AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ರೋಣ ತಾಲೂಕಿನ ಕರಮುಡಿ ಗ್ರಾಮದ ವೀರಯೋಧ ವೀರೇಶ ಕುರಹಟ್ಟಿ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಲಿಂಗಾಯತ ವಿಧಿ ವಿಧಾನಗಳ ಮೂಲಕ ಕರಮುಡಿ ಸರ್ಕಾರಿ ಶಾಲೆಯ ಆವರಣದಲ್ಲಿ ಸೈನಿಕನ ಅಂತ್ಯಕ್ರಿಯೆ ನಡೆದಿದೆ. ಡಿಸೆಂಬರ್ 25 ರ ಮುಂಜಾನೆ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ಹೋರಾಡುವಾಗ ನಡೆದ ಗುಂಡಿನ ಚಕಮಕಿಯಲ್ಲಿ ವೀರಯೋಧ ವೀರೇಶ ಕುರಹಟ್ಟಿ(45) […]

ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 31, 2019 | 8:32 AM

Share

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ರೋಣ ತಾಲೂಕಿನ ಕರಮುಡಿ ಗ್ರಾಮದ ವೀರಯೋಧ ವೀರೇಶ ಕುರಹಟ್ಟಿ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಲಿಂಗಾಯತ ವಿಧಿ ವಿಧಾನಗಳ ಮೂಲಕ ಕರಮುಡಿ ಸರ್ಕಾರಿ ಶಾಲೆಯ ಆವರಣದಲ್ಲಿ ಸೈನಿಕನ ಅಂತ್ಯಕ್ರಿಯೆ ನಡೆದಿದೆ.

ಡಿಸೆಂಬರ್ 25 ರ ಮುಂಜಾನೆ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ಹೋರಾಡುವಾಗ ನಡೆದ ಗುಂಡಿನ ಚಕಮಕಿಯಲ್ಲಿ ವೀರಯೋಧ ವೀರೇಶ ಕುರಹಟ್ಟಿ(45) ಹುತಾತ್ಮರಾಗಿದ್ದರು. 1990ರ ಜೂನ್​ನಲ್ಲಿ ವೀರೇಶ ಸೇನೆಗೆ ಸೇರಿದ್ದರು. ಪತ್ನಿ, ಇಬ್ಬರು ಮಕ್ಕಳು, ತಾಯಿ,‌ ಸಹೋದರ ಹಾಗೂ ಸುತ್ತಮುತ್ತಲಿನ ಗ್ರಾಮದ ಸಾವಿರಾರು ಜನರು ವೀರೇಶ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಅಂತಿಮ ನಮನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್, ಸಂಸದ ಪಿ.ಸಿ.ಗದ್ದಿಗೌಡರ್, ಎಡಿಸಿ ರಾಯಪ್ಪ ಹುಣಸಗಿ, ವಿವಿಧ ಮಠಾಧೀಶರು, ಮಾಜಿ ಶಾಸಕರಾದ ಜಿ.ಎಸ್.ಪಾಟೀಲ್, ಬಿ.ಆರ್.ಯಾವಗಲ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

Published On - 8:31 am, Tue, 31 December 19

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್