AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಪಿಸ್ತೂಲ್, ಬೊಂಡ ಮಂಜನ ಕಾಲಿಗೆ ಗುಂಡು

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿದ್ದು, ನಟೋರಿಯಸ್ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸಂಘಟಿತ ಅಪರಾಧ ದಳ ಎಸಿಪಿ ಜಗನ್ನಾಥ್ ರೈ ನೇತೃತ್ವದ ತಂಡದಿಂದ ಈ ಕಾರ್ಯಚರಣೆ ನಡೆದಿದ್ದು, ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಕುಮಾರ್​ ಅವರಿಂದ ಆತ್ಮರಕ್ಷಣೆಗಾಗಿ ಆರೋಪಿ ಬೊಂಡ ಮಂಜನ ಎಡ ಮೊಣಕಾಲಿಗೆ ಗುಂಡು ಹಾರಿಸಲಾಗಿದೆ. ನಗರದ ಕೋಣನಕುಂಟೆ ಠಾಣಾ ವ್ಯಾಪ್ತಿಯ ನಾರಾಯಣನಗರ ಡಬಲ್ ರೋಡ್​ನಲ್ಲಿ ಈ ಘಟನೆ ನೆಡೆದಿದೆ. ಮಂಜನ ವಿರುದ್ದ ಬರೋಬ್ಬರಿ […]

ಬೆಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಪಿಸ್ತೂಲ್,  ಬೊಂಡ ಮಂಜನ ಕಾಲಿಗೆ ಗುಂಡು
ಪೃಥ್ವಿಶಂಕರ
|

Updated on:Nov 18, 2020 | 7:12 AM

Share

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿದ್ದು, ನಟೋರಿಯಸ್ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಸಂಘಟಿತ ಅಪರಾಧ ದಳ ಎಸಿಪಿ ಜಗನ್ನಾಥ್ ರೈ ನೇತೃತ್ವದ ತಂಡದಿಂದ ಈ ಕಾರ್ಯಚರಣೆ ನಡೆದಿದ್ದು, ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಕುಮಾರ್​ ಅವರಿಂದ ಆತ್ಮರಕ್ಷಣೆಗಾಗಿ ಆರೋಪಿ ಬೊಂಡ ಮಂಜನ ಎಡ ಮೊಣಕಾಲಿಗೆ ಗುಂಡು ಹಾರಿಸಲಾಗಿದೆ. ನಗರದ ಕೋಣನಕುಂಟೆ ಠಾಣಾ ವ್ಯಾಪ್ತಿಯ ನಾರಾಯಣನಗರ ಡಬಲ್ ರೋಡ್​ನಲ್ಲಿ ಈ ಘಟನೆ ನೆಡೆದಿದೆ.

ಮಂಜನ ವಿರುದ್ದ ಬರೋಬ್ಬರಿ 23 ಪ್ರಕರಣಗಳು ದಾಖಲಾಗಿದ್ದವು.. ತಲಘಟ್ಟಪುರ ಠಾಣೆ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ವಿರುದ್ದ ಬರೋಬ್ಬರಿ 23 ಪ್ರಕರಣಗಳು ದಾಖಲಾಗಿದ್ದವು. ಕಳೆದ ಒಂದು ತಿಂಗಳಿನಿಂದ ಆರೋಪಿ ಪತ್ತೆಗಾಗಿ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸ್ತಿದ್ರು. ಕೋಣನಕುಂಟೆಯಲ್ಲಿ ಆರೋಪಿ ಚಲವಲನದ ಬಗ್ಗೆ ಇಂದು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಪುನೀತ್ ಮತ್ತು ತಂಡ ಆರೋಪಿಯನ್ನು ಬಂಧಿಸಲು ತೆರಳಿದ್ದರು.

ಈ ವೇಳೆ ಬೈಕ್​ನಲ್ಲಿ ನಾರಾಯಣನಗರ ಬಳಿ ಪರಾರಿಯಾಕ್ತಿದ್ದಾಗ ಮಂಜನನ್ನ ಪೊಲೀಸರು ಅಡ್ಡಗಟ್ಟಿದ್ದಾರೆ. ಏಕಾಏಕಿ ಸಿಸಿಬಿ ಮುಖ್ಯಪೇದೆ ನಾಗರಾಜ್ ಕೈಗೆ ಆರೋಪಿ ಮಂಜ ಡ್ರ್ಯಾಗರ್​ನಿಂದ ಹಲ್ಲೆ ಮಾಡಿದ್ದಾನೆ. ಗಾಳಿಯಲ್ಲಿ ಗುಂಡು ಹಾರಿಸಿದ ಇನ್ಸ್​ಪೆಕ್ಟರ್ ಪುನೀತ್, ಮಂಜನನ್ನು ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ ಪ್ರತಿರೋಧವೊಡ್ಡಿ ಇನ್ಸ್​ಪೆಕ್ಟರ್ ಮೇಲೂ ಹಲ್ಲೆಗೆ ರೌಡಿ ಮಂಜ ಮುಂದಾಗಿದ್ದಾನೆ.

ಆತ್ಮರಕ್ಷಣೆಗಾಗಿ ನಟೋರಿಯಸ್ ರೌಡಿ ಮಂಜ ಅಲಿಯಾಸ್ ಬೊಂಡ‌ಮಂಜನ ಕಾಲಿಗೆ ಗುಂಡು ಹಾರಿಸಿ ರೌಡಿಶೀಟರ್ ಮಂಜನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಗಾಯಾಳು ಹೆಚ್ ಸಿ ನಾಗರಾಜ್ ಮತ್ತು ರೌಡಿಶೀಟರ್ ಮಂಜನನ್ನು ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲು ಮಾಡಲಾಗಿದೆ.

Published On - 7:08 am, Wed, 18 November 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?