AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನಿಗೆ ಎದೆನೋವು: ದೆಹಲಿಗೆ ಹೊರಟಿದ್ದ ವಿಮಾನ ನಾಗಪುರದಲ್ಲಿ ತುರ್ತು ಭೂಸ್ಪರ್ಶ

ಮಾರ್ಗಮಧ್ಯೆ ತೀವ್ರ ಎದೆನೋಯುತ್ತಿದೆ ಎಂದು ವಿಮಾನದ ಸಿಬ್ಬಂದಿಯ ಬಳಿ ಹೇಳಿಕೊಂಡಿದ್ದರು. ಈ ವಿಷಯವನ್ನು ಸಿಬ್ಬಂದಿ ಪೈಲಟ್ ಗಮನಕ್ಕೆ ತಂದಿದ್ದರು.

ಪ್ರಯಾಣಿಕನಿಗೆ ಎದೆನೋವು: ದೆಹಲಿಗೆ ಹೊರಟಿದ್ದ ವಿಮಾನ ನಾಗಪುರದಲ್ಲಿ ತುರ್ತು ಭೂಸ್ಪರ್ಶ
ನಾಗಪುರ ವಿಮಾನ ನಿಲ್ದಾಣದಲ್ಲಿ ಇಂಡಿಗೊ ವಿಮಾನ
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 14, 2021 | 10:55 PM

Share

ನಾಗಪುರ: ದೆಹಲಿಗೆ ಹೊರಟಿದ್ದ ಇಂಡಿಗೊ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಿದ ಕಾರಣ ಪೈಲಟ್ ವಿಮಾನವನ್ನು ನಾಗಪುರ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದರು. ವಿಮಾನ ನಿಲ್ದಾಣದ ಪೊಲೀಸರು ತುರ್ತಾಗಿ ಪ್ರಯಾಣಿಕನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಆತನ ಜೀವ ಉಳಿಯಲಿಲ್ಲ. ಈ ಘಟನೆ ಶನಿವಾರ ನಡೆದಿದ್ದು, ಭಾನುವಾರ ಈ ಕುರಿತು ಪಿಟಿಐ ಸುದ್ದಿಸಂಸ್ಥೆ ವರದಿ ಪ್ರಕಟಿಸಿದೆ.

ಬಿಹಾರದ ಗಯಾ ನಿವಾಸಿ ಚೋಟುಸಿಂಗ್ ನಾರಾಯಣಸಿಂಗ್ ಯಾದವ್ (65) ಚೆನ್ನೈನಲ್ಲಿ ಶನಿವಾರ ಮುಂಜಾನೆ ವಿಮಾನ ಹತ್ತಿದ್ದರು. ಮಾರ್ಗಮಧ್ಯೆ ತೀವ್ರ ಎದೆನೋಯುತ್ತಿದೆ ಎಂದು ವಿಮಾನದ ಸಿಬ್ಬಂದಿಯ ಬಳಿ ಹೇಳಿಕೊಂಡಿದ್ದರು. ಈ ವಿಷಯವನ್ನು ಸಿಬ್ಬಂದಿ ಪೈಲಟ್ ಗಮನಕ್ಕೆ ತಂದಿದ್ದರು.

ನಾಗಪುರದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತುಭೂಸ್ಪರ್ಶಕ್ಕೆ ಅನುಮತಿ ಕೋರಿ, ವಿಮಾನವನ್ನು ಕೆಳಗಿಳಿಸಲಾಯಿತು. ರೋಗಿಯನ್ನು ಕೂಡಲೇ ನಗರದ ಸರ್ಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವ ಮೊದಲೇ ನಾರಾಯಣ್ ಸಿಂಗ್ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.

ಇದನ್ನೂ ಓದಿ: ಎದೆನೋವಿನಿಂದ ಸಾವು; ಶಾರ್ಜಾದಿಂದ ಲಕ್ನೋಗೆ ಹೊರಟ ವಿಮಾನ ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ