AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನ ವಿರುದ್ಧ ಗೆದ್ದು ಬಂದ ಬೆಂಗಳೂರು ಮಹಿಳೆಗೆ ಮತ್ತೊಮ್ಮೆ ಕೊರೊನಾ ಪಾಸಿಟಿವ್​

ಬೆಂಗಳೂರು: ಇಡೀ ವಿಶ್ವವನ್ನೇ ಬಂಧಿಯನ್ನಾಗಿಸಿ ಕೆಲ ಕಾಲ ನರಳುವಂತೆ ಮಾಡಿದ ಮಹಾಮಾರಿ ಕೊರೊನಾ ರಾಜಧಾನಿಯಲ್ಲಿ ಕಡಿಮೆಯಾಗುವ ಲಕ್ಷಣವೇ ತೋರಿಸುತ್ತಿಲ್ಲ. ದಿನದಿಂದ ದಿನಕ್ಕೆ ರಕ್ತಬೀಜಾಸುರನಂತೆ ವ್ಯಾಪಕವಾಗಿ ಹಬ್ಬುತ್ತಿದೆ. ಈ ನಡುವೆ ಸೋಂಕಿನಿಂದ ಹಲವರು ಗುಣಮುಖರಾಗುತ್ತಿರುವುದು ಸಂತಸ ತಂದಿದೆ. ಆದರೆ, ಇಲ್ಲೊಂದು ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ಹೌದು, 27 ವರ್ಷ ವಯಸ್ಸಿನ ಮಹಿಳೆಯೊಬ್ಬಳಿಗೆ ಕಳೆದ ಜುಲೈನಲ್ಲಿ ಸೋಂಕು ದೃಢವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಯಶಸ್ವಿಯಾಗಿ ಗುಣಮುಖಳು ಸಹ ಆಗಿದ್ದಳು. ನೆಗಟಿವ್ ಬಂದ ನಂತರ ಆಕೆಯನ್ನು ಡಿಸ್ಜಾರ್ಜ್ ಸಹ […]

ಸೋಂಕಿನ ವಿರುದ್ಧ ಗೆದ್ದು ಬಂದ ಬೆಂಗಳೂರು ಮಹಿಳೆಗೆ ಮತ್ತೊಮ್ಮೆ ಕೊರೊನಾ ಪಾಸಿಟಿವ್​
ಕೊರೊನಾ ವೈರಸ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Sep 06, 2020 | 4:10 PM

Share

ಬೆಂಗಳೂರು: ಇಡೀ ವಿಶ್ವವನ್ನೇ ಬಂಧಿಯನ್ನಾಗಿಸಿ ಕೆಲ ಕಾಲ ನರಳುವಂತೆ ಮಾಡಿದ ಮಹಾಮಾರಿ ಕೊರೊನಾ ರಾಜಧಾನಿಯಲ್ಲಿ ಕಡಿಮೆಯಾಗುವ ಲಕ್ಷಣವೇ ತೋರಿಸುತ್ತಿಲ್ಲ. ದಿನದಿಂದ ದಿನಕ್ಕೆ ರಕ್ತಬೀಜಾಸುರನಂತೆ ವ್ಯಾಪಕವಾಗಿ ಹಬ್ಬುತ್ತಿದೆ. ಈ ನಡುವೆ ಸೋಂಕಿನಿಂದ ಹಲವರು ಗುಣಮುಖರಾಗುತ್ತಿರುವುದು ಸಂತಸ ತಂದಿದೆ. ಆದರೆ, ಇಲ್ಲೊಂದು ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.

ಹೌದು, 27 ವರ್ಷ ವಯಸ್ಸಿನ ಮಹಿಳೆಯೊಬ್ಬಳಿಗೆ ಕಳೆದ ಜುಲೈನಲ್ಲಿ ಸೋಂಕು ದೃಢವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಯಶಸ್ವಿಯಾಗಿ ಗುಣಮುಖಳು ಸಹ ಆಗಿದ್ದಳು. ನೆಗಟಿವ್ ಬಂದ ನಂತರ ಆಕೆಯನ್ನು ಡಿಸ್ಜಾರ್ಜ್ ಸಹ ಮಾಡಲಾಗಿತ್ತು.

ಆದರೆ, ಕೇವಲ ಒಂದು ತಿಂಗಳಲ್ಲಿ ಮಹಿಳೆಗೆ ಮತ್ತೊಮ್ಮೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದೆ ಎಂದು ನಗರದ ಫೋರ್ಟಿಸ್​ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಹಾಗಾಗಿ, ಮಹಿಳೆಗೆ ಮತ್ತೊಮ್ಮೆ ಕೊರೊನಾ ಚಿಕಿತ್ಸೆ ಪಡೆದಿದ್ದಾಳೆ ಎಂದು ತಿಳಿದುಬಂದಿದೆ.  ಇದರಿಂದ ಸೋಂಕಿನಿಂದ ಗುಣಮುಖರಾದವರಿಗೂ ಸಹ ಮತ್ತೆ ಸೋಂಕು ತಗಲುತ್ತಿದೆ ಎಂಬ ಆತಂಕಕಾರಿ ಮಾಹಿತಿ ಸಿಕ್ಕಿದೆ.

ಅಂದ ಹಾಗೆ, ಸೋಂಕು ಮರುಕಳಿಸಿರುವ ಪ್ರಕರಣಗಳು ಈಗಾಗಲೇ ಜಗತ್ತಿನಲ್ಲಿ ಕೆಲವೆಡೆ ವರದಿಯಾಗಿದ್ದರೂ ಇದು ಸಿಲಿಕಾನ್ ಸಿಟಿಯಲ್ಲಿ ಮೊದಲನೇ ದಾಖಲಿತ ಕೇಸ್​ ಎಂದು ಫೋರ್ಟಿಸ್​ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಹಾಗಾಗಿ, ಕೊರೊನಾ ಸೋಂಕಿನ ಬಗ್ಗೆ ಜಾಗೃತರಾಗಿರಿ. ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ. ಇಲ್ಲದಿದ್ದರೆ ಈ ಪೆಡಂಭೂತ ಬೇತಾಳದಂತೆ ನಿಮಗೆ ಅಂಟಿಕೊಳ್ಳಲು ಸದಾ ಸಿದ್ಧವಾಗಿರುತ್ತದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್