AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಣ್ಣು ನಿಮ್ಮ ಕಿಡ್ನಿ ಆರೋಗ್ಯಕ್ಕೆ ಪವಾಡದ ಔಷಧಿ.. ದಿನಕ್ಕೊಂದು ತಿಂದರೆ ಸಾಕು!

ಸೇಬು ಮೂತ್ರಪಿಂಡಗಳಿಗೆ ಸುರಕ್ಷಿತ ಎಂದು ವೈದ್ಯರು ಹೇಳುತ್ತಾರೆ. ಸೇಬಿನಲ್ಲಿ ಆ್ಯಂಟಿಆಕ್ಸಿಡೆಂಟ್ ಅಧಿಕವಾಗಿರುತ್ತದೆ. ಹೃದಯ ರೋಗಗಳು, ಕೊಲೆಸ್ಟ್ರಾಲ್ ಕಡಿತ ಮತ್ತು ಸಕ್ಕರೆ ನಿಯಂತ್ರಣ. ಶುಗರ್ ಹೆಚ್ಚಾದರೆ ಕಿಡ್ನಿಗೆ ಅಪಾಯ.. ಹಾಗಾಗಿ ಸೇಬು ಹಣ್ಣಿನಿಂದ ಇದನ್ನೆಲ್ಲ ನಿಯಂತ್ರಿಸಬಹುದು. ಆದರೆ ಸೇಬಿನ ಜೊತೆಗೆ ಬೆಳ್ಳುಳ್ಳಿ ಸಹ ಕಿಡ್ನಿ ಆರೋಗ್ಯಕ್ಕೆ ಒಳ್ಳೆಯದು.  

ಈ ಹಣ್ಣು ನಿಮ್ಮ ಕಿಡ್ನಿ ಆರೋಗ್ಯಕ್ಕೆ ಪವಾಡದ ಔಷಧಿ.. ದಿನಕ್ಕೊಂದು ತಿಂದರೆ ಸಾಕು!
ಈ ಹಣ್ಣು ನಿಮ್ಮ ಕಿಡ್ನಿ ಆರೋಗ್ಯಕ್ಕೆ ಪವಾಡದ ಔಷಧಿ..
ಸಾಧು ಶ್ರೀನಾಥ್​
|

Updated on:Dec 01, 2023 | 4:12 PM

Share

ಮೂತ್ರಪಿಂಡಗಳು ಮಾನವ ದೇಹದಲ್ಲಿ ಅತ್ಯಂತ ಪ್ರಮುಖವಾದ, ಆಯಕಟ್ಟಿನ ಅಂಗಗಳಾಗಿವೆ. ಕಿಡ್ನಿ ಎಷ್ಟು ಸುರಕ್ಷಿತವೋ ನಮ್ಮ ಆರೋಗ್ಯವೂ ಅಷ್ಟೇ ಸುರಕ್ಷಿತ (kidney health) ಎಂಬುದು ಸತ್ಯ. ಎರಡು ಕಿಡ್ನಿಗಳಲ್ಲಿ ಯಾವುದಾದರೂ ಒಂದರಲ್ಲಿ ಸಮಸ್ಯೆ ಎದುರಾದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮೂತ್ರಪಿಂಡಗಳು ದೇಹದಲ್ಲಿನ ರಕ್ತವನ್ನು ಶುದ್ಧೀಕರಿಸುತ್ತವೆ ಮತ್ತು ಅನಗತ್ಯ ವಿಷವನ್ನು ಮೂತ್ರದ ರೂಪದಲ್ಲಿ ಹೊರಹಾಕುತ್ತವೆ. ಅದಕ್ಕಾಗಿಯೇ ಮೂತ್ರಪಿಂಡಗಳ ಬಗ್ಗೆ ಕಾಳಜಿ ವಹಿಸಬೇಕು. ಮತ್ತು ಉತ್ತಮ ಮೂತ್ರಪಿಂಡಗಳಿಗೆ, ನಾವು ತಿನ್ನುವ ಆಹಾರವು (Health Tips) ತುಂಬಾ ಮುಖ್ಯವಾಗಿದೆ. ಏನನ್ನು ತಿನ್ನಬೇಕು ಕಿಡ್ನಿಗೆ ಒಳ್ಳೆಯದು ಎಂಬ ವಿಷಯ ನೋಡಿದರೆ.. (Health)

ಸೇಬು ಮೂತ್ರಪಿಂಡಗಳಿಗೆ ಸುರಕ್ಷಿತ ಎಂದು ವೈದ್ಯರು ಹೇಳುತ್ತಾರೆ. ಸೇಬಿನಲ್ಲಿ ಆ್ಯಂಟಿಆಕ್ಸಿಡೆಂಟ್ ಅಧಿಕವಾಗಿರುತ್ತದೆ. ಹೃದಯ ರೋಗಗಳು, ಕೊಲೆಸ್ಟ್ರಾಲ್ ಕಡಿತ ಮತ್ತು ಸಕ್ಕರೆ ನಿಯಂತ್ರಣ. ಶುಗರ್ ಹೆಚ್ಚಾದರೆ ಕಿಡ್ನಿಗೆ ಅಪಾಯ.. ಹಾಗಾಗಿ ಸೇಬು ಹಣ್ಣಿನಿಂದ ಇದನ್ನೆಲ್ಲ ನಿಯಂತ್ರಿಸಬಹುದು. ಆದರೆ ಸೇಬಿನ ಜೊತೆಗೆ ಬೆಳ್ಳುಳ್ಳಿ ಸಹ ಕಿಡ್ನಿ ಆರೋಗ್ಯಕ್ಕೆ ಒಳ್ಳೆಯದು.

ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಕಿಡ್ನಿಯಲ್ಲಿರುವ ಅನಗತ್ಯ ತ್ಯಾಜ್ಯಗಳು ಹೋಗುತ್ತವೆ. ಬೆಳ್ಳುಳ್ಳಿಯನ್ನು ಪ್ರತಿದಿನ ಹಸಿಯಾಗಿ ತೆಗೆದುಕೊಳ್ಳಬಹುದು.. ಇಲ್ಲವೇ ತಿನ್ನುವ ಆಹಾರದಲ್ಲಿ ಬಳಸಿ, ಸೇವಿಸಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

ಸೇಬು, ಬೆಳ್ಳುಳ್ಳಿ ಮಾತ್ರವಲ್ಲ ಓಟ್ಸ್ ಕೂಡ ಮೂತ್ರಪಿಂಡಕ್ಕೆ ಒಳ್ಳೆಯದು. ಓಟ್ಸ್ ನಲ್ಲಿ ನಾರಿನಂಶ ಅಧಿಕವಾಗಿದೆ. ಇದು ಮೂತ್ರಪಿಂಡದ ಕಲ್ಲುಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಓಟ್ಸ್ ಬೀಟಾ ಗ್ಲುಕನ್ ಎಂಬ ನೀರಿನಲ್ಲಿ ಕರಗುವ ಫೈಬರ್ ಅನ್ನು ಹೊಂದಿರುತ್ತದೆ. ಓಟ್ಸ್ ಅನ್ನು ಬೆಳಿಗ್ಗೆ ತೆಗೆದುಕೊಳ್ಳುವುದು ಉತ್ತಮ. ಎಲ್ಲಕ್ಕಿಂತ ಹೆಚ್ಚಾಗಿ ಮೂತ್ರಪಿಂಡಗಳ ರಕ್ಷಣೆಗೆ ನೀರು ಪ್ರಯೋಜನಕಾರಿ.

Also Read: ಮಧುಮೇಹವು ಮೂತ್ರಪಿಂಡದ ಹಾನಿಯನ್ನುಂಟು ಮಾಡಬಹುದು: ಡಾ.ಸುಮಿತ್ ಶರ್ಮಾ

ನೀವು ಪ್ರತಿದಿನ ಹೆಚ್ಚು ನೀರು ಕುಡಿದಷ್ಟೂ ನಿಮ್ಮ ದೇಹಕ್ಕೆ ಒಳ್ಳೆಯದು. ದಿನಕ್ಕೆ ನಾಲ್ಕರಿಂದ ಐದು ಲೀಟರ್ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹವನ್ನು ನಿರ್ಜಲೀಕರಣದಿಂದ ರಕ್ಷಿಸುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಕಿಡ್ನಿ ಸ್ವಚ್ಛವಾಗುತ್ತದೆ. ಜೀವಾಣುಗಳನ್ನು ಹೊರಹಾಕಲಾಗುತ್ತದೆ.

ಕೆಂಪು ದಪ್ಪ ಮೆಣಸಿನಕಾಯಿಯು ವಿಟಮಿನ್ ಎ ಮತ್ತು ವಿಟಮಿನ್ ಸಿ ಹೊಂದಿರುತ್ತದೆ. ಇವು ಮಾರುಕಟ್ಟೆಯಲ್ಲಿ ಅಪರೂಪಕ್ಕೆ ಸಿಗುತ್ತವೆ. ಹಾಗಾಗಿ ಇವೆಲ್ಲವೂ ಮಾನವನ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಿ ಕಿಡ್ನಿಯನ್ನು ಆರೋಗ್ಯವಾಗಿಡುತ್ತವೆ. ಹಾಗಾಗಿ ಈ ರೀತಿಯ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸುವುದು ಉತ್ತಮ ಎನ್ನುತ್ತಾರೆ ವೈದ್ಯರು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:10 pm, Fri, 1 December 23

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ