AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷದ ಮಗುವನ್ನ ಕೊಂದಿದ್ದ ನರಭಕ್ಷಕ ಚಿರತೆ ಸಂಹಾರಕ್ಕೆ ಮುಹೂರ್ತ ಫಿಕ್ಸ್?

ತುಮಕೂರು: ಕಲ್ಪತರುನಾಡು ತುಮಕೂರಿನಲ್ಲಿ ನರಭಕ್ಷಕ ಚಿರತೆ ಮತ್ತೆ ಅಟ್ಟಹಾಸ ಮೆರೆದಿದ್ದು, ಹೆಬ್ಬೂರು ಹೋಬಳಿಯ ಬೈಚೇನಹಳ್ಳಿ ಗ್ರಾಮದಲ್ಲಿ ಮೂರು ವರ್ಷದ ಚಂದನಾ ಮೇಲೆ ಚಿರತೆ ಅಟ್ಯಾಕ್ ಮಾಡಿದೆ. ಪ್ರಕರಣ ಸಂಬಂಧ ನರಭಕ್ಷಕ ಚಿರತೆಯನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲಲು ರಾಜ್ಯ ಸರ್ಕಾರ ಆದೇಶಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಬಾಲಕಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆನಂದ್ ಸಿಂಗ್ ಎದುರು ನ್ಯಾಯಕ್ಕಾಗಿ ಬೈಚೇನಹಳ್ಳಿಯ ಗ್ರಾಮಸ್ಥರು ಆಗ್ರಹಿಸಿದರು. DFO, ಅರಣ್ಯ ಇಲಾಖೆ ಅಧಿಕಾರಿಗಳ ಅಮಾನತಿಗೆ ಒತ್ತಾಯಿಸಿದರು. ಇದೇ […]

3 ವರ್ಷದ ಮಗುವನ್ನ ಕೊಂದಿದ್ದ ನರಭಕ್ಷಕ ಚಿರತೆ ಸಂಹಾರಕ್ಕೆ ಮುಹೂರ್ತ ಫಿಕ್ಸ್?
ಸಾಧು ಶ್ರೀನಾಥ್​
|

Updated on: Mar 01, 2020 | 1:12 PM

Share

ತುಮಕೂರು: ಕಲ್ಪತರುನಾಡು ತುಮಕೂರಿನಲ್ಲಿ ನರಭಕ್ಷಕ ಚಿರತೆ ಮತ್ತೆ ಅಟ್ಟಹಾಸ ಮೆರೆದಿದ್ದು, ಹೆಬ್ಬೂರು ಹೋಬಳಿಯ ಬೈಚೇನಹಳ್ಳಿ ಗ್ರಾಮದಲ್ಲಿ ಮೂರು ವರ್ಷದ ಚಂದನಾ ಮೇಲೆ ಚಿರತೆ ಅಟ್ಯಾಕ್ ಮಾಡಿದೆ. ಪ್ರಕರಣ ಸಂಬಂಧ ನರಭಕ್ಷಕ ಚಿರತೆಯನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲಲು ರಾಜ್ಯ ಸರ್ಕಾರ ಆದೇಶಿಸಿದೆ.

ಘಟನಾ ಸ್ಥಳಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಬಾಲಕಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆನಂದ್ ಸಿಂಗ್ ಎದುರು ನ್ಯಾಯಕ್ಕಾಗಿ ಬೈಚೇನಹಳ್ಳಿಯ ಗ್ರಾಮಸ್ಥರು ಆಗ್ರಹಿಸಿದರು. DFO, ಅರಣ್ಯ ಇಲಾಖೆ ಅಧಿಕಾರಿಗಳ ಅಮಾನತಿಗೆ ಒತ್ತಾಯಿಸಿದರು. ಇದೇ ವೇಳೆ ಸಚಿವ ಆನಂದ್ ಸಿಂಗ್ ಎದುರು ಬಾಲಕಿ ಕುಟುಂಬಸ್ಥರು ಅಳಲು ತೊಡಿಕೊಂಡರು. ಪುಟ್ಟ ಕಂದಮ್ಮನನ್ನು ಕೊಂದ ಚಿರತೆಯನ್ನು ಗುಂಡಿಕ್ಕಿ ಕೊಲ್ಲುವಂತೆ ಗ್ರಾಮಸ್ಥರು ತಾಕೀತು ಮಾಡಿದರು.

ಮೃತ ಬಾಲಕಿ ಕುಟುಂಬಕ್ಕೆ ಪರಿಹಾರ: ಕುಟುಂಬಸ್ಥರ ನೋವು ಆಲಿಸಿದ ಸಚಿವ ಆನಂದ್ ಸಿಂಗ್, ಚಿರತೆ ದಾಳಿಗೆ ಬಲಿಯಾದ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 7.5 ಲಕ್ಷ ರೂ. ಪರಿಹಾರ ಕೊಡುವುದಾಗಿ ಹೇಳಿದರು. 5 ವರ್ಷಗಳ ಕಾಲ ಬಾಲಕಿ ಕುಟುಂಬಕ್ಕೆ 2,000 ರೂ. ಮಾಸಾಶನ ನೀಡುವುದಾಗಿ ಭರವಸೆ ನೀಡಿದರು.

ಚಿರತೆ ಹಾವಳಿ ತಡೆಗೆ ಕ್ರಮ: ಇದಕ್ಕೂ ಮುನ್ನ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಾಂತ್ವನ ಹೇಳಿದರು. ಅರಣ್ಯ ಸಚಿವ ಆನಂದ್ ಸಿಂಗ್ ಜತೆ ಚರ್ಚೆ ಮಾಡಿ ಚಿರತೆಯನ್ನು ಸಾಯಿಸಲು ಆದೇಶಿಸಲಾಗಿದೆ. ನಾಳೆ ಬೆಳಗ್ಗೆಯೇ ಚಿರತೆ ಶೂಟ್ ಮಾಡಲು ಕಾರ್ಯಾಚರಣೆ ಕೈಗೊಳ್ಳುತ್ತಾರೆ. ಕೂಡಲೇ ಜಿಲ್ಲಾಡಳಿತ, ಸ್ಥಳೀಯ ಆಡಳಿತ ಸಭೆ ಕರೆದು ಚಿರತೆ ಹಾವಳಿ ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ