AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯಲು ಹೋಗಿ ತೊಟ್ಟಿಗೆ ಬಿದ್ದ ಆನೆ ಮರಿ.. ಕಂದನನ್ನು ರಕ್ಷಿಸಲು ತಾಯಿ ಆನೆ ಪರದಾಟ

ಮಂಡ್ಯ: ನೀರಿನ ತೊಟ್ಟಿಗೆ ಬಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಣಿಗಾರನಕಟ್ಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಳೆದ ರಾತ್ರಿ ಕಾಡಾನೆಗಳ ಹಿಂಡಿನೊಂದಿಗೆ ಬಂದಿದ್ದ ಮರಿ ಆನೆ, ಪ್ರಾಣಿಗಳು ನೀರು ಕುಡಿಯಲು ನಿರ್ಮಿಸಿದ್ದ ಸಿಮೆಂಟ್ ತೊಟ್ಟಿಯಲ್ಲಿ ಬಿದ್ದಿತ್ತು. ಹೀಗಾಗಿ, ತೊಟ್ಟಿಯಿಂದ ಮೇಲೆ ಬರಲಾರದೆ ಮರಿ ಆನೆ ರೋದಿಸುತ್ತಿತ್ತು. ತೊಟ್ಟಿಯಲ್ಲಿ ಮರಿ ಸಿಲುಕಿದ್ರಿಂದ ಉಳಿದ ಆನೆಗಳೂ ಘೀಳಿಡಲು ಪ್ರಾರಂಭಿಸಿದವು. ಇದನ್ನು ಕೇಳಿ ಬೆಳಿಗ್ಗೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ […]

ನೀರು ಕುಡಿಯಲು ಹೋಗಿ ತೊಟ್ಟಿಗೆ ಬಿದ್ದ ಆನೆ ಮರಿ.. ಕಂದನನ್ನು ರಕ್ಷಿಸಲು ತಾಯಿ ಆನೆ ಪರದಾಟ
ಪೃಥ್ವಿಶಂಕರ
|

Updated on:Nov 22, 2020 | 2:17 PM

Share

ಮಂಡ್ಯ: ನೀರಿನ ತೊಟ್ಟಿಗೆ ಬಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಣಿಗಾರನಕಟ್ಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕಳೆದ ರಾತ್ರಿ ಕಾಡಾನೆಗಳ ಹಿಂಡಿನೊಂದಿಗೆ ಬಂದಿದ್ದ ಮರಿ ಆನೆ, ಪ್ರಾಣಿಗಳು ನೀರು ಕುಡಿಯಲು ನಿರ್ಮಿಸಿದ್ದ ಸಿಮೆಂಟ್ ತೊಟ್ಟಿಯಲ್ಲಿ ಬಿದ್ದಿತ್ತು. ಹೀಗಾಗಿ, ತೊಟ್ಟಿಯಿಂದ ಮೇಲೆ ಬರಲಾರದೆ ಮರಿ ಆನೆ ರೋದಿಸುತ್ತಿತ್ತು. ತೊಟ್ಟಿಯಲ್ಲಿ ಮರಿ ಸಿಲುಕಿದ್ರಿಂದ ಉಳಿದ ಆನೆಗಳೂ ಘೀಳಿಡಲು ಪ್ರಾರಂಭಿಸಿದವು.

ಇದನ್ನು ಕೇಳಿ ಬೆಳಿಗ್ಗೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ವೇಳೆ, ಮರಿಯನ್ನು ತೊಟ್ಟಿಯಿಂದ ಮೇಲೆತ್ತಲು ಆನೆಗಳ ಹಿಂಡು ಪ್ರಯತ್ನಿಸುತ್ತಿತ್ತು. ಬಳಿಕ ಸ್ಥಳದಲ್ಲಿದ್ದ ಆನೆಗಳನ್ನು ಓಡಿಸಿದ ವಲಯ ಅರಣ್ಯಾಧಿಕಾರಿ ಮಹದೇವಸ್ವಾಮಿ ನೇತೃತ್ವದ ತಂಡ ಜೆಸಿಬಿ ಸಹಾಯದಿಂದ ತೊಟ್ಟಿಯ ಒಂದು ಭಾಗ ಹೊಡೆಸಿದರು. ಬಳಿಕ ಆನೆ ಮರಿ ಮೇಲೆ ಬಂದು ತನ್ನ ಹಿಂಡೊಂದಿಗೆ ಸುರಕ್ಷಿತವಾಗಿ ಕಾಡು ಸೇರಿತು.

Published On - 2:06 pm, Sun, 22 November 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್