AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಪ್ರತಿಭಟನೆಯ ‘ಕಿಚ್ಚು’: ಧರಣಿ ವೇಳೆ ಸ್ವಲ್ಪದರಲ್ಲೇ ತಪ್ಪಿದ ಅಗ್ನಿ ಅನಾಹುತ

ಬೆಂಗಳೂರು: ನಿನ್ನೆ ನಡೆದ ರೈತರ ಪ್ರತಿಭಟನೆಯ ವೇಳೆ ಅಗ್ನಿ ಅವಘಡವೊಂದು ಸಂಭವಿಸಿದೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ವಿಧಾನಸಭೆಯಲ್ಲಿ ಮಸೂದೆ ಮಂಡನೆಯಾಗುತ್ತಿದ್ದಂತೆ ಮೌರ್ಯ ಸರ್ಕಲ್​ ಬಳಿ ನೆರೆದಿದ್ದ ರೈತರು ಪ್ರತಿಭಟನೆಗೆ ಮುಂದಾದರು. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ‌ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ರೈತರು ಸರ್ಕಾರದ ಪ್ರತಿಕೃತಿಯ ಶವಯಾತ್ರೆಗೆ ಮುಂದಾದ್ರು. ಕೊನೆಗೆ, ಪ್ರತಿಕೃತಿಗೆ ಚಟ್ಟ ಮಾಡಿ ಬೆಂಕಿ ಹಚ್ಚಲು‌ ಮುಂದಾದರು. ಈ ನಡುವೆ ಮಫ್ತಿಯಲ್ಲಿದ್ದ ಕೆಲವು ಪೊಲೀಸರು ಪ್ರತಿಕೃತಿಯನ್ನು ಕಸಿಯಲು ಮುಂದಾದರು. ಆಗ, ಸ್ಥಳದಲ್ಲೇ […]

ರೈತ ಪ್ರತಿಭಟನೆಯ ‘ಕಿಚ್ಚು’: ಧರಣಿ ವೇಳೆ ಸ್ವಲ್ಪದರಲ್ಲೇ ತಪ್ಪಿದ ಅಗ್ನಿ ಅನಾಹುತ
KUSHAL V
|

Updated on: Sep 27, 2020 | 11:13 AM

Share

ಬೆಂಗಳೂರು: ನಿನ್ನೆ ನಡೆದ ರೈತರ ಪ್ರತಿಭಟನೆಯ ವೇಳೆ ಅಗ್ನಿ ಅವಘಡವೊಂದು ಸಂಭವಿಸಿದೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ವಿಧಾನಸಭೆಯಲ್ಲಿ ಮಸೂದೆ ಮಂಡನೆಯಾಗುತ್ತಿದ್ದಂತೆ ಮೌರ್ಯ ಸರ್ಕಲ್​ ಬಳಿ ನೆರೆದಿದ್ದ ರೈತರು ಪ್ರತಿಭಟನೆಗೆ ಮುಂದಾದರು. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ‌ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾದರು.

ಈ ವೇಳೆ ರೈತರು ಸರ್ಕಾರದ ಪ್ರತಿಕೃತಿಯ ಶವಯಾತ್ರೆಗೆ ಮುಂದಾದ್ರು. ಕೊನೆಗೆ, ಪ್ರತಿಕೃತಿಗೆ ಚಟ್ಟ ಮಾಡಿ ಬೆಂಕಿ ಹಚ್ಚಲು‌ ಮುಂದಾದರು. ಈ ನಡುವೆ ಮಫ್ತಿಯಲ್ಲಿದ್ದ ಕೆಲವು ಪೊಲೀಸರು ಪ್ರತಿಕೃತಿಯನ್ನು ಕಸಿಯಲು ಮುಂದಾದರು. ಆಗ, ಸ್ಥಳದಲ್ಲೇ ಇದ್ದ ರೈತನೊಬ್ಬ ಗಡಿಬಿಡಿಯಲ್ಲಿ ಚಟ್ಟಕ್ಕೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಲು ಮುಂದಾದ.

ಚಟ್ಟಕ್ಕೆ ಬೆಂಕಿ ಹಚ್ಚುತ್ತಿದ್ದಂತೆ ಅದು ಇದಕ್ಕಿದಂತೆ ಧಗಧಗನೆ ಹೊತ್ತಿ ಉರಿದು ಅಲ್ಲೇ ಇದ್ದ ರೈತ ಹಾಗೂ ಇನ್​ಸ್ಪೆಕ್ಟರ್ ಒಬ್ಬರ ಕೈಗೆ ಬೆಂಕಿ ತಗುಲಿತು. ಅದೃಷ್ಟವಶಾತ್, ಸ್ಥಳದಲ್ಲಿದವರು ಬಹುಬೇಗ ಅಲ್ಲಿಂದ ದೂರ ಸರಿದ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

ಕೂಡಲೇ ಸ್ಥಳದಲ್ಲಿದ್ದ ಇತರೆ ರೈತರು ಹಾಗೂ ಪೊಲೀಸರು ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಅಗ್ನಿ ಅವಘಡದಲ್ಲಿ ರೈತ ಮತ್ತು ಇನ್​ಸ್ಪೆಕ್ಟರ್​ಗೆ ಸಣ್ಣಪುಟ್ಟ ಗಾಯಗಳಾದವು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ