ಪತ್ನಿ, ಇಬ್ಬರು ಮಕ್ಕಳ ಎದುರು ಜಲಸಮಾಧಿಯಾದ ಮೀನುಗಾರ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಿದರಗಡ್ಡೆ ಗ್ರಾಮದ ತುಂಗಾಭದ್ರಾ ನದಿಯಲ್ಲಿ ಕೌಟುಂಬಿಕ ದುರಂತವೊಂದು ಸಂಭವಿಸಿದೆ. ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ತೆಪ್ಪದಲ್ಲಿ ಕರೆದುಕೊಂಡು ಮೀನಿಗೆ ಬಲೆ ಬಿಡಲು ಮೀನುಗಾರ ರಾಜಪ್ಪ ಮುಂದಾಗಿದ್ದ. 45 ವರ್ಷದ ರಾಜಪ್ಪಗೆ ಆ ವೇಳೆ ಬಿಪಿ ಹೆಚ್ಚಳವಾಗಿ ತಲೆಸುತ್ತು ಬಂದು ನೀರಲ್ಲಿ ಬಿದ್ದಿದ್ದಾನೆ. ಪತ್ನಿ ಧೃತಿಗೆಡದೆ ತೆಪ್ಪ ಹುಟ್ಟುಹಾಕಿಕೊಂಡು ನದಿ ದಡಕ್ಕೆ ಬಂದು ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾಳೆ. ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಶವ ಹುಡುಕಿ ದಡಕ್ಕೆ ತಂದಿದ್ದಾರೆ. ಶವ ಪತ್ತೆಯಾದ ಬಳಿಕ, […]

ಪತ್ನಿ, ಇಬ್ಬರು ಮಕ್ಕಳ ಎದುರು ಜಲಸಮಾಧಿಯಾದ ಮೀನುಗಾರ
ಸಾಧು ಶ್ರೀನಾಥ್​

Updated on: Nov 07, 2020 | 10:02 AM

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಿದರಗಡ್ಡೆ ಗ್ರಾಮದ ತುಂಗಾಭದ್ರಾ ನದಿಯಲ್ಲಿ ಕೌಟುಂಬಿಕ ದುರಂತವೊಂದು ಸಂಭವಿಸಿದೆ. ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ತೆಪ್ಪದಲ್ಲಿ ಕರೆದುಕೊಂಡು ಮೀನಿಗೆ ಬಲೆ ಬಿಡಲು ಮೀನುಗಾರ ರಾಜಪ್ಪ ಮುಂದಾಗಿದ್ದ. 45 ವರ್ಷದ ರಾಜಪ್ಪಗೆ ಆ ವೇಳೆ ಬಿಪಿ ಹೆಚ್ಚಳವಾಗಿ ತಲೆಸುತ್ತು ಬಂದು ನೀರಲ್ಲಿ ಬಿದ್ದಿದ್ದಾನೆ.

ಪತ್ನಿ ಧೃತಿಗೆಡದೆ ತೆಪ್ಪ ಹುಟ್ಟುಹಾಕಿಕೊಂಡು ನದಿ ದಡಕ್ಕೆ ಬಂದು ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾಳೆ. ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಶವ ಹುಡುಕಿ ದಡಕ್ಕೆ ತಂದಿದ್ದಾರೆ. ಶವ ಪತ್ತೆಯಾದ ಬಳಿಕ, ಕುಟುಂಬಸ್ಥರು ಶವಸಂಸ್ಕಾರ ನಡೆಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us