AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಷೇಪಾರ್ಹ ‘ಸಾಮಾಜಿಕ ಸಂದೇಶ’ಕ್ಕೆ 5 ವರ್ಷ ಜೈಲು: ಕೇರಳ ಸರ್ಕಾರದ ಹೊಸ ಕಾನೂನು

ತಿರುವನಂತಪುರ: ಸಾಮಾಜಿಕ ಮಾಧ್ಯಮ ಅಥವಾ ಜಾಲತಾಣಗಳಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್​ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತೆ ಇದ್ದರೆ ಅಂಥವನ್ನು ಹಾಕಿದವರು ಅಥವಾ ಹಂಚಿಕೊಂಡವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುವ ಸುಗ್ರೀವಾಜ್ಞೆಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮದ್ ಖಾನ್ ಸಹಿ ಹಾಕಿದ್ದಾರೆ. ಅಪರಾಧಕ್ಕೆ ಪ್ರೇರೇಪಿಸುವ ಅಥವಾ ಯಾರಿಗಾದರೂ ಬೆದರಿಕೆಯೊಡ್ಡುವ ಸಂದೇಶವನ್ನು ಯಾವುದೇ ಮಾಧ್ಯಮದ ಮೂಲಕ ಸಿದ್ಧಪಡಿಸುವುದು, ಕಳಿಸುವುದು, ಹಂಚಿಕೊಳ್ಳುವುದು ಅಪರಾಧವಾಗುತ್ತದೆ. ಇಂಥವರಿಗೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ₹ 10,000 ದಂಡ ಅಥವಾ ಎರಡನ್ನೂ ವಿಧಿಸಲು […]

ಆಕ್ಷೇಪಾರ್ಹ ‘ಸಾಮಾಜಿಕ ಸಂದೇಶ’ಕ್ಕೆ 5 ವರ್ಷ ಜೈಲು: ಕೇರಳ ಸರ್ಕಾರದ ಹೊಸ ಕಾನೂನು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 23, 2020 | 11:00 AM

Share

ತಿರುವನಂತಪುರ: ಸಾಮಾಜಿಕ ಮಾಧ್ಯಮ ಅಥವಾ ಜಾಲತಾಣಗಳಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್​ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತೆ ಇದ್ದರೆ ಅಂಥವನ್ನು ಹಾಕಿದವರು ಅಥವಾ ಹಂಚಿಕೊಂಡವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುವ ಸುಗ್ರೀವಾಜ್ಞೆಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮದ್ ಖಾನ್ ಸಹಿ ಹಾಕಿದ್ದಾರೆ.

ಅಪರಾಧಕ್ಕೆ ಪ್ರೇರೇಪಿಸುವ ಅಥವಾ ಯಾರಿಗಾದರೂ ಬೆದರಿಕೆಯೊಡ್ಡುವ ಸಂದೇಶವನ್ನು ಯಾವುದೇ ಮಾಧ್ಯಮದ ಮೂಲಕ ಸಿದ್ಧಪಡಿಸುವುದು, ಕಳಿಸುವುದು, ಹಂಚಿಕೊಳ್ಳುವುದು ಅಪರಾಧವಾಗುತ್ತದೆ. ಇಂಥವರಿಗೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ₹ 10,000 ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಕೇರಳ ಪೊಲೀಸ್ ಕಾಯ್ದೆಗೆ ಹೊಸದೊಂದು ಪರಿಚ್ಛೇದ (118 A) ಸೇರಿಸುವ ಈ ವಿಧಿಗೆ ರಾಜ್ಯಪಾಲರು ಶನಿವಾರ ಸಹಿ ಹಾಕಿದ್ದಾರೆ.

ಈ ಕಾನೂನು ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕಲು ಬಳಕೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ. ಆದರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಕಾನೂನನ್ನು ಸಮರ್ಥಿಸಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈಯಕ್ತಿಕ ನಿಂದನೆ ಹೆಚ್ಚಾಗುತ್ತಿದೆ. ಈ ಪ್ರವೃತ್ತಿಗೆ ಕಡಿವಾಣ ಹಾಕಲು ಕಾನೂನು ಬೇಕಿತ್ತು ಎಂದು ಹೇಳಿದ್ದಾರೆ.

ಸುಗ್ರೀವಾಜ್ಞೆ ವಿರೋಧಿಸಿ ಹೈಕೋರ್ಟ್​ ಮೆಟ್ಟಿಲು ಏರಲು ವಕೀಲ ಅನೂಪ್ ಕುಮಾರನ್ ಸಿದ್ಧರಾಗಿದ್ದಾರೆ. ರಾಜ್ಯ ಸರ್ಕಾರವು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿರುವ ನಿಂದನಾತ್ಮಕ ಪೋಸ್ಟ್​ಗಳಿಂದ ಜನರನ್ನು, ಮುಖ್ಯವಾಗಿ ಮಹಿಳೆಯರ ಘನತೆ ಕಾಪಾಡಲು ಇಂಥ ಕಾನೂನು ಅಗತ್ಯವಿತ್ತು ಎಂದು ಹೇಳುತ್ತಿದೆ. ಆದರೆ ವಾಸ್ತವವಾಗಿ ಇಂಥ ಕಾನೂನುಗಳು ಸರ್ಕಾರವನ್ನು ಟೀಕಿಸುವವರನ್ನು ಹತ್ತಿಕ್ಕಲು ಬಳಕೆಯಾಗುತ್ತದೆ ಎಂದು ಅನೂಪ್ ಕುಮಾರನ್ ಹೇಳಿದ್ದಾರೆ.

ಈ ಹಿಂದೆ ಕೇರಳ ಸರ್ಕಾರ ತನ್ನ ಪೊಲೀಸ್​ ಕಾಯ್ದೆಗೆ 118 (ಡಿ) ವಿಧಿಯನ್ನು ಸೇರ್ಪಡೆಗೊಳಿಸಿ, ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು ಯತ್ನಿಸಿತ್ತು. ಆದರೆ ಸುಪ್ರೀಂ ಕೋರ್ಟ್​ ಈ ವಿಧಿಯ ಸೇರ್ಪಡೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿ, ರದ್ದುಪಡಿಸಿತ್ತು.

ಸಾಮಾಜಿಕ ಮಾಧ್ಯಮಗಳ ಮೂಲಕ ದ್ವೇಷದ ಪ್ರಚಾರ ಹಾಗೂ ವ್ಯಕ್ತಿಗತ ದಾಳಿ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇರಳ ಹೈಕೋರ್ಟ್​ ಕಳೆದ ತಿಂಗಳು ಪೊಲೀಸರಿಗೆ ನಿರ್ದೇಶನ ನೀಡಿತ್ತು. ಈ ಬೆಳವಣಿಗೆಯ ನಂತರ ಕೇರಳ ಸಚಿವ ಸಂಪುಟ ಸುಗ್ರೀವಾಜ್ಞೆಯ ಕರಡನ್ನು ರಾಜ್ಯಪಾಲರಿಗೆ ಕಳಿಸಿಕೊಡಲು ಸಮ್ಮತಿಸಿತ್ತು.

ಕೋವಿಡ್-19 ವ್ಯಾಪಿಸಿದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ ಬಿತ್ತುವ ಯತ್ನಗಳೂ ಹೆಚ್ಚಾಗಿವೆ. ಹಾಲಿ ಅಸ್ತಿತ್ವದಲ್ಲಿರುವ ಕಾನೂನುಗಳಿಂದ ಈ ಪರಿಸ್ಥಿತಿಯನ್ನು ನಿರ್ವಹಿಸಲು ಆಗುವುದಿಲ್ಲ. ಐಟಿ ಕಾಯ್ದೆಯ 66-ಎ ಪರಿಚ್ಛೇದವನ್ನು ಸುಪ್ರೀಂಕೋರ್ಟ್​ ರದ್ದುಪಡಿಸಿದೆ. ದ್ವೇಷ ಹರಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳುವವರನ್ನು ನಿಯಂತ್ರಿಸಲು ಪೊಲೀಸರಿಗೆ ಕಾಯ್ದೆಯ ಬಲ ಬೇಕಿತ್ತು ಎಂದು ಕೇರಳ ಸರ್ಕಾರ ಹೇಳಿದೆ.

Published On - 10:52 am, Mon, 23 November 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ