AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಒಂದು ಮನಮಿಡಿಯುವ, ಅಪೂರ್ವ ‘ಗಜ’ ಸಂಗಮ

ಕೊಡಗು: ಜನ್ಮ ತಾಳಿದ ಕೆಲವೇ ಗಂಟೆಗಳಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಪುಟ್ಟ ಆನೆ ಮರಿ ಮತ್ತೊಮ್ಮೆ ತನ್ನ ಅಮ್ಮನ ಜೊತೆ ಒಂದಾದ ಮನಮಿಡಿಯುವ ಪ್ರಸಂಗಕ್ಕೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೈಲ ಗ್ರಾಮವು ಸಾಕ್ಷಿಯಾಗಿದೆ. ಆಹಾರ ಅರಸಿ ಗ್ರಾಮದ ಕಾಫಿ ತೋಟಕ್ಕೆ ಬಂದಿದ್ದ ಗರ್ಭಿಣಿ ಕಾಡಾನೆಯೊಂದು ಮರಿಗೆ ಜನ್ಮ ನೀಡಿತ್ತು. ಆದರೆ ದುರದೃಷ್ಟವಶಾತ್​ ಆ ಎಳೇ ಮರಿ ತನ್ನ ಅಮ್ಮನಿಂದ ಹೇಗೋ ಬೇರ್ಪಟ್ಟು ತೋಟದಲ್ಲಿದ್ದ ದೊಡ್ಡ ಕಂದಕಕ್ಕೆ ಉರುಳಿ ಬಿದ್ದಿತ್ತು. ತನ್ನ ಕರುಳಬಳ್ಳಿಯನ್ನ ಕಂದಕದಿಂದ ಮೇಲೆತ್ತಲು ತಾಯಿ ಆನೆ ಎಷ್ಟೇ […]

ಕೊಡಗಿನಲ್ಲಿ ಒಂದು ಮನಮಿಡಿಯುವ, ಅಪೂರ್ವ ‘ಗಜ’ ಸಂಗಮ
KUSHAL V
| Edited By: |

Updated on:Jul 25, 2020 | 5:53 PM

Share

ಕೊಡಗು: ಜನ್ಮ ತಾಳಿದ ಕೆಲವೇ ಗಂಟೆಗಳಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಪುಟ್ಟ ಆನೆ ಮರಿ ಮತ್ತೊಮ್ಮೆ ತನ್ನ ಅಮ್ಮನ ಜೊತೆ ಒಂದಾದ ಮನಮಿಡಿಯುವ ಪ್ರಸಂಗಕ್ಕೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೈಲ ಗ್ರಾಮವು ಸಾಕ್ಷಿಯಾಗಿದೆ.

ಆಹಾರ ಅರಸಿ ಗ್ರಾಮದ ಕಾಫಿ ತೋಟಕ್ಕೆ ಬಂದಿದ್ದ ಗರ್ಭಿಣಿ ಕಾಡಾನೆಯೊಂದು ಮರಿಗೆ ಜನ್ಮ ನೀಡಿತ್ತು. ಆದರೆ ದುರದೃಷ್ಟವಶಾತ್​ ಆ ಎಳೇ ಮರಿ ತನ್ನ ಅಮ್ಮನಿಂದ ಹೇಗೋ ಬೇರ್ಪಟ್ಟು ತೋಟದಲ್ಲಿದ್ದ ದೊಡ್ಡ ಕಂದಕಕ್ಕೆ ಉರುಳಿ ಬಿದ್ದಿತ್ತು. ತನ್ನ ಕರುಳಬಳ್ಳಿಯನ್ನ ಕಂದಕದಿಂದ ಮೇಲೆತ್ತಲು ತಾಯಿ ಆನೆ ಎಷ್ಟೇ ಪ್ರಯತ್ನಿಸಿದರೂ ವಿಫಲವಾಗಿ ಕೊನೆಗೆ ಮರಿಯನ್ನ ಅಲ್ಲೇ ಬಿಟ್ಟು ಕಾಡಿಗೆ ತೆರಳಿತ್ತು.

ತಾಯಿ-ಮಗುವನ್ನು ಒಂದು ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿ ಇಂದು ಬೆಳಗ್ಗೆ ಕಂದಕದಲ್ಲಿ ಆನೆ ಮರಿಯನ್ನ ಕಂಡ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ರು. ಕೂಡಲೇ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಕಂದಕದಲ್ಲಿ ಸಿಲುಕಿದ್ದ ಆನೆ ಮರಿಯನ್ನು ರಕ್ಷಿಸಿದರು. ಜೊತೆಗೆ, ಮರಿಯನ್ನ ಘಟನಾಸ್ಥಳದಿಂದ ಸ್ವಲ್ಪ ದೂರದಲ್ಲಿದ್ದ ಅದರ ತಾಯಿಯ ಬಳಿ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ನಡುವೆ ಕಂದಮ್ಮನನ್ನ ಕಳೆದುಕೊಂಡ ನೋವಿನಲ್ಲಿದ್ದ ತಾಯಿ ಆನೆಯು ಸಿಟ್ಟಿನಲ್ಲಿ ಅಲ್ಲೇ ಇದ್ದ ತೋಟದ ಕೆಲಸಗಾರ ಚಿಕ್ಕಣ್ಣನ ಮೇಲೆ ದಾಳಿ ನಡೆಸಿತ್ತು. ಅದೃಷ್ಟವಶಾತ್​ ಚಿಕ್ಕಣ್ಣ ಪ್ರಾಣಾಪಾದಿಂದ ಪಾರಾಗಿದ್ದು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುರೇಶ್ ಬಿ

Published On - 7:38 pm, Thu, 23 July 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?