AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಹಿರಾತು ಫಲಕಗಳ ಹಾವಳಿ: ಶತಾಯುಷಿ ಮರಗಳು ಹೇಳುತ್ತಿವೆ ಕಣ್ಣೀರ ಕತೆ

ತಮ್ಮ ಸಂಸ್ಥೆಗಳ ಜಾಹೀರಾತಿಗೆ ಇದೇ ಗಿಡಗಳನ್ನು ಬಳಸಿಕೊಳ್ಳುತ್ತಿರೋದೇ ಸಮಸ್ಯೆಗೆ ಕಾರಣವಾಗಿದೆ. ಹೀಗೆ ಮರಗಳಿಗೆ ಹತ್ತಾರು ತಾರ್ ಮೊಳೆ ಹೊಡೆದು ಜಾಹಿರಾತುಗಳನ್ನು ನೇತು ಹಾಕಿದವರ ಸಂಪರ್ಕ, ವಿಳಾಸವಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ದೂರು ದಾಖಲಿಸಲು ಮನಸ್ಸು ಮಾಡುತ್ತಿಲ್ಲ!

ಜಾಹಿರಾತು ಫಲಕಗಳ ಹಾವಳಿ: ಶತಾಯುಷಿ ಮರಗಳು ಹೇಳುತ್ತಿವೆ ಕಣ್ಣೀರ ಕತೆ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 30, 2020 | 2:52 PM

Share

ಧಾರವಾಡ: ವಿದ್ಯಾಕಾಶಿ ಧಾರವಾಡ ಸಸ್ಯಕಾಶಿಯೂ ಹೌದು. ಇಲ್ಲಿನ ಅದ್ಭುತ ಪರಿಸರಕ್ಕೆ ಕಾರಣ ನೂರಾರು ವರ್ಷಗಳಿಂದ ಬೆಳೆದು ನಿಂತಿರೋ ಗಿಡ-ಮರಗಳು. ಆದರೆ ಇಂಥ ಮರಗಳು ಸ್ವಾರ್ಥಿಗಳಿಂದಾಗಿ ಕಣ್ಣೀರು ಹಾಕುವಂತಾಗಿದೆ.

ಶತಮಾನ ಕಂಡ ಅರಳಿ, ಆಲ, ಅತ್ತಿ ಮತ್ತು ಹುಣಿಸೆ ಮರಗಳೂ ಸೇರಿದಂತೆ, ಅರಣ್ಯ ಇಲಾಖೆ ಸಾಮಾಜಿಕ ಅರಣ್ಯೀಕರಣ ಯೋಜನೆಯಡಿ ರಸ್ತೆ ಬದಿಗೆ ನೆಟ್ಟ ರೇನ್ ಟ್ರೀ, ಪೆಥೋಡಿಯ, ಫಾರೆಸ್ಟ್ ಫ್ಲೇಮ್ ಮರಗಳಿಗೆ ಧಾರವಾಡದ ತುಂಬ ಅನಧಿಕೃತ ಜಾಹಿರಾತುಗಳನ್ನು ಹತ್ತಾರು ಮೊಳೆ ಹೊಡೆದು ನೇತು ಹಾಕಲಾಗುತ್ತಿದೆ. ಈ ಮುಂಚೆ ಹಲವಾರು ಬಾರಿ ಪರಿಸರ ಪ್ರೇಮಿ ಸಂಘಟನೆಗಳು ಇದರ ವಿರುದ್ಧ ಹೋರಾಟ ನಡೆಸಿವೆ.

ಮೊಳೆ ಕಿತ್ತು ಹಾಕಿ, ಜಾಹಿರಾತು ಫಲಕ ತೆಗೆದು ಹಾಕಿ ಎಚ್ಚರಿಕೆಯನ್ನು ನೀಡಿದ್ದವು. ಈ ರೀತಿ ಮಾಡುವುದರಿಂದ ಮರಗಳಿಗೆ ನಂಜಾಗಬಹುದು ಅನ್ನೋ ಆತಂಕ ಹೋರಾಟಗಾರರದ್ದು. ಆದರೆ ಇದೀಗ ಮತ್ತೆ ಜಾಹಿರಾರು ಫಲಕಗಳನ್ನು ಮತ್ತೆ ಗಿಡ-ಮರಗಳ ಕಾಂಡಕ್ಕೆ ಮೊಳೆಗಳನ್ನು ಬಳಸಿ ಅಳವಡಿಸಲಾಗಿದೆ. ‌ಜಿಲ್ಲಾಧಿಕಾರಿಗಳ ಕಚೇರಿಯ ಸುತ್ತಮುತ್ತಲಿನ ಗಿಡಗಳಿಗೂ ಇಂಥದ್ದೇ ಸ್ಥಿತಿ ಬಂದೊದಗಿದೆ. ಧಾರವಾಡ ವಿದ್ಯಾಕಾಶಿಯೂ ಆಗಿರುವುದರಿಂದ ಇಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಟ್ಯುಟೋರಿಯಲ್, ಪಿಜಿಗಳಿವೆ. ಅನೇಕ ಶಾಲಾ-ಕಾಲೇಜುಗಳಿವೆ.

ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ದೂರು ದಾಖಲಿಸಲು ಮನಸ್ಸು ಮಾಡುತ್ತಿಲ್ಲ.. ಇವರೆಲ್ಲ ತಮ್ಮ ಸಂಸ್ಥೆಗಳ ಜಾಹೀರಾತಿಗೆ ಇದೇ ಗಿಡಗಳನ್ನು ಬಳಸಿಕೊಳ್ಳುತ್ತಿರೋದೇ ಸಮಸ್ಯೆಗೆ ಕಾರಣವಾಗಿದೆ. ಹೀಗೆ ಮರಗಳಿಗೆ ಹತ್ತಾರು ತಾರ್ ಮೊಳೆ ಹೊಡೆದು ಜಾಹಿರಾತುಗಳನ್ನು ನೇತು ಹಾಕಿದವರ ಸಂಪರ್ಕ, ವಿಳಾಸವಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ದೂರು ದಾಖಲಿಸಲು ಮನಸ್ಸು ಮಾಡುತ್ತಿಲ್ಲ! ಇಲಾಖೆ ಕಟ್ಟುನಿಟ್ಟಾಗಿ ಕ್ರಮ ಕೈಗೊಂಡರೆ ಜಾಹಿರಾತು ಫಲಕ ಅಳವಡಿಸುವವರು ಈ ಪರಿಯ ದಾರ್ಷ್ಟ್ಯದ ನಡೆಯನ್ನು ತೋರಲಾರರು. ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯೇ ಇದಕ್ಕೆ ಕಾರಣವಾಗಿದೆ.

ಇದೆಲ್ಲ ಒಂದು ಕಡೆಯಾದರೆ ಹಲವಾರು ಕಡೆಗಳಲ್ಲಿ ವಿದ್ಯುತ್ ಕಂಬಗಳ ಬೀಳದಂತೆ ಅವುಗಳ ಆಧಾರಕ್ಕೆ ದಪ್ಪನೆಯ ತಂತಿಯನ್ನು ಕಟ್ಟಿ, ಪಕ್ಕದ ಗಿಡಗಳಿಗೆ ವೈರ್ ಬಿಗಿದ ಪರಿಣಾಮ ಗಿಡಕ್ಕೆ ಶಾಶ್ವತ ಕಚ್ಚು ಬಿದ್ದಿವೆ. ತಂತಿಗಳನ್ನು ತಮ್ಮ ಉದರದಲ್ಲಿಯೇ ಸಿಕ್ಕಿಸಿಕೊಂಡು ಗಿಡಗಳು ಬೆಳೆಯುತ್ತಿವೆ. ಇಷ್ಟೆಲ್ಲಾ ಕಣ್ಣಿಗೆ ಕಾಣುತ್ತಿದ್ದರೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಾಗಲೀ, ಅರಣ್ಯ ಇಲಾಖೆಯ ಅಧಿಕಾರಿಗಳಾಗಲೀ ಜಾಣಗುರುಡರಂತೆ ವರ್ತಿಸುತ್ತಿರೋದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. -ನರಸಿಂಹಮೂರ್ತಿ ಪ್ಯಾಟಿ

ಇದನ್ನೂ ಓದಿ: ಗಂಧದ ನಾಡು ಆಗುವತ್ತ ಕಲ್ಪತರು ನಾಡು

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ