ರಾಜ ಭವನ ಎದುರು ತಪ್ಪಿತು ಭಾರಿ ಅನಾಹುತ, ಕಾರಿನಲ್ಲಿದ್ದ ಯುವಕ-ಯುವತಿ ಸೇಫ್

ಬೆಂಗಳೂರು: ರಾಜ ಭವನದ ಬಳಿ ಚಲಿಸುತ್ತಿದ್ದ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ರಿಸರ್ವ್ ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಬದಿಗೆ ನಿಲ್ಲಿಸಿ, ತಕ್ಷಣ ಕಾರಿನಲ್ಲಿದ್ದವರನ್ನು ಇಳಿಯಲು ಸೂಚಿಸಿದ್ದಾನೆ. ಅದೇ ವೇಳೆಗೆ ಸಮೀಪದಲ್ಲೇ ಇದ್ದ ರಾಜ ಭವನದ ರಿಸರ್ವ್ ಪೊಲೀಸ್ ಸಿಬ್ಬಂದಿಯ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ. ರಾಜ ಭವನ ಎದುರು ಹಾದುಹೋಗುತ್ತಿದ್ದಾಗ ಕಾರಿನ ಎಂಜಿನ್​ನಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. […]

ರಾಜ ಭವನ ಎದುರು ತಪ್ಪಿತು ಭಾರಿ ಅನಾಹುತ, ಕಾರಿನಲ್ಲಿದ್ದ ಯುವಕ-ಯುವತಿ ಸೇಫ್
ಸಾಧು ಶ್ರೀನಾಥ್​

Updated on: Aug 27, 2020 | 10:02 AM

ಬೆಂಗಳೂರು: ರಾಜ ಭವನದ ಬಳಿ ಚಲಿಸುತ್ತಿದ್ದ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ರಿಸರ್ವ್ ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಬದಿಗೆ ನಿಲ್ಲಿಸಿ, ತಕ್ಷಣ ಕಾರಿನಲ್ಲಿದ್ದವರನ್ನು ಇಳಿಯಲು ಸೂಚಿಸಿದ್ದಾನೆ. ಅದೇ ವೇಳೆಗೆ ಸಮೀಪದಲ್ಲೇ ಇದ್ದ ರಾಜ ಭವನದ ರಿಸರ್ವ್ ಪೊಲೀಸ್ ಸಿಬ್ಬಂದಿಯ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ.

ರಾಜ ಭವನ ಎದುರು ಹಾದುಹೋಗುತ್ತಿದ್ದಾಗ ಕಾರಿನ ಎಂಜಿನ್​ನಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. ಡ್ರೈವರ್ ಕಾರನ್ನು ಸೈಡ್ ಗೆ ನಿಲ್ಲಿಸುತ್ತಿದ್ದಂತೆ ರಿಸರ್ವ್ ಪೊಲೀಸ್ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿಯು ಹೊತ್ತಿ ಉರಿಯುತ್ತಿದ್ದ ಕಾರಿನತ್ತ ದೌಡಾಯಿಸಿದ್ದಾರೆ. ಅಗ್ನಿ ನಿರೋಧಕ ಉಪಕರಣ ಬಳಸಿ ಬೆಂಕಿ ಆರಿಸಿದ್ದಾರೆ. ಕಾರಿನಲ್ಲಿದ್ದ ಓರ್ವ ಯುವಕ ಹಾಗೂ ಯುವತಿ ಸೇಫ್ ಆಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us