ಮೈಸೂರು-ಮಂಗಳೂರಿಗೆ ವಿಮಾನ ಹಾರಾಟ ಶುರು.. ವಿಮಾನಯಾನಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ

ಮೈಸೂರಿನಿಂದ ಮಂಗಳೂರಿಗೆ ಹೊರಡುವ ಅಲೈಯನ್ಸ್ ಏರ್ ಸಂಸ್ಥೆಯ ವಿಮಾನಯಾನಕ್ಕೆ ಸಂಸದ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರಿಸಿದ್ದಾರೆ. ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ.

ಮೈಸೂರು-ಮಂಗಳೂರಿಗೆ ವಿಮಾನ ಹಾರಾಟ ಶುರು.. ವಿಮಾನಯಾನಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Dec 11, 2020 | 12:57 PM

ಮೈಸೂರು: ಅರಮನೆ ನಗರಿಯಲ್ಲಿ ಸಂಸದ ಪ್ರತಾಪ್ ಸಿಂಹ ನೂತನ ಮಂಗಳೂರು ವಿಮಾನ ಹಾರಾಟಕ್ಕೆ ಚಾಲನೆ ನೀಡಿದ್ದಾರೆ. ಮೈಸೂರಿನಿಂದ ಮಂಗಳೂರಿಗೆ ಹೊರಡುವ ಅಲೈಯನ್ಸ್ ಏರ್ ಸಂಸ್ಥೆಯ ವಿಮಾನಯಾನಕ್ಕೆ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರಿಸಿದ್ದಾರೆ.

ಇದು ಚಾಲನೆ ಸಿಕ್ಕಿದ್ದು, ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಮೈಸೂರಿನಿಂದ ಮಂಗಳೂರಿಗೆ 33 ಟಿಕೆಟ್ ಬುಕ್ ಆಗಿದ್ದು, 23 ಪ್ರಯಾಣಿಕರು ಹಾರಾಟ ನಡೆಸಿದ್ದಾರೆ. ಬುಧವಾರ, ಶುಕ್ರವಾರ, ಶನಿವಾರ, ಭಾನುವಾರ ಮಾತ್ರ ಈ ವಿಮಾನ ಹಾರಾಟಲಿದೆ. ಬೆಳಗ್ಗೆ 10.50ಕ್ಕೆ ಮೈಸೂರಿನಿಂದ ಮಗಳೂರಿಗೆ ಹೊರಡುತ್ತೆ.

ಬೆಳಿಗ್ಗೆ 11.20 ಗಂಟೆಗೆ ಮೈಸೂರಿನಿಂದ ಹೊರಡುವ ವಿಮಾನವು ಮಧ್ಯಾಹ್ನ 12.30 ಗಂಟೆಗೆ ಮಂಗಳೂರು ತಲುಪಲಿದೆ. ಹಾಗೆಯೇ ಮಧ್ಯಾಹ್ನ 12-55 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 1.55 ಗಂಟೆಗೆ ಮೈಸೂರು ತಲುಪಲಿದೆ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಆರ್.ಮಂಜುನಾಥ ತಿಳಿಸಿದ್ದಾರೆ.

ಮಿಲಿಟರಿ ವಿಮಾನದಲ್ಲೇ ದರೋಡೆ! 39 ರೇಡಿಯೋ ಉಪಕರಣಗಳ ಕಳವು; ದರೋಡೆಕೋರರ​ ಶೂ-ಬೆರಳಚ್ಚು ಪತ್ತೆ

Published On - 12:57 pm, Fri, 11 December 20

Loading...
Unable to load recommendations.
Follow Us