ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ ಖದೀಮರು

ಕೊಡಗು: ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಐವರನ್ನು ಅರಣ್ಯ ಸಂಚಾರಿದಳ ಪೊಲೀಸರು ಬಂಧಿಸಿದ್ದಾರೆ. 2 ಕೋಟಿ ಬೆಲೆ ಬಾಳುವ ಎರಡು ತಲೆ ಹಾವನ್ನು ಮಾರಾಟ ಮಾಡಲು ಆಂಧ್ರಪ್ರದೇಶದಿಂದ ಕೇರಳಕ್ಕೆ ಗೋಣಿಕೊಪ್ಪ ಮಾರ್ಗವಾಗಿ ಸಾಗಿಸುತ್ತಿದ್ದ ವೇಳೆ ವಿರಾಜಪೇಟೆ ತಾಲೂಕಿನ ಚೆನ್ನಂಗೊಲ್ಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಮುಲ್ಲ ಮೆಹಬೂಬ್ ವಲೀ, ಶೇಕ್ ಮುಲ್ಲ ಚಾಂದ್ ಪಾಷ, ಎಸ್. ಫಯಾಜ್, ಬೋಯ ರಂಗಸ್ವಾಮಿ, ಶೇಕ್ ಪೆದ್ದಮೆಹಬೂಬ್ ಬಾಷ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎರಡು ತಲೆ ಹಾವು ಸೇರಿದಂತೆ ಮಾರುತಿ […]

ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ ಖದೀಮರು
ಸಾಧು ಶ್ರೀನಾಥ್​

Updated on: Feb 13, 2020 | 2:30 PM

ಕೊಡಗು: ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಐವರನ್ನು ಅರಣ್ಯ ಸಂಚಾರಿದಳ ಪೊಲೀಸರು ಬಂಧಿಸಿದ್ದಾರೆ. 2 ಕೋಟಿ ಬೆಲೆ ಬಾಳುವ ಎರಡು ತಲೆ ಹಾವನ್ನು ಮಾರಾಟ ಮಾಡಲು ಆಂಧ್ರಪ್ರದೇಶದಿಂದ ಕೇರಳಕ್ಕೆ ಗೋಣಿಕೊಪ್ಪ ಮಾರ್ಗವಾಗಿ ಸಾಗಿಸುತ್ತಿದ್ದ ವೇಳೆ ವಿರಾಜಪೇಟೆ ತಾಲೂಕಿನ ಚೆನ್ನಂಗೊಲ್ಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ಮುಲ್ಲ ಮೆಹಬೂಬ್ ವಲೀ, ಶೇಕ್ ಮುಲ್ಲ ಚಾಂದ್ ಪಾಷ, ಎಸ್. ಫಯಾಜ್, ಬೋಯ ರಂಗಸ್ವಾಮಿ, ಶೇಕ್ ಪೆದ್ದಮೆಹಬೂಬ್ ಬಾಷ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎರಡು ತಲೆ ಹಾವು ಸೇರಿದಂತೆ ಮಾರುತಿ ಶಿಫ್ಟ್ ಡಿಸೈರ್ ಕಾರು ವಶಕ್ಕೆ ಪಡೆಯಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us