AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಟುತ್ತಾ ಸಾಗಿದೆ ಸೋನಿ ವರ್ಲ್ಡ್ ಸಿಗ್ನಲ್ ಬಳಿ ಫ್ಲೈಓವರ್ ಕಾಮಗಾರಿ, ತಲೆಯ ಮೇಲೆ ಕೈಹೊತ್ತು ಕುಳಿತಿದೆ ಬಿಬಿಎಂಪಿ!

simplex infrastructure company :ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಇತಿಹಾಸ ಕೆದಕಿದಾಗ ನಮ್ಮ ಮೆಟ್ರೋದ BMRCL ಸಂಸ್ಥೆಯ ಬಳಿಯೂ ಟೆಂಡರ್ ಪಡೆದಿತ್ತು. ಅಲ್ಲೂ ಕಾಮಗಾರಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ BMRCL ಗುತ್ತಿಗೆಯನ್ನು ರದ್ದು ಮಾಡಿತ್ತು. ಈಗ ಹಣವಿಲ್ಲವೆಂದು ಫ್ಲೈಓವರ್ ಕಾಮಗಾರಿ ಮಾಡದೇ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಕಂಪನಿ ಕೈಕಟ್ಟಿ ಕುಳಿತಿದೆ. ಹಾಗಾಗಿ ಸ್ವತಃ ಬಿಬಿಎಂಪಿಯೇ ಫ್ಲೈಓವರ್ ನಿರ್ಮಿಸಲು ನಿರ್ಧರಿಸಿದೆ.

ಕುಂಟುತ್ತಾ ಸಾಗಿದೆ ಸೋನಿ ವರ್ಲ್ಡ್ ಸಿಗ್ನಲ್ ಬಳಿ ಫ್ಲೈಓವರ್ ಕಾಮಗಾರಿ, ತಲೆಯ ಮೇಲೆ ಕೈಹೊತ್ತು ಕುಳಿತಿದೆ ಬಿಬಿಎಂಪಿ!
ಕುಂಟುತ್ತಾ ಸಾಗಿದೆ ಸೋನಿ ವರ್ಲ್ಡ್ ಸಿಗ್ನಲ್ ಬಳಿ ಫ್ಲೈಓವರ್ ಕಾಮಗಾರಿ, ತಲೆಯ ಮೇಲೆ ಕೈಹೊತ್ತು ಕುಳಿತಿದೆ ಬಿಬಿಎಂಪಿ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 04, 2021 | 9:54 AM

ಬೆಂಗಳೂರು: ಸುಮಾರು 206 ಕೋಟಿ ರೂ. ವೆಚ್ಚದ ಸೋನಿ ವರ್ಲ್ಡ್ ಸಿಗ್ನಲ್ ಬಳಿಯ ಫ್ಲೈಓವರ್ ನಿರ್ಮಾಣ ಕಾಮಗಾರಿ ಎಂದಿನಂತೆ ಕುಂಟುತ್ತಾ ಸಾಗಿದೆ. ಇದಕ್ಕೆ ಕಾರಣವಾಗಿರುವುದು ಎಂದಿನಂತೆ BBMP ಯಡವಟ್ಟು. ಅರ್ಹತೆ ಇಲ್ಲದ ಕಂಪನಿಗೆ ಫ್ಲೈಓವರ್ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆ ನೀಡಿರುವ ಬಿಬಿಎಂಪಿ ಈಗ ತಲೆಯ ಮೇಲೆ ಕೈಹೊತ್ತುಕುಳಿತಿದೆ. ಸೋನಿ ವರ್ಲ್ಡ್ ಸಿಗ್ನಲ್ ಬಳಿ ಫ್ಲೈಓವರ್ ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿದ್ದ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಕಂಪನಿಯು ಹಣ ಇಲ್ಲವೆಂದು ಫ್ಲೈಓವರ್ ಕಾಮಗಾರಿ ಕೈಬಿಟ್ಟಿದೆ.

ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಕಂಪನಿ ನಮ್ಮಮೆಟ್ರೋಗೂ ಹೀಗೆಯೇ ಮಾಡಿತ್ತು: ಈಜಿಪುರ ದಿಂದ ಕೇಂದ್ರಿಯ ವಿದ್ಯಾಯಲದವರೆಗೂ 206 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ಕಾಮಗಾರಿಗೆ ಗುತ್ತಿಗೆ ನೀಡಲಾಗಿತ್ತು. 2019ಕ್ಕೆ ಮುಕ್ತಾಯಗೊಳ್ಳಬೇಕಿದ್ದ 2.5 ಕಿಮೀ ಉದ್ದದ ಸೋನಿ ವರ್ಲ್ಡ್ ಸಿಗ್ನಲ್ ಬಳಿಯ ಫ್ಲೈಓವರ್ ಇದಾಗಿದೆ (Koramangala Flyover). ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ತನ್ನ ಬಳಿ ಅಷ್ಟೊಂದು ಹಣವಿಲ್ಲವೆಂದು ಕೈಚೆಲ್ಲಿ ಸುಮ್ಮನಾಗಿದೆ!

ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಇತಿಹಾಸ ಕೆದಕಿದಾಗ ನಮ್ಮ ಮೆಟ್ರೋದ BMRCL ಸಂಸ್ಥೆಯ ಬಳಿಯೂ ಟೆಂಡರ್ ಪಡೆದಿತ್ತು. ಅಲ್ಲೂ ಕಾಮಗಾರಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ BMRCL ಗುತ್ತಿಗೆಯನ್ನು ರದ್ದು ಮಾಡಿತ್ತು. ಈಗ ಹಣವಿಲ್ಲವೆಂದು ಫ್ಲೈಓವರ್ ಕಾಮಗಾರಿ ಮಾಡದೇ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಕಂಪನಿ ಕೈಕಟ್ಟಿ ಕುಳಿತಿದೆ. ಹಾಗಾಗಿ ಸ್ವತಃ ಬಿಬಿಎಂಪಿಯೇ ಫ್ಲೈಓವರ್ ನಿರ್ಮಿಸಲು ನಿರ್ಧರಿಸಿದೆ.

BBMP ಅಧಿಕಾರಿಗಳು ಟೆಂಡರ್ ನೀಡುವಾಗ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದರು. ಟೆಂಡರ್ ಪಡೆದ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಬಳಿ ದುಡ್ಡಿಲ್ಲದ ಕಾರಣ ಕಾಮಗಾರಿ ಮಾಡದೆ ಕೈ ಎತ್ತಿದೆ. ಇದೀಗ, ಅನ್ಯ ಮಾರ್ಗ ಕಾಣದೆ ಬಿಬಿಎಂಪಿ ಅಧಿಕಾರಿಗಳು (Bruhat Bengaluru Mahanagara Palike) ಫ್ಲೈಓವರ್ ನಿರ್ಮಾಣಕ್ಕೆ ಬೇಕಿರುವ ಸಾಮಗ್ರಿಗಳನ್ನ ಖುದ್ದು ತಾವೇ ಖರೀದಿ ಮಾಡುತ್ತಿದ್ದಾರೆ.

Also Read:

BBMP: ಘೋಷಣೆಗೆ ಸೀಮಿತವಾದ ಮಳೆ ಹಾನಿ ಪರಿಹಾರ; ಕೇವಲ ಪ್ರಮಾಣ ಪತ್ರ ಕೊಟ್ಟು ಸುಮ್ಮನಾದ ಬಿಬಿಎಂಪಿ

Raichurಲ್ಲಿ ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಕೇಸ್ | FIR |Tv9 kannada

(Flyover construction from Ejipura to kendriya vidyalaya simplex infrastructure company fails deliver the work bbmp to finish it)

Published On - 9:49 am, Thu, 4 November 21

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ