AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Karnataka | ವಿದೇಶಿ ಬಂಡವಾಳ ಹೂಡಿಕೆದಾರರ ಮೊದಲ ಪ್ರಾಶಸ್ತ್ಯ ಈಗ ಕರ್ನಾಟಕ, ಡಬಲ್ ಎಂಜಿನ್ ಸರ್ಕಾರದಿಂದ ಇದು ಸಾಧ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

PM Modi in Karnataka | ವಿದೇಶಿ ಬಂಡವಾಳ ಹೂಡಿಕೆದಾರರ ಮೊದಲ ಪ್ರಾಶಸ್ತ್ಯ ಈಗ ಕರ್ನಾಟಕ, ಡಬಲ್ ಎಂಜಿನ್ ಸರ್ಕಾರದಿಂದ ಇದು ಸಾಧ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 06, 2023 | 7:21 PM

Share

ತುಮಕೂರು ಗುಬ್ಬಿ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಹೆಚ್ ಎ ಎಲ್ ಹೆಲಿಕಾಪ್ಟರ್ಘಟಕವನ್ನು ಲೋಕಾರ್ಪಣೆ ಮಾಡಿದ ಬಳಿಕ ತಮ್ಮ ಭಾಷಣವನ್ನು ಕನ್ನಡ ಭಾಷೆಯಲ್ಲಿ ಆರಂಭಿಸಿದರು.

ತುಮಕೂರು:  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕಳೆದ ಬಾರಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಾಡಿದ ಹಾಗೆ ತುಮಕೂರು ಗುಬ್ಬಿ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಹೆಚ್ ಎ ಎಲ್ ಹೆಲಿಕಾಪ್ಟರ್ (HAL helicopter) ಘಟಕವನ್ನು ಲೋಕಾರ್ಪಣೆ ಮಾಡಿದ ಬಳಿಕ ತಮ್ಮ ಭಾಷಣವನ್ನು ಕನ್ನಡ ಭಾಷೆಯಲ್ಲಿ (Kannada language) ಆರಂಭಿಸಿದರು. ಕನ್ನಡದಲ್ಲಿ ಮಾತಾಡುವ ಭರದಲ್ಲಿ ಅವರು ನಿಟ್ಟೂರು ಗ್ರಾಮವನ್ನು ನಗರ ನಿಟ್ಟೂರು ನಗರ ಅಂದುಬಿಟ್ಟರು. 2016 ರಲ್ಲಿ ಹೆಚ್ ಎ ಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕದ ಶಿಲಾನ್ಯಾಸ ಮಾಡುವ ಸೌಭಾಗ್ಯ ತಮಗೆ ಸಿಕ್ಕಿತ್ತು, ಆಗಲೇ ರಕ್ಷಣಾ ವ್ಯವಸ್ಥೆಯ ಸಾಮಗ್ರಿಗಳಿಗೆ ಭಾರತವು ಬೇರೆ ದೇಶಗಳ ಮೇಲೆ ಆತುಕೊಳ್ಳುವುದನ್ನು ಕನಿಷ್ಟ ಪ್ರಮಾಣಕ್ಕೆ ಇಳಿಸಬಬೇಕೆಂಬ ಸಂಕಲ್ಪ ಮಾಡಿಕೊಂಡಿದ್ದೆವು, ಆ ಸಂಕಲ್ಪ ಇವತ್ತು ಈಡೇರಿದೆ ಎಂದು ಪ್ರಧಾನಿಗಳು ಹೇಳಿದರು. ಅವರ ಪೂರ್ತಿ ಭಾಷಣ ಈ ವಿಡಿಯೋದಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 06, 2023 07:20 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.