ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ರೋಣ ತಾಲೂಕಿನ ಕರಮುಡಿ ಗ್ರಾಮದ ವೀರಯೋಧ ವೀರೇಶ ಕುರಹಟ್ಟಿ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಲಿಂಗಾಯತ ವಿಧಿ ವಿಧಾನಗಳ ಮೂಲಕ ಕರಮುಡಿ ಸರ್ಕಾರಿ ಶಾಲೆಯ ಆವರಣದಲ್ಲಿ ಸೈನಿಕನ ಅಂತ್ಯಕ್ರಿಯೆ ನಡೆದಿದೆ. ಡಿಸೆಂಬರ್ 25 ರ ಮುಂಜಾನೆ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ಹೋರಾಡುವಾಗ ನಡೆದ ಗುಂಡಿನ ಚಕಮಕಿಯಲ್ಲಿ ವೀರಯೋಧ ವೀರೇಶ ಕುರಹಟ್ಟಿ(45) […]

ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ
ಸಾಧು ಶ್ರೀನಾಥ್​

Updated on: Dec 31, 2019 | 8:32 AM

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ರೋಣ ತಾಲೂಕಿನ ಕರಮುಡಿ ಗ್ರಾಮದ ವೀರಯೋಧ ವೀರೇಶ ಕುರಹಟ್ಟಿ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಲಿಂಗಾಯತ ವಿಧಿ ವಿಧಾನಗಳ ಮೂಲಕ ಕರಮುಡಿ ಸರ್ಕಾರಿ ಶಾಲೆಯ ಆವರಣದಲ್ಲಿ ಸೈನಿಕನ ಅಂತ್ಯಕ್ರಿಯೆ ನಡೆದಿದೆ.

ಡಿಸೆಂಬರ್ 25 ರ ಮುಂಜಾನೆ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ಹೋರಾಡುವಾಗ ನಡೆದ ಗುಂಡಿನ ಚಕಮಕಿಯಲ್ಲಿ ವೀರಯೋಧ ವೀರೇಶ ಕುರಹಟ್ಟಿ(45) ಹುತಾತ್ಮರಾಗಿದ್ದರು. 1990ರ ಜೂನ್​ನಲ್ಲಿ ವೀರೇಶ ಸೇನೆಗೆ ಸೇರಿದ್ದರು. ಪತ್ನಿ, ಇಬ್ಬರು ಮಕ್ಕಳು, ತಾಯಿ,‌ ಸಹೋದರ ಹಾಗೂ ಸುತ್ತಮುತ್ತಲಿನ ಗ್ರಾಮದ ಸಾವಿರಾರು ಜನರು ವೀರೇಶ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಅಂತಿಮ ನಮನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್, ಸಂಸದ ಪಿ.ಸಿ.ಗದ್ದಿಗೌಡರ್, ಎಡಿಸಿ ರಾಯಪ್ಪ ಹುಣಸಗಿ, ವಿವಿಧ ಮಠಾಧೀಶರು, ಮಾಜಿ ಶಾಸಕರಾದ ಜಿ.ಎಸ್.ಪಾಟೀಲ್, ಬಿ.ಆರ್.ಯಾವಗಲ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

Published On - 8:31 am, Tue, 31 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us