AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನಲೆಗಳ ನಡುವೆ ಫಾರಿನ್ ಅತಿಥಿಗಳು.. ಸಂಗಾತಿಗಳ ಜೊತೆಗೂಡಿ ಚೆಲ್ಲಾಟ!

ಗದಗ: ಅವ್ರೆಲ್ಲಾ ಫಾರಿನ್ ಅತಿಥಿಗಳು.. ವರ್ಷಕ್ಕೊಮ್ಮೆ ಈ ಕೆರೆಗೆ ಜಾಲಿ ಟ್ರಿಪ್ ಬರ್ತಾರೆ. ಸಂಗಾತಿಯೊಡಗೂಡಿ ಮಸ್ತಿ ಮಾಡ್ತಾರೆ. ತಾವು ಜಾಲಿ ಮಾಡೋದ್ರ ಜತೆಗೆ ಬಾನಂಗಳದಲ್ಲಿ ಚಿತ್ತಾರ ಮೂಡಿಸ್ತಾರೆ. ವಿಶೇಷ ಏನಂದ್ರೆ ಈಗ ಅವ್ರನ್ನ ನೋಡೋಕಂತಲೇ ನೂರಾರು ಜನ ಬರ್ತಾರೆ. ಬಾನಂಗಳದಲ್ಲಿ ಬಾನಾಡಿಗಳ ಚಿತ್ತಾರ: ವ್ಹಾವ್.. ತಮ್ಮದೇ ಲೋಕದಲ್ಲಿ ಹೀಗೆ ಸ್ವಚ್ಛಂದವಾಗಿ ವಿಹರಿಸ್ತಿರೋ ಪಕ್ಷಿಪ್ರಪಂಚವನ್ನ ನೋಡೋದೇ ಸುಂದರ. ಎಲ್ಲಿಂದಲೋ ಬಂದಿರೋ ಈ ಅಪರೂಪದ ಅತಿಥಿಗಳ ಆನಂದಕ್ಕಿಲ್ಲಿ ಪಾರವೇ ಇಲ್ಲ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೇರಿ ಗ್ರಾಮದ ಹೊರವಲಯದ […]

ನೀರಿನಲೆಗಳ ನಡುವೆ ಫಾರಿನ್ ಅತಿಥಿಗಳು.. ಸಂಗಾತಿಗಳ ಜೊತೆಗೂಡಿ ಚೆಲ್ಲಾಟ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 30, 2020 | 11:48 AM

Share

ಗದಗ: ಅವ್ರೆಲ್ಲಾ ಫಾರಿನ್ ಅತಿಥಿಗಳು.. ವರ್ಷಕ್ಕೊಮ್ಮೆ ಈ ಕೆರೆಗೆ ಜಾಲಿ ಟ್ರಿಪ್ ಬರ್ತಾರೆ. ಸಂಗಾತಿಯೊಡಗೂಡಿ ಮಸ್ತಿ ಮಾಡ್ತಾರೆ. ತಾವು ಜಾಲಿ ಮಾಡೋದ್ರ ಜತೆಗೆ ಬಾನಂಗಳದಲ್ಲಿ ಚಿತ್ತಾರ ಮೂಡಿಸ್ತಾರೆ. ವಿಶೇಷ ಏನಂದ್ರೆ ಈಗ ಅವ್ರನ್ನ ನೋಡೋಕಂತಲೇ ನೂರಾರು ಜನ ಬರ್ತಾರೆ.

ಬಾನಂಗಳದಲ್ಲಿ ಬಾನಾಡಿಗಳ ಚಿತ್ತಾರ: ವ್ಹಾವ್.. ತಮ್ಮದೇ ಲೋಕದಲ್ಲಿ ಹೀಗೆ ಸ್ವಚ್ಛಂದವಾಗಿ ವಿಹರಿಸ್ತಿರೋ ಪಕ್ಷಿಪ್ರಪಂಚವನ್ನ ನೋಡೋದೇ ಸುಂದರ. ಎಲ್ಲಿಂದಲೋ ಬಂದಿರೋ ಈ ಅಪರೂಪದ ಅತಿಥಿಗಳ ಆನಂದಕ್ಕಿಲ್ಲಿ ಪಾರವೇ ಇಲ್ಲ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೇರಿ ಗ್ರಾಮದ ಹೊರವಲಯದ ಕೆರೆಯಲ್ಲೀಗ ಈ ಬಾನಾಡಿಗಳದ್ದೇ ಕಲರವ. ಎರಡು ವರ್ಷಗಳ ಹಿಂದೆ ಜನ ಈ ಕೆರೆಯತ್ತ ಬರೋಕೆ ಹಿಂದೇಟು ಹಾಕ್ತಿದ್ರು. ಆದ್ರೆ, ವಿದೇಶಿ ಹಕ್ಕಿಗಳ ಕಲರವ ಜನ್ರು, ಪ್ರವಾಸಿಗರನ್ನು ಕೆರೆಯತ್ತ ಸುಳಿಯುವಂತೆ ಮಾಡಿದೆ. ಸತತ ಬರಗಾಲದಿಂದ ಕಂಗಾಲಾಗಿದ್ದ ಈ ಭಾಗದ ಜನ್ರಿಗೆ, ವಿದೇಶಿ ಹಕ್ಕಿಗಳ ಆಗಮನ ಖುಷಿ ನೀಡ್ತಿದೆ.

ನೀರಿನಲೆಗಳ ನಡುವೆ ಚಿಲಿಪಿಗಳ ಕಲರವ: ಇನ್ನು ಈ ಕೆರೆಯಲ್ಲಿ ಬಾರ್ ಹೆಡೆಡ್ ಗೂಸಾ, ಬ್ರಾಹ್ಮಿಣಿ ಡೆಕ್, ಬ್ಯ್ಲಾಕ್ ಐಬೀಸ್, ಇಟಲ್ ಗಿಬ್ಸ್, ರೆಡ್ ಥ್ರಾಟ್, ಪಾಂಟೆಡ್ ಸ್ಪಾರ್ಕ್, ರೆಡ್ ವೆಟೆಡ್ ಸೇರಿದಂತೆ ಹಲವು ಜಾತಿಗೆ ಸೇರಿದ ಸಾವಿರಾರು ವಿದೇಶಿ ಪಕ್ಷಿಗಳು ಆಗಮಿಸಿವೆ. ವಿಶೇಷ ಅಂದ್ರೆ ಈ ಹಕ್ಕಿಗಳು ಇಲ್ಲಿಗೆ ಬರೋದೇ ಸಂತಾನೋತ್ಪತ್ತಿಗೆಂದು. ಹೀಗಾಗಿ ಈ ಕೆರೆಯಲ್ಲಿ ಪುಟ್ಟ ಪುಟ್ಟ ಪಕ್ಷಿಗಳ ಸಂಖ್ಯೆಯೂ ಹೆಚ್ಚಾಗಿವೆ. ಇನ್ನೊಂದು ವಿಶೇಷ ಅಂದ್ರೆ ದೊಡ್ಡ ಹಕ್ಕಿಗಳು ಬೆಳಗ್ಗೆ ಆಗ್ತಿದ್ದಂತೆ ಆಹಾರ ಹರಸಿ ಹಾರಿ ಹೋದ್ರೆ ಸಂಜೆ ಬಳಿಕವೇ ವಾಪಸ್ ಬರ್ತಾವೆ. ದೊಡ್ಡ ಪಕ್ಷಿಗಳು ಮರಳಿದ ವೇಳೆ ಮರಿಗಳ ಚಿಲಿಪಿಲಿ ಜೋರಾಗಿರುತ್ತೆ.

ಇನ್ನು ಈ ಕೆರೆ 700ಎಕರೆ ವಿಶಾಲವಾಗಿದ್ದು, 10 ಸಾವಿರಕ್ಕೂ ಹೆಚ್ಚು ಪಕ್ಷಿಗಳು ಬೀಡು ಬಿಟ್ಟು ಎಂಜಾಯ್ ಮಾಡ್ತಿವೆ. ಸದ್ಯ ಬರಡಾಗಿದ್ದ ಕೆರೆ ತುಂಬಿದೆ. ಜನರೇ ಸುಳಿಯದ ಕೆರೆಯಲ್ಲಿ ಸಾವಿರಾರು ಪಕ್ಷಿಗಳ ನೋಟ ಎಲ್ಲರನ್ನೂ ಸೆಳೀತಿದೆ. ಎಲ್ಲಿಂದಲೋ ಬಂದಿರೋ ಬಾನಾಡಿಗಳು ತಮ್ಮದೇ ಲೋಕದಲ್ಲಿ ವಿಹರಿಸ್ತಿವೆ.

Published On - 11:43 am, Thu, 30 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ