AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರತ್ವದ ಜ್ವಾಲೆಗೆ ಧಗಧಗಿಸಿದ ಮಂಗಳೂರು, ಫೈರಿಂಗ್​ನಲ್ಲಿ ಇಬ್ಬರು ಸಾವು

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿತ್ತು. ಪೊಲೀಸರ ಗುಂಡೇಟಿನಿಂದ ಮಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದರು. ಇಂದಿನ ಪ್ರತಿಭಟನೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಮತ್ತು ಧಾರ್ಮಿಕ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು. ಪ್ರತಿಭಟನೆ ವೇಳೆ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಗಲಾಟೆ ವೇಳೆ ಕಂದಕ್ ನಿವಾಸಿ ಜಲೀಲ್(49) ಮತ್ತು ಬೆಂಗ್ರೆ ನಿವಾಸಿ ನೌಶೀನ್(23) ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುದ್ದಿಗೋಷ್ಠಿಯಲ್ಲಿ […]

ಪೌರತ್ವದ ಜ್ವಾಲೆಗೆ ಧಗಧಗಿಸಿದ ಮಂಗಳೂರು, ಫೈರಿಂಗ್​ನಲ್ಲಿ ಇಬ್ಬರು ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 31, 2019 | 8:41 AM

Share

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿತ್ತು. ಪೊಲೀಸರ ಗುಂಡೇಟಿನಿಂದ ಮಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದರು.

ಇಂದಿನ ಪ್ರತಿಭಟನೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಮತ್ತು ಧಾರ್ಮಿಕ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು. ಪ್ರತಿಭಟನೆ ವೇಳೆ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಗಲಾಟೆ ವೇಳೆ ಕಂದಕ್ ನಿವಾಸಿ ಜಲೀಲ್(49) ಮತ್ತು ಬೆಂಗ್ರೆ ನಿವಾಸಿ ನೌಶೀನ್(23) ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುದ್ದಿಗೋಷ್ಠಿಯಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮಸೂದ್ ಮನವಿ ಮಾಡಿದ್ದರು.

ಪ್ರತಿಭಟನೆ ನಿಯಂತ್ರಿಸಲು ಕರ್ಫ್ಯೂ ಜಾರಿ: ಮಂಗಳೂರಿನಲ್ಲಿ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು. ಪೊಲೀಸರು ಸಹ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ್ದರು. ಆದರೂ ಹಿಂಸಾಚಾರ ನಿಂಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಬಳಿಕ ಮಂಗಳೂರು ನಗರದ ಕೇಂದ್ರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಆದೇಶಿಸಿದ್ದರು.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್