ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?

Janardhan Reddy | ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?
ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದಾರೆ.
ಸಾಧು ಶ್ರೀನಾಥ್​

Updated on: Mar 02, 2021 | 10:02 AM

ಚಿತ್ರದುರ್ಗ: ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ. ಇದರಿಂದ ಜಿಲ್ಲೆಯ ಹಿರಿಯೂರು ವಿಧಾನಸಭೆ ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದೆ.  ವಾಣಿ ವಿಲಾಸಪುರ ಬಳಿಯ ಫಾರ್ಮ್ ಹೌಸ್ ನಲ್ಲಿ ಮುಖಂಡರನ್ನು ಭೇಟಿಯಾಗಿದ್ದಾರೆ. ಮೊನ್ನೆ ಭಾನುವಾರ ಸಂಜೆ ಮಂಜುನಾಥ್ ಎಂಬುವರ ಫಾರ್ಮ್ ಹೌಸ್ ಗೆ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. 

ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ.

ಈ ವೇಳೆ ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಹಾಗಾದರೆ ಹಿರಿಯೂರು ಕ್ಷೇತ್ರದ ಬಿಜೆಪಿ ಹಾಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಹಿರಿಯೂರಿನ ಮಾಜಿ ಶಾಸಕ ಡಿ. ಸುಧಾಕರ್ ಗೆ ಟಕ್ಕರ್ ಕೊಡಲು ರೆಡ್ಡಿ ಪ್ಲಾನ್ ಮಾಡಿದ್ದಾರಾ? ಎಂಬ ಗುಸುಗುಸು ಆರಂಭವಾಗಿದೆ. ಒಟ್ನಲ್ಲಿ, ಜನಾರ್ದನ ರೆಡ್ಡಿ ಹಿರಿಯೂರು ಭೇಟಿಯ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us