AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯಲು ಹೋಗಿ ತೊಟ್ಟಿಗೆ ಬಿದ್ದ ಆನೆ ಮರಿ.. ಕಂದನನ್ನು ರಕ್ಷಿಸಲು ತಾಯಿ ಆನೆ ಪರದಾಟ

ಮಂಡ್ಯ: ನೀರಿನ ತೊಟ್ಟಿಗೆ ಬಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಣಿಗಾರನಕಟ್ಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಳೆದ ರಾತ್ರಿ ಕಾಡಾನೆಗಳ ಹಿಂಡಿನೊಂದಿಗೆ ಬಂದಿದ್ದ ಮರಿ ಆನೆ, ಪ್ರಾಣಿಗಳು ನೀರು ಕುಡಿಯಲು ನಿರ್ಮಿಸಿದ್ದ ಸಿಮೆಂಟ್ ತೊಟ್ಟಿಯಲ್ಲಿ ಬಿದ್ದಿತ್ತು. ಹೀಗಾಗಿ, ತೊಟ್ಟಿಯಿಂದ ಮೇಲೆ ಬರಲಾರದೆ ಮರಿ ಆನೆ ರೋದಿಸುತ್ತಿತ್ತು. ತೊಟ್ಟಿಯಲ್ಲಿ ಮರಿ ಸಿಲುಕಿದ್ರಿಂದ ಉಳಿದ ಆನೆಗಳೂ ಘೀಳಿಡಲು ಪ್ರಾರಂಭಿಸಿದವು. ಇದನ್ನು ಕೇಳಿ ಬೆಳಿಗ್ಗೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ […]

ನೀರು ಕುಡಿಯಲು ಹೋಗಿ ತೊಟ್ಟಿಗೆ ಬಿದ್ದ ಆನೆ ಮರಿ.. ಕಂದನನ್ನು ರಕ್ಷಿಸಲು ತಾಯಿ ಆನೆ ಪರದಾಟ
ಪೃಥ್ವಿಶಂಕರ
|

Updated on:Nov 22, 2020 | 2:17 PM

Share

ಮಂಡ್ಯ: ನೀರಿನ ತೊಟ್ಟಿಗೆ ಬಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಣಿಗಾರನಕಟ್ಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕಳೆದ ರಾತ್ರಿ ಕಾಡಾನೆಗಳ ಹಿಂಡಿನೊಂದಿಗೆ ಬಂದಿದ್ದ ಮರಿ ಆನೆ, ಪ್ರಾಣಿಗಳು ನೀರು ಕುಡಿಯಲು ನಿರ್ಮಿಸಿದ್ದ ಸಿಮೆಂಟ್ ತೊಟ್ಟಿಯಲ್ಲಿ ಬಿದ್ದಿತ್ತು. ಹೀಗಾಗಿ, ತೊಟ್ಟಿಯಿಂದ ಮೇಲೆ ಬರಲಾರದೆ ಮರಿ ಆನೆ ರೋದಿಸುತ್ತಿತ್ತು. ತೊಟ್ಟಿಯಲ್ಲಿ ಮರಿ ಸಿಲುಕಿದ್ರಿಂದ ಉಳಿದ ಆನೆಗಳೂ ಘೀಳಿಡಲು ಪ್ರಾರಂಭಿಸಿದವು.

ಇದನ್ನು ಕೇಳಿ ಬೆಳಿಗ್ಗೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ವೇಳೆ, ಮರಿಯನ್ನು ತೊಟ್ಟಿಯಿಂದ ಮೇಲೆತ್ತಲು ಆನೆಗಳ ಹಿಂಡು ಪ್ರಯತ್ನಿಸುತ್ತಿತ್ತು. ಬಳಿಕ ಸ್ಥಳದಲ್ಲಿದ್ದ ಆನೆಗಳನ್ನು ಓಡಿಸಿದ ವಲಯ ಅರಣ್ಯಾಧಿಕಾರಿ ಮಹದೇವಸ್ವಾಮಿ ನೇತೃತ್ವದ ತಂಡ ಜೆಸಿಬಿ ಸಹಾಯದಿಂದ ತೊಟ್ಟಿಯ ಒಂದು ಭಾಗ ಹೊಡೆಸಿದರು. ಬಳಿಕ ಆನೆ ಮರಿ ಮೇಲೆ ಬಂದು ತನ್ನ ಹಿಂಡೊಂದಿಗೆ ಸುರಕ್ಷಿತವಾಗಿ ಕಾಡು ಸೇರಿತು.

Published On - 2:06 pm, Sun, 22 November 20

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್