AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಷಾರು! ಮೈಸೂರಿನಲ್ಲಿ ಹಾವುಗಳು ಹಾರುತಿವೆ..

ಮೈಸೂರು: ಪಶ್ಚಿಮ ಘಟ್ಟದ ಕಾಡುಗಳಲ್ಲಿ ಕಾಣಿಸಿಕೊಳ್ಳುವ ಹಾರುವ ಹಾವು ಮೈಸೂರಿನಲ್ಲಿ ಪ್ರತ್ಯಕ್ಷವಾಗಿ ಜನರಲ್ಲಿ‌ ಕುತೂಹಲ ಮೂಡಿಸಿದೆ. ಮೈಸೂರಿನ ರಾಮಾನುಜ ರಸ್ತೆಯ ವೆಂಕಟರಮಣ ಎಂಬುವರ ಮನೆಯ ಪಕ್ಕದಲ್ಲಿದ್ದ ಮರದ ಮೇಲಿಂದ ಹಾವು ಮನೆಯ ಮೇಲ್ಛಾವಣಿಗೆ ಬಿದ್ದಿದೆ. ನಂತರ ಮನೆ ಬಾಗಿಲಿನ ಗ್ರಿಲ್​ನಲ್ಲಿ ಕಳೆದ ರಾತ್ರಿ ಕಾಣಿಸಿಕೊಂಡಿದೆ. ಹಾವನ್ನು ನೋಡಿ ಗಾಬರಿಗೊಂಡ ಮನೆಯ ಮಾಲೀಕರು ಉರಗ ತಜ್ಞರನ್ನು ಸಂಪರ್ಕ ಮಾಡಿದ್ದಾರೆ. ಮತ್ತೆ ಮಾಲೀಕ ನೋಡುವಷ್ಟರಲ್ಲಿ ಹಾವು ನಾಪತ್ತೆಯಾಗಿದೆ. ಮನೆಯಲ್ಲಿ ಕಾಣಿಸಿಕೊಂಡಿದ್ದ ವೇಳೆ ಮನೆಯವರು ತಮ್ಮ ಮೊಬೈಲ್​ನಲ್ಲಿ ಫೋಟೋ ಸೆರೆ ಹಿಡಿದಿದ್ದು, […]

ಹುಷಾರು! ಮೈಸೂರಿನಲ್ಲಿ ಹಾವುಗಳು ಹಾರುತಿವೆ..
ಸಾಧು ಶ್ರೀನಾಥ್​
|

Updated on:Jun 05, 2020 | 5:02 PM

Share

ಮೈಸೂರು: ಪಶ್ಚಿಮ ಘಟ್ಟದ ಕಾಡುಗಳಲ್ಲಿ ಕಾಣಿಸಿಕೊಳ್ಳುವ ಹಾರುವ ಹಾವು ಮೈಸೂರಿನಲ್ಲಿ ಪ್ರತ್ಯಕ್ಷವಾಗಿ ಜನರಲ್ಲಿ‌ ಕುತೂಹಲ ಮೂಡಿಸಿದೆ. ಮೈಸೂರಿನ ರಾಮಾನುಜ ರಸ್ತೆಯ ವೆಂಕಟರಮಣ ಎಂಬುವರ ಮನೆಯ ಪಕ್ಕದಲ್ಲಿದ್ದ ಮರದ ಮೇಲಿಂದ ಹಾವು ಮನೆಯ ಮೇಲ್ಛಾವಣಿಗೆ ಬಿದ್ದಿದೆ. ನಂತರ ಮನೆ ಬಾಗಿಲಿನ ಗ್ರಿಲ್​ನಲ್ಲಿ ಕಳೆದ ರಾತ್ರಿ ಕಾಣಿಸಿಕೊಂಡಿದೆ.

ಹಾವನ್ನು ನೋಡಿ ಗಾಬರಿಗೊಂಡ ಮನೆಯ ಮಾಲೀಕರು ಉರಗ ತಜ್ಞರನ್ನು ಸಂಪರ್ಕ ಮಾಡಿದ್ದಾರೆ. ಮತ್ತೆ ಮಾಲೀಕ ನೋಡುವಷ್ಟರಲ್ಲಿ ಹಾವು ನಾಪತ್ತೆಯಾಗಿದೆ. ಮನೆಯಲ್ಲಿ ಕಾಣಿಸಿಕೊಂಡಿದ್ದ ವೇಳೆ ಮನೆಯವರು ತಮ್ಮ ಮೊಬೈಲ್​ನಲ್ಲಿ ಫೋಟೋ ಸೆರೆ ಹಿಡಿದಿದ್ದು, ಅದನ್ನು ಉರಗ ತಜ್ಞ ಸ್ನೇಕ್ ಶಾಮ್ ಅವರಿಗೆ ತೋರಿಸಿದಾಗ ಇದು ಹಾರುವ ಹಾವು ಎಂದು ತಿಳಿದು ಬಂದಿದೆ.

ಹಾರುವ ಹಾವಿನ ವಿಶೇಷ ಭಾರತದಲ್ಲಿರುವ 270ಕ್ಕೂ ಹೆಚ್ಚು ವಿಧದ ಹಾವುಗಳಲ್ಲಿ ಈ ಹಾರುವ ಹಾವು ಕೂಡ ಒಂದಾಗಿದೆ. ಈ ಹಾವು ಸಾಮಾನ್ಯವಾಗಿ ಎತ್ತರದ ಮರದಲ್ಲಿ ವಾಸಮಾಡುತ್ತದೆ. ಈ ಹಾವುಗಳು ನೆಲದಲ್ಲಿ ಸಂಚಾರ ಮಾಡುವುದಕ್ಕಿಂತ ಹೆಚ್ಚಾಗಿ ಮರದಿಂದ ಮರಕ್ಕೆ ಹಾರಿ ಆಹಾರ ಹುಡುಕಿಕೊಳ್ಳುತ್ತವೆ. ಹೆಚ್ಚಾಗಿ ಹಸಿರು ಹಾಗೂ ಎತ್ತರದ ಮರಗಳಿರುವ ಮಲೆನಾಡು ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತವೆ.

ಅದರಲ್ಲಿ ಸಣ್ಣ ಕೀಟಗಳು, ಪಕ್ಷಿ ಮೊಟ್ಟೆ, ಹಲ್ಲಿಗಳು, ಓತಿಕ್ಯಾತಗಳನ್ನು ತಿಂದು ಜೀವಿಸುತ್ತವೆ. ನೋಡಲು ಸುಂದರವಾಗಿರುವ ಈ ಹಾವು, ಕೆಂಪು, ಕಪ್ಪು, ಕಂದು ಬಣ್ಣದಲ್ಲಿರುತ್ತವೆ. ಈ ಹಾವುಗಳಿಗೆ ರೆಕ್ಕೆ ಇಲ್ಲದಿದ್ದರು ಎತ್ತರ ಮರದಿಂದ ಸಣ್ಣ ಮರದ ಕಡೆ ಗಾಳಿಯಲ್ಲಿ ತೇಲುತ್ತವೆ. ಭಾರತದಲ್ಲಿ ಮರದ ಹಾವು ಸಾಕಷ್ಟಿದ್ದರೂ, ಹಾರುವ ಹಾವು ಇದೊಂದೆ ಎಂಬುದು ವಿಶೇಷ.

ಮೈಸೂರಿಗೆ ಬಂದಿದ್ದು ಹೇಗೆ? ಮಲೆನಾಡು ಪ್ರದೇಶದ ದಟ್ಟ ಕಾಡುಗಳಲ್ಲಿ ಕಾಣಿಸುವ ಈ ಹಾವು ಮೈಸೂರಿನಲ್ಲಿ ಹೇಗೆ ಕಾಣಿಸಿಕೊಂಡಿದೆ ಎಂಬುದು ಸಹಜವಾಗಿಯೇ ಮೂಡವ ಪ್ರಶ್ನೆ. ಈ ಹಾವು ಮರದಿಂದ ಹಾರುವ ಹಾವುಗಳಾಗಿದ್ದು ಮಲೆನಾಡು ಪ್ರದೇಶದ ಕಾಡುಗಳಲ್ಲಿ ಹಾದು ಬರುವ ಲಾರಿಯಂತ ವಾಹನಗಳ ಮೇಲೆ ಬಿದ್ದು ಇಲ್ಲಿಗೆ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೈಸೂರಿನಲ್ಲಿ ಕಳೆದ ಮೂರು ತಿಂಗಳ ಹಿಂದೆ ನಗರದ ಕೈಗಾರಿಕ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಅದಾದ ನಂತರ ಅಗ್ರಹಾರದಲ್ಲಿ ಕಾಣಿಸಿದೆ. ಇದು ವಿಷಕಾರಿ ಹಾವಲ್ಲ, ಮನುಷ್ಯನಿಗೆ ಕಚ್ಚಿದರೆ ಅಪಾಯವಿಲ್ಲ. ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿ ಈ ಹಾವುಗಳು ಕಂಡು ಬರುತ್ತವೆ.

Published On - 4:52 pm, Fri, 5 June 20

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್