AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಒಂದು ಮನಮಿಡಿಯುವ, ಅಪೂರ್ವ ‘ಗಜ’ ಸಂಗಮ

ಕೊಡಗು: ಜನ್ಮ ತಾಳಿದ ಕೆಲವೇ ಗಂಟೆಗಳಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಪುಟ್ಟ ಆನೆ ಮರಿ ಮತ್ತೊಮ್ಮೆ ತನ್ನ ಅಮ್ಮನ ಜೊತೆ ಒಂದಾದ ಮನಮಿಡಿಯುವ ಪ್ರಸಂಗಕ್ಕೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೈಲ ಗ್ರಾಮವು ಸಾಕ್ಷಿಯಾಗಿದೆ. ಆಹಾರ ಅರಸಿ ಗ್ರಾಮದ ಕಾಫಿ ತೋಟಕ್ಕೆ ಬಂದಿದ್ದ ಗರ್ಭಿಣಿ ಕಾಡಾನೆಯೊಂದು ಮರಿಗೆ ಜನ್ಮ ನೀಡಿತ್ತು. ಆದರೆ ದುರದೃಷ್ಟವಶಾತ್​ ಆ ಎಳೇ ಮರಿ ತನ್ನ ಅಮ್ಮನಿಂದ ಹೇಗೋ ಬೇರ್ಪಟ್ಟು ತೋಟದಲ್ಲಿದ್ದ ದೊಡ್ಡ ಕಂದಕಕ್ಕೆ ಉರುಳಿ ಬಿದ್ದಿತ್ತು. ತನ್ನ ಕರುಳಬಳ್ಳಿಯನ್ನ ಕಂದಕದಿಂದ ಮೇಲೆತ್ತಲು ತಾಯಿ ಆನೆ ಎಷ್ಟೇ […]

ಕೊಡಗಿನಲ್ಲಿ ಒಂದು ಮನಮಿಡಿಯುವ, ಅಪೂರ್ವ ‘ಗಜ’ ಸಂಗಮ
KUSHAL V
| Edited By: |

Updated on:Jul 25, 2020 | 5:53 PM

Share

ಕೊಡಗು: ಜನ್ಮ ತಾಳಿದ ಕೆಲವೇ ಗಂಟೆಗಳಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಪುಟ್ಟ ಆನೆ ಮರಿ ಮತ್ತೊಮ್ಮೆ ತನ್ನ ಅಮ್ಮನ ಜೊತೆ ಒಂದಾದ ಮನಮಿಡಿಯುವ ಪ್ರಸಂಗಕ್ಕೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೈಲ ಗ್ರಾಮವು ಸಾಕ್ಷಿಯಾಗಿದೆ.

ಆಹಾರ ಅರಸಿ ಗ್ರಾಮದ ಕಾಫಿ ತೋಟಕ್ಕೆ ಬಂದಿದ್ದ ಗರ್ಭಿಣಿ ಕಾಡಾನೆಯೊಂದು ಮರಿಗೆ ಜನ್ಮ ನೀಡಿತ್ತು. ಆದರೆ ದುರದೃಷ್ಟವಶಾತ್​ ಆ ಎಳೇ ಮರಿ ತನ್ನ ಅಮ್ಮನಿಂದ ಹೇಗೋ ಬೇರ್ಪಟ್ಟು ತೋಟದಲ್ಲಿದ್ದ ದೊಡ್ಡ ಕಂದಕಕ್ಕೆ ಉರುಳಿ ಬಿದ್ದಿತ್ತು. ತನ್ನ ಕರುಳಬಳ್ಳಿಯನ್ನ ಕಂದಕದಿಂದ ಮೇಲೆತ್ತಲು ತಾಯಿ ಆನೆ ಎಷ್ಟೇ ಪ್ರಯತ್ನಿಸಿದರೂ ವಿಫಲವಾಗಿ ಕೊನೆಗೆ ಮರಿಯನ್ನ ಅಲ್ಲೇ ಬಿಟ್ಟು ಕಾಡಿಗೆ ತೆರಳಿತ್ತು.

ತಾಯಿ-ಮಗುವನ್ನು ಒಂದು ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿ ಇಂದು ಬೆಳಗ್ಗೆ ಕಂದಕದಲ್ಲಿ ಆನೆ ಮರಿಯನ್ನ ಕಂಡ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ರು. ಕೂಡಲೇ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಕಂದಕದಲ್ಲಿ ಸಿಲುಕಿದ್ದ ಆನೆ ಮರಿಯನ್ನು ರಕ್ಷಿಸಿದರು. ಜೊತೆಗೆ, ಮರಿಯನ್ನ ಘಟನಾಸ್ಥಳದಿಂದ ಸ್ವಲ್ಪ ದೂರದಲ್ಲಿದ್ದ ಅದರ ತಾಯಿಯ ಬಳಿ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ನಡುವೆ ಕಂದಮ್ಮನನ್ನ ಕಳೆದುಕೊಂಡ ನೋವಿನಲ್ಲಿದ್ದ ತಾಯಿ ಆನೆಯು ಸಿಟ್ಟಿನಲ್ಲಿ ಅಲ್ಲೇ ಇದ್ದ ತೋಟದ ಕೆಲಸಗಾರ ಚಿಕ್ಕಣ್ಣನ ಮೇಲೆ ದಾಳಿ ನಡೆಸಿತ್ತು. ಅದೃಷ್ಟವಶಾತ್​ ಚಿಕ್ಕಣ್ಣ ಪ್ರಾಣಾಪಾದಿಂದ ಪಾರಾಗಿದ್ದು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುರೇಶ್ ಬಿ

Published On - 7:38 pm, Thu, 23 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!