಾಸಕ ವಾರಿಷ್ ಪಠಾಣ್ ವಿರುದ್ಧ ಎಫ್​ಐಆರ್

ಕಲಬುರಗಿ: ಮಹಾರಾಷ್ಟ್ರದ ಮಾಜಿ ಶಾಸಕ ವಾರಿಷ್ ಪಠಾಣ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ವಕೀಲೆ ಶ್ವೇತಾ ಅನ್ನೋರಿಂದ ನಿನ್ನೆ ಸಂಜೆ ಕಲಬುರಗಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೇ ತಿಂಗಳು 15 ರಂದು ಎಐಎಂಎಂ ಪಕ್ಷದ ವತಿಯಿಂದ ಕಲಬುರಗಿ ನಗರದ ಪೀರ್ ಬಂಗಾಲಿ ಮೈದಾನದಲ್ಲಿ ನಡೆದ ಸಭೆಯಲ್ಲಿ ವಾರಿಷ್ ಪಠಾಣ್ ಭಾಷಣ ಮಾಡಿದ್ದರು. ಈ ವೇಳೆ 15 ಕೋಟಿ ಮುಸ್ಲಿಮರು 100 ಕೋಟಿ ಹಿಂದೂಗಳಲ್ಲಿ ಪ್ರಾಬಲ್ಯ ಸಾಧಿಸಬಹುದು. ಬರೀ ಮಹಿಳೆಯರು ಮುಂದೆ ಬಂದಿದ್ದಕ್ಕೆ ನಿಮ್ಮ […]

ದ್ವೇಷ ಭಾಷಣ: ಮಹಾರಾಷ್ಟ್ರದ ಮಾಜಿ ಶಾಸಕ ವಾರಿಷ್ ಪಠಾಣ್ ವಿರುದ್ಧ ಎಫ್​ಐಆರ್
ಸಾಧು ಶ್ರೀನಾಥ್​
|

Updated on:Feb 22, 2020 | 9:39 AM

Share

ಕಲಬುರಗಿ: ಮಹಾರಾಷ್ಟ್ರದ ಮಾಜಿ ಶಾಸಕ ವಾರಿಷ್ ಪಠಾಣ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ವಕೀಲೆ ಶ್ವೇತಾ ಅನ್ನೋರಿಂದ ನಿನ್ನೆ ಸಂಜೆ ಕಲಬುರಗಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದೇ ತಿಂಗಳು 15 ರಂದು ಎಐಎಂಎಂ ಪಕ್ಷದ ವತಿಯಿಂದ ಕಲಬುರಗಿ ನಗರದ ಪೀರ್ ಬಂಗಾಲಿ ಮೈದಾನದಲ್ಲಿ ನಡೆದ ಸಭೆಯಲ್ಲಿ ವಾರಿಷ್ ಪಠಾಣ್ ಭಾಷಣ ಮಾಡಿದ್ದರು. ಈ ವೇಳೆ 15 ಕೋಟಿ ಮುಸ್ಲಿಮರು 100 ಕೋಟಿ ಹಿಂದೂಗಳಲ್ಲಿ ಪ್ರಾಬಲ್ಯ ಸಾಧಿಸಬಹುದು. ಬರೀ ಮಹಿಳೆಯರು ಮುಂದೆ ಬಂದಿದ್ದಕ್ಕೆ ನಿಮ್ಮ ಬೆವರು ಹರಿಯುತ್ತಿದೆ, ಇನ್ನು ಅವರ ಜೊತೆ ನಾವು ಬಂದ್ರು ಏನಾಗುತ್ತೆ ನೋಡಿ ಅಂತ ಪ್ರಚೋದನಕಾರಿ ಭಾಷಣ ಮಾಡಿದ್ದರು.

ಸಿಎಎ ವಿರೋಧಿ ಕಾರ್ಯಕ್ರಮದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದರಿಂದ ಇದನ್ನು ಖಂಡಿಸಿ ವಕೀಲೆ ಶ್ವೇತಾ ವಾರಿಷ್ ಪಠಾಣ್ ವಿರುದ್ಧ ದೂರು ದಾಖಲು ಮಾಡಿದ್ದಾರೆ.

ಪೊಲೀಸ್ ಆಯುಕ್ತರಿಗೆ ಗೃಹಸಚಿವರಿಂದ ತರಾಟೆ: ವಾರಿಸ್ ಪಠಾಣ್ ವಿರುದ್ಧ ಯಾವುದೇ ಕ್ರಮ ಜರುಗಿಸದ ಹಿನ್ನೆಲೆ ದೂರವಾಣಿ ಮೂಲಕ ಕಲ್ಬುರ್ಗಿ ನಗರ ಪೊಲೀಸ್ ಆಯುಕ್ತರಿಗೆ ಗೃಹಸಚಿವ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡಿದ್ದಾರೆ. ಫೆಬ್ರವರಿ 15ರಂದು ಕಲ್ಬುರ್ಗಿ ನಗರದಲ್ಲಿ ಸಿಎಎ ವಿರುದ್ಧದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಆದ್ರೆ ನೀವು ಇನ್ನೂ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ನಾನು ರಜೆಯಲ್ಲಿದ್ದೆ ಎಂದು ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ್ ಗೃಹಸಚಿವರಿಗೆ ಉತ್ತರಿಸಿದ್ದಾರೆ. ನೀವು ರಜೆಯಲ್ಲಿದ್ದರೆ ಇಲಾಖೆ ನಿದ್ದೆ ಮಾಡುತ್ತಿದ್ಯಾ? ಕೂಡಲೇ ಸೂಕ್ತ ಕಾನೂನು ಕ್ರಮ ಜರುಗಿಸಿ ವರದಿ ನೀಡಿ ಎಂದು ಬೊಮ್ಮಾಯಿ ಆದೇಶ ನೀಡಿದ್ದಾರೆ. ಮಹಾರಾಷ್ಟ್ರದ ಎಐಎಐಎಂ ಪಕ್ಷದ ಮಾಜಿ ಶಾಸಕ ವಾರಿಸ್ ಪಠಾಣ್ ಪ್ರಚೋದನಾಕಾರಿ ಭಾಷಣ ನಡೆದು ಐದು ದಿನಗಳಾದರೂ ಪೊಲೀಸರ ನಿರ್ಲಕ್ಷ್ಯಕ್ಕೆ ಗೃಹಸಚಿವರು ಗರಂ ಆಗಿದ್ರು.

Published On - 7:28 am, Sat, 22 February 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!