AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಪಿಸ್ತೂಲ್, ಬೊಂಡ ಮಂಜನ ಕಾಲಿಗೆ ಗುಂಡು

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿದ್ದು, ನಟೋರಿಯಸ್ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸಂಘಟಿತ ಅಪರಾಧ ದಳ ಎಸಿಪಿ ಜಗನ್ನಾಥ್ ರೈ ನೇತೃತ್ವದ ತಂಡದಿಂದ ಈ ಕಾರ್ಯಚರಣೆ ನಡೆದಿದ್ದು, ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಕುಮಾರ್​ ಅವರಿಂದ ಆತ್ಮರಕ್ಷಣೆಗಾಗಿ ಆರೋಪಿ ಬೊಂಡ ಮಂಜನ ಎಡ ಮೊಣಕಾಲಿಗೆ ಗುಂಡು ಹಾರಿಸಲಾಗಿದೆ. ನಗರದ ಕೋಣನಕುಂಟೆ ಠಾಣಾ ವ್ಯಾಪ್ತಿಯ ನಾರಾಯಣನಗರ ಡಬಲ್ ರೋಡ್​ನಲ್ಲಿ ಈ ಘಟನೆ ನೆಡೆದಿದೆ. ಮಂಜನ ವಿರುದ್ದ ಬರೋಬ್ಬರಿ […]

ಬೆಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಪಿಸ್ತೂಲ್,  ಬೊಂಡ ಮಂಜನ ಕಾಲಿಗೆ ಗುಂಡು
ಪೃಥ್ವಿಶಂಕರ
|

Updated on:Nov 18, 2020 | 7:12 AM

Share

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿದ್ದು, ನಟೋರಿಯಸ್ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಸಂಘಟಿತ ಅಪರಾಧ ದಳ ಎಸಿಪಿ ಜಗನ್ನಾಥ್ ರೈ ನೇತೃತ್ವದ ತಂಡದಿಂದ ಈ ಕಾರ್ಯಚರಣೆ ನಡೆದಿದ್ದು, ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಕುಮಾರ್​ ಅವರಿಂದ ಆತ್ಮರಕ್ಷಣೆಗಾಗಿ ಆರೋಪಿ ಬೊಂಡ ಮಂಜನ ಎಡ ಮೊಣಕಾಲಿಗೆ ಗುಂಡು ಹಾರಿಸಲಾಗಿದೆ. ನಗರದ ಕೋಣನಕುಂಟೆ ಠಾಣಾ ವ್ಯಾಪ್ತಿಯ ನಾರಾಯಣನಗರ ಡಬಲ್ ರೋಡ್​ನಲ್ಲಿ ಈ ಘಟನೆ ನೆಡೆದಿದೆ.

ಮಂಜನ ವಿರುದ್ದ ಬರೋಬ್ಬರಿ 23 ಪ್ರಕರಣಗಳು ದಾಖಲಾಗಿದ್ದವು.. ತಲಘಟ್ಟಪುರ ಠಾಣೆ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ವಿರುದ್ದ ಬರೋಬ್ಬರಿ 23 ಪ್ರಕರಣಗಳು ದಾಖಲಾಗಿದ್ದವು. ಕಳೆದ ಒಂದು ತಿಂಗಳಿನಿಂದ ಆರೋಪಿ ಪತ್ತೆಗಾಗಿ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸ್ತಿದ್ರು. ಕೋಣನಕುಂಟೆಯಲ್ಲಿ ಆರೋಪಿ ಚಲವಲನದ ಬಗ್ಗೆ ಇಂದು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಪುನೀತ್ ಮತ್ತು ತಂಡ ಆರೋಪಿಯನ್ನು ಬಂಧಿಸಲು ತೆರಳಿದ್ದರು.

ಈ ವೇಳೆ ಬೈಕ್​ನಲ್ಲಿ ನಾರಾಯಣನಗರ ಬಳಿ ಪರಾರಿಯಾಕ್ತಿದ್ದಾಗ ಮಂಜನನ್ನ ಪೊಲೀಸರು ಅಡ್ಡಗಟ್ಟಿದ್ದಾರೆ. ಏಕಾಏಕಿ ಸಿಸಿಬಿ ಮುಖ್ಯಪೇದೆ ನಾಗರಾಜ್ ಕೈಗೆ ಆರೋಪಿ ಮಂಜ ಡ್ರ್ಯಾಗರ್​ನಿಂದ ಹಲ್ಲೆ ಮಾಡಿದ್ದಾನೆ. ಗಾಳಿಯಲ್ಲಿ ಗುಂಡು ಹಾರಿಸಿದ ಇನ್ಸ್​ಪೆಕ್ಟರ್ ಪುನೀತ್, ಮಂಜನನ್ನು ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ ಪ್ರತಿರೋಧವೊಡ್ಡಿ ಇನ್ಸ್​ಪೆಕ್ಟರ್ ಮೇಲೂ ಹಲ್ಲೆಗೆ ರೌಡಿ ಮಂಜ ಮುಂದಾಗಿದ್ದಾನೆ.

ಆತ್ಮರಕ್ಷಣೆಗಾಗಿ ನಟೋರಿಯಸ್ ರೌಡಿ ಮಂಜ ಅಲಿಯಾಸ್ ಬೊಂಡ‌ಮಂಜನ ಕಾಲಿಗೆ ಗುಂಡು ಹಾರಿಸಿ ರೌಡಿಶೀಟರ್ ಮಂಜನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಗಾಯಾಳು ಹೆಚ್ ಸಿ ನಾಗರಾಜ್ ಮತ್ತು ರೌಡಿಶೀಟರ್ ಮಂಜನನ್ನು ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲು ಮಾಡಲಾಗಿದೆ.

Published On - 7:08 am, Wed, 18 November 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?