AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಪ್ರತಿಭಟನೆಯ ‘ಕಿಚ್ಚು’: ಧರಣಿ ವೇಳೆ ಸ್ವಲ್ಪದರಲ್ಲೇ ತಪ್ಪಿದ ಅಗ್ನಿ ಅನಾಹುತ

ಬೆಂಗಳೂರು: ನಿನ್ನೆ ನಡೆದ ರೈತರ ಪ್ರತಿಭಟನೆಯ ವೇಳೆ ಅಗ್ನಿ ಅವಘಡವೊಂದು ಸಂಭವಿಸಿದೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ವಿಧಾನಸಭೆಯಲ್ಲಿ ಮಸೂದೆ ಮಂಡನೆಯಾಗುತ್ತಿದ್ದಂತೆ ಮೌರ್ಯ ಸರ್ಕಲ್​ ಬಳಿ ನೆರೆದಿದ್ದ ರೈತರು ಪ್ರತಿಭಟನೆಗೆ ಮುಂದಾದರು. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ‌ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ರೈತರು ಸರ್ಕಾರದ ಪ್ರತಿಕೃತಿಯ ಶವಯಾತ್ರೆಗೆ ಮುಂದಾದ್ರು. ಕೊನೆಗೆ, ಪ್ರತಿಕೃತಿಗೆ ಚಟ್ಟ ಮಾಡಿ ಬೆಂಕಿ ಹಚ್ಚಲು‌ ಮುಂದಾದರು. ಈ ನಡುವೆ ಮಫ್ತಿಯಲ್ಲಿದ್ದ ಕೆಲವು ಪೊಲೀಸರು ಪ್ರತಿಕೃತಿಯನ್ನು ಕಸಿಯಲು ಮುಂದಾದರು. ಆಗ, ಸ್ಥಳದಲ್ಲೇ […]

ರೈತ ಪ್ರತಿಭಟನೆಯ ‘ಕಿಚ್ಚು’: ಧರಣಿ ವೇಳೆ ಸ್ವಲ್ಪದರಲ್ಲೇ ತಪ್ಪಿದ ಅಗ್ನಿ ಅನಾಹುತ
KUSHAL V
|

Updated on: Sep 27, 2020 | 11:13 AM

Share

ಬೆಂಗಳೂರು: ನಿನ್ನೆ ನಡೆದ ರೈತರ ಪ್ರತಿಭಟನೆಯ ವೇಳೆ ಅಗ್ನಿ ಅವಘಡವೊಂದು ಸಂಭವಿಸಿದೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ವಿಧಾನಸಭೆಯಲ್ಲಿ ಮಸೂದೆ ಮಂಡನೆಯಾಗುತ್ತಿದ್ದಂತೆ ಮೌರ್ಯ ಸರ್ಕಲ್​ ಬಳಿ ನೆರೆದಿದ್ದ ರೈತರು ಪ್ರತಿಭಟನೆಗೆ ಮುಂದಾದರು. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ‌ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾದರು.

ಈ ವೇಳೆ ರೈತರು ಸರ್ಕಾರದ ಪ್ರತಿಕೃತಿಯ ಶವಯಾತ್ರೆಗೆ ಮುಂದಾದ್ರು. ಕೊನೆಗೆ, ಪ್ರತಿಕೃತಿಗೆ ಚಟ್ಟ ಮಾಡಿ ಬೆಂಕಿ ಹಚ್ಚಲು‌ ಮುಂದಾದರು. ಈ ನಡುವೆ ಮಫ್ತಿಯಲ್ಲಿದ್ದ ಕೆಲವು ಪೊಲೀಸರು ಪ್ರತಿಕೃತಿಯನ್ನು ಕಸಿಯಲು ಮುಂದಾದರು. ಆಗ, ಸ್ಥಳದಲ್ಲೇ ಇದ್ದ ರೈತನೊಬ್ಬ ಗಡಿಬಿಡಿಯಲ್ಲಿ ಚಟ್ಟಕ್ಕೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಲು ಮುಂದಾದ.

ಚಟ್ಟಕ್ಕೆ ಬೆಂಕಿ ಹಚ್ಚುತ್ತಿದ್ದಂತೆ ಅದು ಇದಕ್ಕಿದಂತೆ ಧಗಧಗನೆ ಹೊತ್ತಿ ಉರಿದು ಅಲ್ಲೇ ಇದ್ದ ರೈತ ಹಾಗೂ ಇನ್​ಸ್ಪೆಕ್ಟರ್ ಒಬ್ಬರ ಕೈಗೆ ಬೆಂಕಿ ತಗುಲಿತು. ಅದೃಷ್ಟವಶಾತ್, ಸ್ಥಳದಲ್ಲಿದವರು ಬಹುಬೇಗ ಅಲ್ಲಿಂದ ದೂರ ಸರಿದ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

ಕೂಡಲೇ ಸ್ಥಳದಲ್ಲಿದ್ದ ಇತರೆ ರೈತರು ಹಾಗೂ ಪೊಲೀಸರು ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಅಗ್ನಿ ಅವಘಡದಲ್ಲಿ ರೈತ ಮತ್ತು ಇನ್​ಸ್ಪೆಕ್ಟರ್​ಗೆ ಸಣ್ಣಪುಟ್ಟ ಗಾಯಗಳಾದವು.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ