AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಡು ಹಿಂಡಾಗಿ ಕಾಡಾನೆ ದಾಳಿ: ಗಜಪಡೆ ಅಟ್ಟಹಾಸಕ್ಕೆ ಅರಣ್ಯ ಸಿಬ್ಬಂದಿ ಸೇರಿ ಇಬ್ಬರು ಬಲಿ!

ಕೋಲಾರ: ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಾಡಾನೆ ಹಿಂಡು ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಮಾಲೂರು ತಾಲೂಕಿನ ನೂಟವೆ ಗ್ರಾಮ ಬಳಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಗುಟ್ಟು ಮುನಿಯಪ್ಪ ಹಾಗೂ ಕೊಮ್ಮನಹಳ್ಳಿ ನಿವಾಸಿ ಆನಂದ್ ಮೃತ ದುರ್ದೈವಿಗಳು. ಕಳೆದ ಒಂದು ತಿಂಗಳಿನಿಂದ ಜಿಲ್ಲೆಯ ಗಡಿಯಲ್ಲಿ ಕಾಡಾನೆ ಹಿಂಡು ಬೀಡು ಬಿಟ್ಟಿತ್ತು. ಲಕ್ಷಾಂತರ ರೂಪಾಯಿ ಮೌಲ್ಯದ ರೈತರ ಬೆಳಗಳನ್ನ ಕಾಡಾನೆಗಳು ನಾಶ ಮಾಡಿದ್ದವು. ಹೀಗಾಗಿ ಕಳೆದ ಒಂದು ತಿಂಗಳಿನಿಂದ ಸತತವಾಗಿ ಆನೆ ಹಿಮ್ಮೆಟ್ಟಿಸುವ […]

ಹಿಂಡು ಹಿಂಡಾಗಿ ಕಾಡಾನೆ ದಾಳಿ: ಗಜಪಡೆ ಅಟ್ಟಹಾಸಕ್ಕೆ ಅರಣ್ಯ ಸಿಬ್ಬಂದಿ ಸೇರಿ ಇಬ್ಬರು ಬಲಿ!
ಸಾಧು ಶ್ರೀನಾಥ್​
|

Updated on:Mar 02, 2020 | 8:21 PM

Share

ಕೋಲಾರ: ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಾಡಾನೆ ಹಿಂಡು ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಮಾಲೂರು ತಾಲೂಕಿನ ನೂಟವೆ ಗ್ರಾಮ ಬಳಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಗುಟ್ಟು ಮುನಿಯಪ್ಪ ಹಾಗೂ ಕೊಮ್ಮನಹಳ್ಳಿ ನಿವಾಸಿ ಆನಂದ್ ಮೃತ ದುರ್ದೈವಿಗಳು.

ಕಳೆದ ಒಂದು ತಿಂಗಳಿನಿಂದ ಜಿಲ್ಲೆಯ ಗಡಿಯಲ್ಲಿ ಕಾಡಾನೆ ಹಿಂಡು ಬೀಡು ಬಿಟ್ಟಿತ್ತು. ಲಕ್ಷಾಂತರ ರೂಪಾಯಿ ಮೌಲ್ಯದ ರೈತರ ಬೆಳಗಳನ್ನ ಕಾಡಾನೆಗಳು ನಾಶ ಮಾಡಿದ್ದವು. ಹೀಗಾಗಿ ಕಳೆದ ಒಂದು ತಿಂಗಳಿನಿಂದ ಸತತವಾಗಿ ಆನೆ ಹಿಮ್ಮೆಟ್ಟಿಸುವ ಕಾರ್ಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ತೊಡಗಿದ್ದರು. ಇಂದು ನೂಟವೆ ಗ್ರಾಮದ ಬಳಿ ಕಾಡಾನೆ ಹಿಮ್ಮೆಟ್ಟಿಸುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆಯೇ ಆನೆಗಳು ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.

ಗಂಭೀರವಾಗಿ ಗಾಯಗೊಂಡ ಅರಣ್ಯ ಇಲಾಖೆ ಸಿಬ್ಬಂದಿ ಗುಟ್ಟು ಮುನಿಯಪ್ಪ ಮತ್ತು ಮೂರ್ತಿ ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಗುಟ್ಟು ಮುನಿಯಪ್ಪ ಸಾವಿಗೀಡಾಗಿದ್ದಾರೆ. ಕಾಡಾನೆಗಳನ್ನು ಅರಣ್ಯಕ್ಕೆ ಹಿಮ್ಮೆಟ್ಟುವ ಕಾರ್ಯಾಚರಣೆ ನೋಡಲು ಹೋಗಿದ್ದ ಕೊಮ್ಮನಹಳ್ಳಿ ನಿವಾಸಿ ಆನಂದ್ ಸಹ ಚಿಕಿತ್ಸೆ ಫಲಿಸದೆ ತೊರಲಕ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Published On - 8:20 pm, Mon, 2 March 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್