AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಿನಿ ಹಿನ್ನೀರಿನಲ್ಲಿ ವಿದೇಶಿ ಪಕ್ಷಿಗಳು ಕಲರವ: ಫಾರಿನ್ ಹಕ್ಕಿಗಳ ನೋಟವೇ ಬಲುಚೆಂದ

ಮೈಸೂರು: ಕಬಿನಿ ಜಲಾಶಯದಲ್ಲೀಗ ಫಾರಿನ್ ಗೆಸ್ಟ್​ಗಳ ಮೋಡಿ ಜೋರಾಗಿದೆ. ತಿಳಿನೀರಲ್ಲಿ ಆಡ್ತಾ, ಬಾನಲ್ಲಿ ಹಾರಾಡ್ತಾ, ನೀರಲ್ಲಿ ಮುಳುಗೇಳ್ತಾ ಮಸ್ತಿ ಮಾಡ್ತಿದ್ದಾರೆ. ಅವ್ರ ಚೆಲ್ಲಾಟ ನೋಡೋಕಂತ್ಲೇ ಪ್ರವಾಸಿಗರು ಸಹ ಬರ್ತಿದ್ದಾರೆ. ತಿಳಿಗಾಳಿಗೆ ಮೆಲ್ಲನೆ ಅಪ್ಪಳಿಸೋ ಅಲೆ.. ತಂಗಾಳಿಯ ಸ್ಪರ್ಶ.. ತಮ್ಮದೇ ಲೋಕದಲ್ಲಿ ತೇಲಾಡೋ ಬಾನಾಡಿಗಳು. ಒಮ್ಮೆ ದಡದಲ್ಲಿ, ಮತ್ತೊಮ್ಮೆ ನೀರಲ್ಲಿ, ಮಗದೊಮ್ಮೆ ಬಾನಲ್ಲಿ. ಎಲ್ಲೆಲ್ಲೂ ಈ ಚಿಲಿಪಿಲಿಗಳದ್ದೇ ಕಲರವ. ಪಕ್ಷಿಲೋಕದ್ದೇ ತುಂಟಾಟ. ಬಾನಾಡಿಗಳ ಕಲರವ ಜೋರು:  ಮೈಸೂರಿನ ಕಬಿನಿ ಜಲಾಶಯದ ಹಿನ್ನೀರಿನಲ್ಲೀಗ ಬಾನಾಡಿಗಳ ಕಲರವ ಜೋರಾಗಿದೆ. ಮೈಸೂರಿಗೆ ದೂರದ […]

ಕಬಿನಿ ಹಿನ್ನೀರಿನಲ್ಲಿ ವಿದೇಶಿ ಪಕ್ಷಿಗಳು ಕಲರವ: ಫಾರಿನ್ ಹಕ್ಕಿಗಳ ನೋಟವೇ ಬಲುಚೆಂದ
ಸಾಧು ಶ್ರೀನಾಥ್​
|

Updated on:Jan 19, 2020 | 1:34 PM

Share

ಮೈಸೂರು: ಕಬಿನಿ ಜಲಾಶಯದಲ್ಲೀಗ ಫಾರಿನ್ ಗೆಸ್ಟ್​ಗಳ ಮೋಡಿ ಜೋರಾಗಿದೆ. ತಿಳಿನೀರಲ್ಲಿ ಆಡ್ತಾ, ಬಾನಲ್ಲಿ ಹಾರಾಡ್ತಾ, ನೀರಲ್ಲಿ ಮುಳುಗೇಳ್ತಾ ಮಸ್ತಿ ಮಾಡ್ತಿದ್ದಾರೆ. ಅವ್ರ ಚೆಲ್ಲಾಟ ನೋಡೋಕಂತ್ಲೇ ಪ್ರವಾಸಿಗರು ಸಹ ಬರ್ತಿದ್ದಾರೆ. ತಿಳಿಗಾಳಿಗೆ ಮೆಲ್ಲನೆ ಅಪ್ಪಳಿಸೋ ಅಲೆ.. ತಂಗಾಳಿಯ ಸ್ಪರ್ಶ.. ತಮ್ಮದೇ ಲೋಕದಲ್ಲಿ ತೇಲಾಡೋ ಬಾನಾಡಿಗಳು. ಒಮ್ಮೆ ದಡದಲ್ಲಿ, ಮತ್ತೊಮ್ಮೆ ನೀರಲ್ಲಿ, ಮಗದೊಮ್ಮೆ ಬಾನಲ್ಲಿ. ಎಲ್ಲೆಲ್ಲೂ ಈ ಚಿಲಿಪಿಲಿಗಳದ್ದೇ ಕಲರವ. ಪಕ್ಷಿಲೋಕದ್ದೇ ತುಂಟಾಟ.

ಬಾನಾಡಿಗಳ ಕಲರವ ಜೋರು:  ಮೈಸೂರಿನ ಕಬಿನಿ ಜಲಾಶಯದ ಹಿನ್ನೀರಿನಲ್ಲೀಗ ಬಾನಾಡಿಗಳ ಕಲರವ ಜೋರಾಗಿದೆ. ಮೈಸೂರಿಗೆ ದೂರದ ಊರಿನಿಂದ ಬಂದಿರೋ ವಿದೇಶಿ ಪಕ್ಷಿಗಳು ತುಂಟಾಟ ಆಡ್ತಿವೆ. ವರ್ಷದ ಕೊನೆಯಲ್ಲಿ ಬರೋ ಈ ಬಾರ್‌ಹೆಡ್‌ ಗೊಸ್‌ ಪಕ್ಷಿಗಳು ಮೂರು ತಿಂಗಳ ಕಾಲ ಮೈಸೂರಿನಲ್ಲೇ ಬೀಡು ಬಿಟ್ಟಿರ್ತಾವೆ. ಅದರಲ್ಲು ಚಳಿಗಾಲದ ಸಂದರ್ಭದಲ್ಲಿ ಹೆಚ್.ಡಿ.ಕೋಟೆಯ ಬೀಚನಹಳ್ಳಿಯ ಕಬಿನಿ ಡ್ಯಾಂಗೆ ಲಗ್ಗೆ ಇಡುತ್ವೆ. ಅವುಗಳ ಎಂಟ್ರಿಯಿಂದ ಜಲಾಶಯದ ಅಂದವೇ ಹೆಚ್ಚಾಗಿದೆ.

ಪಕ್ಷಿಲೋಕದ ನೋಟವೇ ಬಲುಚೆಂದ: ಇನ್ನು ಈ ಬಾರ್ ಹೆಡ್ ಗೂಸ್ ಪಕ್ಷಿಗಳು ವಲಸೆ ಹಕ್ಕಿಗಳಾಗಿದ್ದು ನೇಪಾಳ, ಮಂಗೋಲಿಯಾ, ಸೈಬಿರಿಯಾ ದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಇವುಗಳು ಸಂತಾನೋತ್ಪತ್ತಿಗಾಗಿ ನದಿಗಳು ಹಾಗೂ ಜಲಾಶಯದ ಹಿನ್ನೀರನ್ನ ಆಯ್ಕೆ ಮಾಡಿಕೊಳ್ಳುತ್ತವೆ. ಮೂರ್ನಾಲ್ಕು ತಿಂಗಳು ಕಾಲ ವಲಸೆ ಬಂದು ಕಬಿನಿ ಡ್ಯಾಂ ಬಳಿಯೇ ಬೀಡು ಬಿಟ್ಟಿರುತ್ತವೆ. ಹೊಲ ಗದ್ದೆಗಳಲ್ಲಿ ಆಹಾರ ಸೇವಿಸಿ ಸಂತಾನೋತ್ಪತ್ತಿ ಮುಗಿಸಿ ವಾಪಸ್ಸಾಗುತ್ತವೆ. ಪಕ್ಷಿಲೋಕದ ನೋಟವೇ ಬಲುಚೆಂದ. ಅದ್ರಲ್ಲೂ ದೂರದೂರಿಂದ ಹಿಂಡು ಹಿಂಡಾಗಿ ಬರೋ ಈ ಪಕ್ಷಿಗಳು ನೋಡೋ ಕಂಗಳಿಗೆ ಖುಷಿ ಕೊಡುತ್ತವೆ. ಹಾಗೇ ಪ್ರಕೃತಿ ಅಂದವನ್ನ ಮತ್ತಷ್ಟು ಹೆಚ್ಚಿಸುತ್ತವೆ.

Published On - 1:33 pm, Sun, 19 January 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು