AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್‌ನಿಂದ ಬೆಂಗಳೂರಿಗೆ ಬಂದ 5 ಮಂದಿಗೆ ಕೊರೊನಾ.. ರೂಪಾಂತರಿ ಕೊರೊನಾ ಟೆಸ್ಟ್​ಗೆ ಸ್ಯಾಂಪಲ್ ರವಾನೆ

ಇಂದು ಬೆಳಗ್ಗೆ ಲಂಡನ್‌ನಿಂದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ಐವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಲಂಡನ್‌ನಿಂದ ಬೆಂಗಳೂರಿಗೆ ಬಂದ 5 ಮಂದಿಗೆ ಕೊರೊನಾ.. ರೂಪಾಂತರಿ ಕೊರೊನಾ ಟೆಸ್ಟ್​ಗೆ ಸ್ಯಾಂಪಲ್ ರವಾನೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂಡು ಬಂದ ದೃಶ್ಯ
ಆಯೇಷಾ ಬಾನು
|

Updated on:Jan 11, 2021 | 12:58 PM

Share

ದೇವನಹಳ್ಳಿ: ಬೆಂಗಳೂರಿಗೆ‌ ಮತ್ತೆ ಕೊರೊನಾ ಕಂಟಕ ಹೆಚ್ಚಾಗುತ್ತಿದೆ. ಇಂದು ಬೆಳಗ್ಗೆ ಲಂಡನ್‌ನಿಂದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ಐವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆದರೆ ಅದು ರೂಪಾಂತರಿ ಕೊರೊನಾನಾ ಎಂಬುದು ದೃಢಪಡಬೇಕಿದೆ.

ಏರ್‌ಪೋರ್ಟ್‌ನಲ್ಲಿ ನಡೆಸಿದ ಕೊವಿಡ್ ಟೆಸ್ಟ್‌ನಲ್ಲಿ ಕೊರೊನಾ ಇರುವುದ ದೃಢಪಟ್ಟಿದೆ. ಬೆಳಗ್ಗೆ ಲಂಡನ್‌ನಿಂದ ಕೆಐಎಬಿಗೆ ಸುಮಾರು 247 ಪ್ರಯಾಣಿಕರ ಬಂದಿಳಿದ್ರು. ಇವರ ಪೈಕಿ ಐವರ ಕೊರೊನಾ ವರದಿ ಪಾಸಿಟಿವ್ ಬಂದಿದ್ದು 242 ಜನರ ವರದಿ ನೆಗಟಿವ್ ಬಂದಿದೆ. ಇನ್ನು ಐವರಿಗೆ ರೂಪಾಂತರಿ ಕೊರೊನಾ ಇದೆಯಾ ಎಂದು ಟೆಸ್ಟ್ ಮಾಡಲಾಗುತ್ತಿದೆ.

ಐವರ ಕೊವಿಡ್ ಸ್ಯಾಂಪಲ್ಸ್ ಪರೀಕ್ಷೆ ಬಳಿಕ ರೂಪಾಂತರಿ ಕೊರೊನಾ ಇದೆಯಾ ಎಂಬ ಶಂಕೆಗೆ ತೆರೆ ಬೀಳಲಿದೆ. ಸೊ‌ಂಕಿತರನ್ನ ಕರೆದೋಗಲು ಏರ್ಪೋಟ್​ನಲ್ಲಿ ಆ್ಯಂಬುಲೆನ್ಸ್​ಗಳ‌ ಆಯೋಜನೆ ಮಾಡಲಾಗಿದೆ. ಐವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದೆ.

ಲಂಡನ್‌ನಿಂದ ಬಂದ ಐವರಿಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಒಂದೇ ವಿಮಾನದಲ್ಲಿ ಬಂದ 242 ಪ್ರಯಾಣಿಕರಲ್ಲಿ ಆತಂಕ ಹೆಚ್ಚಾಗಿದೆ. ತಮಗೂ ಸೋಂಕು ಹರಡಿರಬಹುದು ಎಂಬ ಭೀತಿ ಹುಟ್ಟುಕೊಂಡಿದೆ. ಹಾಗೂ ಲಂಡನ್‌ನಿಂದ ಬಂದ ಪ್ರಯಾಣಿಕರು ಕ್ಯಾಬ್‌ಗಳಲ್ಲಿ ತಮ್ಮ ಮನೆಗಳಿಗೆ ತೆರಳಿದ್ದಾರೆ. ಹೀಗಾಗಿ ಕ್ಯಾಬ್ ಚಾಲಕರಲ್ಲಿಯೂ ಕೊರೊನಾ ಆತಂಕ ಮನೆ ಮಾಡಿದೆ.

ರೂಪಾಂತರಿ ವೈರಸ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್​.. ಲಾಕ್​ಡೌನ್​ ಆಯ್ತು; ಮಕ್ಕಳೇ ಹೆಚ್ಚು ಟಾರ್ಗೆಟ್​

Published On - 12:34 pm, Mon, 11 January 21

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್