AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಪ್ರತಿಭಟನೆಯ ‘ಕಿಚ್ಚು’: ಧರಣಿ ವೇಳೆ ಸ್ವಲ್ಪದರಲ್ಲೇ ತಪ್ಪಿದ ಅಗ್ನಿ ಅನಾಹುತ

ಬೆಂಗಳೂರು: ನಿನ್ನೆ ನಡೆದ ರೈತರ ಪ್ರತಿಭಟನೆಯ ವೇಳೆ ಅಗ್ನಿ ಅವಘಡವೊಂದು ಸಂಭವಿಸಿದೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ವಿಧಾನಸಭೆಯಲ್ಲಿ ಮಸೂದೆ ಮಂಡನೆಯಾಗುತ್ತಿದ್ದಂತೆ ಮೌರ್ಯ ಸರ್ಕಲ್​ ಬಳಿ ನೆರೆದಿದ್ದ ರೈತರು ಪ್ರತಿಭಟನೆಗೆ ಮುಂದಾದರು. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ‌ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ರೈತರು ಸರ್ಕಾರದ ಪ್ರತಿಕೃತಿಯ ಶವಯಾತ್ರೆಗೆ ಮುಂದಾದ್ರು. ಕೊನೆಗೆ, ಪ್ರತಿಕೃತಿಗೆ ಚಟ್ಟ ಮಾಡಿ ಬೆಂಕಿ ಹಚ್ಚಲು‌ ಮುಂದಾದರು. ಈ ನಡುವೆ ಮಫ್ತಿಯಲ್ಲಿದ್ದ ಕೆಲವು ಪೊಲೀಸರು ಪ್ರತಿಕೃತಿಯನ್ನು ಕಸಿಯಲು ಮುಂದಾದರು. ಆಗ, ಸ್ಥಳದಲ್ಲೇ […]

ರೈತ ಪ್ರತಿಭಟನೆಯ ‘ಕಿಚ್ಚು’: ಧರಣಿ ವೇಳೆ ಸ್ವಲ್ಪದರಲ್ಲೇ ತಪ್ಪಿದ ಅಗ್ನಿ ಅನಾಹುತ
KUSHAL V
|

Updated on: Sep 27, 2020 | 11:13 AM

Share

ಬೆಂಗಳೂರು: ನಿನ್ನೆ ನಡೆದ ರೈತರ ಪ್ರತಿಭಟನೆಯ ವೇಳೆ ಅಗ್ನಿ ಅವಘಡವೊಂದು ಸಂಭವಿಸಿದೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ವಿಧಾನಸಭೆಯಲ್ಲಿ ಮಸೂದೆ ಮಂಡನೆಯಾಗುತ್ತಿದ್ದಂತೆ ಮೌರ್ಯ ಸರ್ಕಲ್​ ಬಳಿ ನೆರೆದಿದ್ದ ರೈತರು ಪ್ರತಿಭಟನೆಗೆ ಮುಂದಾದರು. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ‌ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾದರು.

ಈ ವೇಳೆ ರೈತರು ಸರ್ಕಾರದ ಪ್ರತಿಕೃತಿಯ ಶವಯಾತ್ರೆಗೆ ಮುಂದಾದ್ರು. ಕೊನೆಗೆ, ಪ್ರತಿಕೃತಿಗೆ ಚಟ್ಟ ಮಾಡಿ ಬೆಂಕಿ ಹಚ್ಚಲು‌ ಮುಂದಾದರು. ಈ ನಡುವೆ ಮಫ್ತಿಯಲ್ಲಿದ್ದ ಕೆಲವು ಪೊಲೀಸರು ಪ್ರತಿಕೃತಿಯನ್ನು ಕಸಿಯಲು ಮುಂದಾದರು. ಆಗ, ಸ್ಥಳದಲ್ಲೇ ಇದ್ದ ರೈತನೊಬ್ಬ ಗಡಿಬಿಡಿಯಲ್ಲಿ ಚಟ್ಟಕ್ಕೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಲು ಮುಂದಾದ.

ಚಟ್ಟಕ್ಕೆ ಬೆಂಕಿ ಹಚ್ಚುತ್ತಿದ್ದಂತೆ ಅದು ಇದಕ್ಕಿದಂತೆ ಧಗಧಗನೆ ಹೊತ್ತಿ ಉರಿದು ಅಲ್ಲೇ ಇದ್ದ ರೈತ ಹಾಗೂ ಇನ್​ಸ್ಪೆಕ್ಟರ್ ಒಬ್ಬರ ಕೈಗೆ ಬೆಂಕಿ ತಗುಲಿತು. ಅದೃಷ್ಟವಶಾತ್, ಸ್ಥಳದಲ್ಲಿದವರು ಬಹುಬೇಗ ಅಲ್ಲಿಂದ ದೂರ ಸರಿದ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

ಕೂಡಲೇ ಸ್ಥಳದಲ್ಲಿದ್ದ ಇತರೆ ರೈತರು ಹಾಗೂ ಪೊಲೀಸರು ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಅಗ್ನಿ ಅವಘಡದಲ್ಲಿ ರೈತ ಮತ್ತು ಇನ್​ಸ್ಪೆಕ್ಟರ್​ಗೆ ಸಣ್ಣಪುಟ್ಟ ಗಾಯಗಳಾದವು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!