ಕಬಿನಿ ಹಿನ್ನೀರಿನಲ್ಲಿ ವಿದೇಶಿ ಪಕ್ಷಿಗಳು ಕಲರವ: ಫಾರಿನ್ ಹಕ್ಕಿಗಳ ನೋಟವೇ ಬಲುಚೆಂದ

ಮೈಸೂರು: ಕಬಿನಿ ಜಲಾಶಯದಲ್ಲೀಗ ಫಾರಿನ್ ಗೆಸ್ಟ್​ಗಳ ಮೋಡಿ ಜೋರಾಗಿದೆ. ತಿಳಿನೀರಲ್ಲಿ ಆಡ್ತಾ, ಬಾನಲ್ಲಿ ಹಾರಾಡ್ತಾ, ನೀರಲ್ಲಿ ಮುಳುಗೇಳ್ತಾ ಮಸ್ತಿ ಮಾಡ್ತಿದ್ದಾರೆ. ಅವ್ರ ಚೆಲ್ಲಾಟ ನೋಡೋಕಂತ್ಲೇ ಪ್ರವಾಸಿಗರು ಸಹ ಬರ್ತಿದ್ದಾರೆ. ತಿಳಿಗಾಳಿಗೆ ಮೆಲ್ಲನೆ ಅಪ್ಪಳಿಸೋ ಅಲೆ.. ತಂಗಾಳಿಯ ಸ್ಪರ್ಶ.. ತಮ್ಮದೇ ಲೋಕದಲ್ಲಿ ತೇಲಾಡೋ ಬಾನಾಡಿಗಳು. ಒಮ್ಮೆ ದಡದಲ್ಲಿ, ಮತ್ತೊಮ್ಮೆ ನೀರಲ್ಲಿ, ಮಗದೊಮ್ಮೆ ಬಾನಲ್ಲಿ. ಎಲ್ಲೆಲ್ಲೂ ಈ ಚಿಲಿಪಿಲಿಗಳದ್ದೇ ಕಲರವ. ಪಕ್ಷಿಲೋಕದ್ದೇ ತುಂಟಾಟ. ಬಾನಾಡಿಗಳ ಕಲರವ ಜೋರು:  ಮೈಸೂರಿನ ಕಬಿನಿ ಜಲಾಶಯದ ಹಿನ್ನೀರಿನಲ್ಲೀಗ ಬಾನಾಡಿಗಳ ಕಲರವ ಜೋರಾಗಿದೆ. ಮೈಸೂರಿಗೆ ದೂರದ […]

ಕಬಿನಿ ಹಿನ್ನೀರಿನಲ್ಲಿ ವಿದೇಶಿ ಪಕ್ಷಿಗಳು ಕಲರವ: ಫಾರಿನ್ ಹಕ್ಕಿಗಳ ನೋಟವೇ ಬಲುಚೆಂದ
ಸಾಧು ಶ್ರೀನಾಥ್​

Updated on: Jan 19, 2020 | 1:34 PM

ಮೈಸೂರು: ಕಬಿನಿ ಜಲಾಶಯದಲ್ಲೀಗ ಫಾರಿನ್ ಗೆಸ್ಟ್​ಗಳ ಮೋಡಿ ಜೋರಾಗಿದೆ. ತಿಳಿನೀರಲ್ಲಿ ಆಡ್ತಾ, ಬಾನಲ್ಲಿ ಹಾರಾಡ್ತಾ, ನೀರಲ್ಲಿ ಮುಳುಗೇಳ್ತಾ ಮಸ್ತಿ ಮಾಡ್ತಿದ್ದಾರೆ. ಅವ್ರ ಚೆಲ್ಲಾಟ ನೋಡೋಕಂತ್ಲೇ ಪ್ರವಾಸಿಗರು ಸಹ ಬರ್ತಿದ್ದಾರೆ. ತಿಳಿಗಾಳಿಗೆ ಮೆಲ್ಲನೆ ಅಪ್ಪಳಿಸೋ ಅಲೆ.. ತಂಗಾಳಿಯ ಸ್ಪರ್ಶ.. ತಮ್ಮದೇ ಲೋಕದಲ್ಲಿ ತೇಲಾಡೋ ಬಾನಾಡಿಗಳು. ಒಮ್ಮೆ ದಡದಲ್ಲಿ, ಮತ್ತೊಮ್ಮೆ ನೀರಲ್ಲಿ, ಮಗದೊಮ್ಮೆ ಬಾನಲ್ಲಿ. ಎಲ್ಲೆಲ್ಲೂ ಈ ಚಿಲಿಪಿಲಿಗಳದ್ದೇ ಕಲರವ. ಪಕ್ಷಿಲೋಕದ್ದೇ ತುಂಟಾಟ.

ಬಾನಾಡಿಗಳ ಕಲರವ ಜೋರು: 
ಮೈಸೂರಿನ ಕಬಿನಿ ಜಲಾಶಯದ ಹಿನ್ನೀರಿನಲ್ಲೀಗ ಬಾನಾಡಿಗಳ ಕಲರವ ಜೋರಾಗಿದೆ. ಮೈಸೂರಿಗೆ ದೂರದ ಊರಿನಿಂದ ಬಂದಿರೋ ವಿದೇಶಿ ಪಕ್ಷಿಗಳು ತುಂಟಾಟ ಆಡ್ತಿವೆ. ವರ್ಷದ ಕೊನೆಯಲ್ಲಿ ಬರೋ ಈ ಬಾರ್‌ಹೆಡ್‌ ಗೊಸ್‌ ಪಕ್ಷಿಗಳು ಮೂರು ತಿಂಗಳ ಕಾಲ ಮೈಸೂರಿನಲ್ಲೇ ಬೀಡು ಬಿಟ್ಟಿರ್ತಾವೆ. ಅದರಲ್ಲು ಚಳಿಗಾಲದ ಸಂದರ್ಭದಲ್ಲಿ ಹೆಚ್.ಡಿ.ಕೋಟೆಯ ಬೀಚನಹಳ್ಳಿಯ ಕಬಿನಿ ಡ್ಯಾಂಗೆ ಲಗ್ಗೆ ಇಡುತ್ವೆ. ಅವುಗಳ ಎಂಟ್ರಿಯಿಂದ ಜಲಾಶಯದ ಅಂದವೇ ಹೆಚ್ಚಾಗಿದೆ.

ಪಕ್ಷಿಲೋಕದ ನೋಟವೇ ಬಲುಚೆಂದ:
ಇನ್ನು ಈ ಬಾರ್ ಹೆಡ್ ಗೂಸ್ ಪಕ್ಷಿಗಳು ವಲಸೆ ಹಕ್ಕಿಗಳಾಗಿದ್ದು ನೇಪಾಳ, ಮಂಗೋಲಿಯಾ, ಸೈಬಿರಿಯಾ ದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಇವುಗಳು ಸಂತಾನೋತ್ಪತ್ತಿಗಾಗಿ ನದಿಗಳು ಹಾಗೂ ಜಲಾಶಯದ ಹಿನ್ನೀರನ್ನ ಆಯ್ಕೆ ಮಾಡಿಕೊಳ್ಳುತ್ತವೆ. ಮೂರ್ನಾಲ್ಕು ತಿಂಗಳು ಕಾಲ ವಲಸೆ ಬಂದು ಕಬಿನಿ ಡ್ಯಾಂ ಬಳಿಯೇ ಬೀಡು ಬಿಟ್ಟಿರುತ್ತವೆ. ಹೊಲ ಗದ್ದೆಗಳಲ್ಲಿ ಆಹಾರ ಸೇವಿಸಿ ಸಂತಾನೋತ್ಪತ್ತಿ ಮುಗಿಸಿ ವಾಪಸ್ಸಾಗುತ್ತವೆ. ಪಕ್ಷಿಲೋಕದ ನೋಟವೇ ಬಲುಚೆಂದ. ಅದ್ರಲ್ಲೂ ದೂರದೂರಿಂದ ಹಿಂಡು ಹಿಂಡಾಗಿ ಬರೋ ಈ ಪಕ್ಷಿಗಳು ನೋಡೋ ಕಂಗಳಿಗೆ ಖುಷಿ ಕೊಡುತ್ತವೆ. ಹಾಗೇ ಪ್ರಕೃತಿ ಅಂದವನ್ನ ಮತ್ತಷ್ಟು ಹೆಚ್ಚಿಸುತ್ತವೆ.








Published On - 1:33 pm, Sun, 19 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us